ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ..? ಮತ್ತೆ ಅಧ್ಯಕ್ಷರಾಗ್ತಾರಾ ಡಿ.ಕೆ.ಶಿ..?!

Banglore News:

ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷ ರ ಆಯ್ಕೆ ಸಂಬಂಧ ಸಾಂಕೇತಿಕ ಚುನಾವಣೆ ನಡೆಯಲಿದೆ. ಮಧ್ಯಾಹ್ನ3.30 ಕ್ಕೆ ವಸಂತ ನಗರದ ಅಂಬೇಡ್ಕರ್ ಭವನದಲ್ಲಿ ಸಾಂಕೇತಿಕ ಚುನಾವಣೆ ಆಯೋಜನೆ ಮಾಡಲಾಗಿದೆ. ಯಾರು ನಾಮಪತ್ರ ಸಲ್ಲಿಸಿಲ್ಲ ಯಾರು ಸ್ರ‍್ಧಿಸಿಲ್ಲದ ಕಾರಣ ಮಧ್ಯಾಹ್ನ ಸಭೆ ಸೇರಿ ಒನ್ ಲೈನ್ ರೆಸ್ಯೂಲೂಷನ್ ಪಾಸ್ ಮಾಡುವ ಸಾಧ್ಯತೆ ಇದೆ.

ಶಾಸಕರು, ಪರಿಷತ್ ಸದಸ್ಯರು, ಕೆಪಿಸಿಸಿ ಸದಸ್ಯರು, ವಿವಿಧ ಘಟಕಗಳ ಅಧ್ಯಕ್ಷರು ಸೇರಿದಂತೆ 479 ಮತದಾರರು ಮತದಾನಕ್ಕೆ ಹಾಜರಾಗಿದ್ದಾರೆ. ಎಐಸಿಸಿಯು ನೀಡಿರುವ ಸಂದೇಶದ ಅನುಸಾರ ಒಂದೇ ಸಾಲಿನಲ್ಲಿ ನರ‍್ಣಯ ತೆಗೆದುಕೊಂಡು ಡಿ.ಕೆ.ಶಿವಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ಮುಂದುವರೆಸಲು ತರ‍್ಮಾನಿಸಲಾಗಿದೆ. ಡಿಕೆಶಿ ಅವಿರೋಧವಾಗಿ ಕೆಪಿಸಿಸಿ ಅಧ್ಯಕ್ಷರಾಗಿ ಪುನರ್ ಆಯ್ಕೆ ಮಾಡಲು ಈಗಾಗಲೇ ನಿರ್ಧರಿಸಲಾಗಿದೆ.

ಒಂದು ವೇಳೆ ಅನಿರೀಕ್ಷಿತ ಬೆಳವಣಿಗೆಗಳು ನಡೆದು ಬೇರೆ ಯಾರಾದರೂ ರ‍್ಧೆಗೆ ಆಸಕ್ತಿ ತೋರಿದರೆ ಮಾತ್ರ ಚುನಾವಣೆ ನಡೆಯಲಿದೆ. ಇಲ್ಲದಿದ್ದರೆ ಚುನಾವಣೆ ನಡೆಸದೆ ಅಧ್ಯಕ್ಷರ ಘೋಷಣೆ ಮಾಡಲಾಗುತ್ತದೆ ಎನ್ನಲಾಗಿದೆ.

ಬೇಸರಗೊಂಡಿದ್ಯಾಕೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ..?!

“ತಪ್ಪು ಮಾಡಿದರೆ ನಾವೇ ಹಗ್ಗ ಕಳುಹಿಸಿಕೊಡುತ್ತೇವೆ”: ಡಿ.ಕೆ.ಶಿ

ಬಳ್ಳಾರಿಯಲ್ಲಿ ವಿದ್ಯುತ್ ವ್ಯತ್ಯಯದಿಂದ ರೋಗಿಗಳ ಸಾವು: ಸದನ ಕಲಾಪದಲ್ಲಿ ವಿಚಾರ ಚರ್ಚೆ

About The Author