Thursday, June 19, 2025

Latest Posts

‘ಕೊತ್ತೂರು ಮಂಜುನಾಥ್‌ಗೆ ಮಾನ ಮರ್ಯಾದೆ ಇದ್ದರೆ ತಕ್ಷಣ ರಾಜೀನಾಮೆ ಕೊಡಬೇಕು’

- Advertisement -

Kolar News: ಕೋಲಾರ: ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಜಾತಿ ಪ್ರಮಾಣಪತ್ರ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊತ್ತೂರು ಮಂಜುನಾಥ್ ಶಾಸಕ ಸ್ಥಾನ ರದ್ದು ಮಾಡುವಂತೆ ಒತ್ತಾಯಿಸಲಾಗಿದೆ.

ಕರ್ನಾಟಕ ದಲಿತ ಸಂಘಟನೆಗಳ ಮಹಾ ಒಕ್ಕೂಟದವರು ಈ ಒತ್ತಾಯವನ್ನು ಮಾಡಿದ್ದು, ಸುದ್ದಿಗೋಷ್ಠಿ ನಡೆಸಿದ್ದಾರೆ.  ಎಸ್ ಸಿ ಮೀಸಲಾತಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಕೊತ್ತೂರು ಮಂಜುನಾಥ್ ಬೈರಾಗಿ ಜನಾಂಗಕ್ಕೆ ಸೇರಿದವರು. ಆದ್ರೆ ಬುಡ್ಗ ಜಂಗಮ‌ ಜಾತಿಗೆ ಸೇರಿದವರು ಎಂದು ನಕಲಿ ಜಾತಿ ಪ್ರಮಾಣ ಪತ್ರ ಮಾಡಿಸಿಕೊಂಡು, ಎಸ್ ಸಿ ಮೀಸಲಾತಿ ದುರ್ಬಳಕೆ ಮಾಡಿಕೊಂಡಿದ್ದಾರೆಂದು ಆರೋಪಿಸಲಾಗಿದೆ.

2013 ರಲ್ಲಿ ಮುಳಬಾಗಿಲು ಕ್ಷೇತ್ರದಲ್ಲಿ ಮೀಸಲಾತಿ ದುರುಪಯೋಗ ಪಡಿಸಿಕೊಂಡಿದ್ದಾರೆ. ಅಲ್ಲದೆ ದಲಿತರನ್ನು ಲೇಕರ್ ಶೂಗೆ ಹೋಲಿಸಿದ್ದರು. ಕೊತ್ತೂರು ಮಂಜುನಾಥ್‌ಗೆ ಮಾನ ಮರ್ಯಾದೆ ಇದ್ದರೆ ತಕ್ಷಣ ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಟ್ಟು ಮತ್ತೆ ಚುನಾವಣೆಗೆ ಬನ್ನಿ ಎಂದು ಕರ್ನಾಟಕ ದಲಿತ ಸಂಘಟನೆಗಳ ಮಹಾ ಒಕ್ಕೂಟದಿಂದ ಸವಾಲ್ ಹಾಕಲಾಗಿದೆ.

ಶಾಸಕ ಕೊತ್ತೂರು ಮಂಜುನಾಥ್ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು. ಹೈಕೋರ್ಟ್ ಸಹ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಿದೆ. ಹಾಗಾಗಿ ಸಿಎಂ ಸಿದ್ದರಾಮಯ್ಯ & ಗೃಹ ಸಚಿವ ಪರಮೇಶ್ವರ್ ಕ್ರಮ ಕೈಗೊಳ್ಳಬೇಕು. ಮುಂದಿನ ಚುನಾವಣೆಯಲ್ಲಿ ಕೊತ್ತೂರು ಮಂಜುನಾಥ್ ಗೆ ದಲಿತರು ಬೆಂಬಲ ನೀಡಲ್ಲ. ಸಂವಿಧಾನದ ಹೆಸರೇಳಿ ದಲಿತರ ಮೀಸಲಾತಿಯನ್ನು ಕಸಿದುಕೊಂಡಿದ್ದಾರೆ. ಹಾಗಾಗಿ ಶಾಸಕ ಕೊತ್ತೂರು ಮಂಜುನಾಥ್ ಗೆ ಶಾಸಕ ಸ್ಥಾನ ರದ್ದು ಮಾಡಬೇಕೆಂದು ಆಗ್ರಹಿಸಲಾಗಿದೆ.  ದಲಿತ ಮುಖಂಡರಾದ ಹೂವಳ್ಳಿ ಪ್ರಕಾಶ್ , ದಲಿತ್ ನಾರಾಯಣಸ್ವಾಮಿ ಇತರ ಮುಖಂಡರು ಕೋಲಾರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ನಡೆಸಿ ಈ ಆಗ್ರಹ ಮಾಡಿದ್ದಾರೆ.

ಆಫ್ರಿಕಾದ ಮಾಲಿಯಲ್ಲಿ ಚಿನ್ನದ ಗಣಿ ಕುಸಿತ: 70 ಮಂದಿ ಸಾವು

ಶೋಯೇಬ್ ಸನಾಗೂ ಡಿವೋರ್ಸ್ ಕೊಟ್ಟು ಇನ್ನೊಬ್ಬಳನ್ನು ಮದುವೆಯಾಗ್ತಾನೆ: ಬಾಂಗ್ಲಾ ಲೇಖಕಿಯ ಭವಿಷ್ಯ

ಬಿಜೆಪಿಗೆ ಜಗದೀಶ್ ಶೆಟ್ಟರ್ ಅನಿವಾರ್ಯತೆ ಇಲ್ಲ: ಶಾಸಕ ಮಹೇಶ ಟೆಂಗಿನಕಾಯಿ..!

- Advertisement -

Latest Posts

Don't Miss