ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ದಲಿತ ನಾಯಕರು ಜಂಟಿ ಸುದ್ದಿಗೋಷ್ಠಿ ಮಾಡಿದ್ದು,ಜನವರಿ 8 ರಂದು ದಲಿತ ಐಕ್ಯತಾ ಸಮಾವೇಶವನ್ನು ಚಿತ್ರದುರ್ಗದಲ್ಲಿ ಆಯೋಜನೆ ಮಾಡಲು ನಿರ್ಧರಿಸಿದ್ಧಾರೆ. ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಮಾಡಿದ್ದಾರೆ. ಶೋಷಿತ ಸಮಾಜಗಳು ಕಾಂಗ್ರೆಸ್ಗೆ ಬೆಂಬಲ ನೀಡುತ್ತಾ ಬಂದಿವೆ. ಕಾಂಗ್ರೆಸ್ ದಲಿತರ ಕ್ಷೇಮಾಭಿವೃದ್ಧಿಗೆ ಯೋಜನೆ ಜಾರಿ ತಂದಿದೆ. ಬಡತನದಿಂದ ದಲಿತರನ್ನು ಹೊರತರಲು ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲಾಗಿದೆ. ಬೇರೆ ಪಕ್ಷಗಳು ದಲಿತರ ಮನವೊಲಿಕೆಗೆ ಯತ್ನಿಸುತ್ತಿದ್ದು,ದಲಿತರ ಯೋಗ ಕ್ಷೇಮವನ್ನು ಬೇರೆ ಪಕ್ಷಗಳು ಕೇಳಲಿಲ್ಲ. ಸಮಾಜವನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಆಗುತ್ತಿದೆ ಎಂದು ಹೇಳಿದ್ದಾರೆ.
ಮಂಡ್ಯದಲ್ಲಿಂದು ಗುತ್ತಲು ರಸ್ತೆ ಕಾಮಗಾರಿಗೆ ಚಾಲನೆ
ರಾಜ್ಯದ ಜನಸಂಖ್ಯೆಯಲ್ಲಿ 24% ದಲಿತ ಸಮಾಜದವರಿದು, ಮೀಸಲಾತಿ ನಮಗೆ ಭಿಕ್ಷೆ ಅಲ್ಲ, ಅದು ನಮ್ಮ ಹಕ್ಕು, ಮೀಸಲಾತಿ ಇರಬೇಕು ಅಥವಾ ಬೇಡ ಎಂದು ಚರ್ಚಿಸುವವರು ಇದ್ದಾರೆ. ಡಾ.ಅಂಬೇಡ್ಕರ್ 10 ವರ್ಷದವರೆಗೆ ಮೀಸಲಾತಿ ನೀಡಿದ್ದರು .ಎಲ್ಲ ಸರ್ಕಾರಗಳು ಮೀಸಲಾತಿ ಮುಂದುವರಿಸಿಕೊಂಡೇ ಬಂದಿವೆ. ಅಸ್ಪೃಶ್ಯತೆ ಜೀವಂತವಾಗಿ ಇರುವವರೆಗೂ ಮೀಸಲಾತಿ ಇರಲೇಬೇಕು ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಇದೆ ಸಂದರ್ಭದಲ್ಲಿ ದಲಿತ ಸಿಎಂ ಬಗ್ಗೆ ಮಾತನಾಡಿದ ಅವರು ಕಾಂಗ್ರೆಸ್ನಲ್ಲಿ ಸಿಎಂ ಹುದ್ದೆಗೆ ನಾವೆಲ್ಲರೂ ಅರ್ಹರಿದ್ದೇವೆ, ಮುಖ್ಯಮಂತ್ರಿ ಸ್ಥಾನದ ಬಗ್ಗೆ ಹೈಕಮಾಂಡ್ ಗಮನಕ್ಕೆ ತರುತ್ತೇವೆ. ರಾಷ್ಟ್ರೀಯ ಪಕ್ಷವಾಗಿ ಹೈಕಮಾಂಡ್ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದನ್ನು ಒಪ್ಪಿಕೊಳ್ಳುತ್ತೇವೆ. ನಾವು ಕಾಂಗ್ರೆಸ್ ಪಕ್ಷದ ನಿಯಮಗಳಿಗೆ ಬದ್ಧರಾಗಿದ್ದೇವೆ ಎಂದು ಹೇಳಿದರು.
ರೇಬೀಸ್ ಅಧಿಸೂಚಿತ ಕಾಯಿಲೆ ಎಂದು ಘೋಷಣೆ : ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್