ಕಾರ್ಮಿಕ ಸಚಿವ ಸಂತೋಷ್ ಲಾಡ್, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿಯೊಂದನ್ನು ಮನವಿ ಮಾಡಿದ್ದಾರೆ. ದೇಶದಲ್ಲಿ ಸಂವಿಧಾನಕ್ಕೆ 75ನೇ ವರ್ಷದ ಸಂಭ್ರಮಾಚರಣೆ ಹಾಗೆ ಬೆಳಗಾವಿಯಲ್ಲಿ ಕೈ ಅಧಿವೇಶನದ ಶತಮಾನೋತ್ಸವ.ಈ ಎರಡು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿಸಲು ಸಂತೋಷಗ ಲಾಡ್ ಅವರು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.ವಾರದ ಒಂದು ದಿನ ಖಾದಿ ಬಟ್ಟೆಯನ್ನು ಕಡ್ಡಾಯವಾಗಿ ಸರ್ಕಾರಿ ನೌಕರರು ಧರಿಸಲು ಸುತ್ತೋಲೆ ಹೊರಡಿಸುವಂತೆ, ಖುದ್ದು ಕಾರ್ಮಿಕ ಸಚಿವರೇ, ಸರ್ಕಾರಕ್ಕೆ ಮನವಿಯನ್ನು ಮಾಡಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದ ಅಕೌಂಟ್ ಮೂಲಕ, ಸಂತೋಷ್ ಲಾಡ್ ಅವರು ಪತ್ರ ಬರೆದಿದ್ದಾರೆ.
‘ಖಾದಿ ಎಂಬುದು ಕೇವಲ ಬಟ್ಟೆಯಲ್ಲ, ಅದೊಂದು ಜೀವನ ಪದ್ಧತಿ, ಸ್ವಾವಲಂಬಿ ಬದುಕಿನ ರೂಪಕ, ಖಾದಿ ತೊಟ್ಟವರಿಗೆ ಸತ್ಯ ಮತ್ತು ಅಹಿಂಸೆ ಕೂಡ ಒಂದು ವ್ರತ’
ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ಅಧಿಕಾರಿಗಳು, ನೌಕರರು, ನಿಗಮ ಮಂಡಳಿಯ ಅಧಿಕಾರಿಗಳು/ನೌಕರರಿಗೆ ಕೆಲಸದ ದಿನಗಳಲ್ಲಿ ವಾರದಲ್ಲಿ…
— Santosh Lad Official (@SantoshSLadINC) December 25, 2024
ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಮಾರಂಭ ಶುಕ್ರವಾರ ನಡೆಯಲಿದೆ.ಸುವರ್ಣ ಸೌಧದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಕಾಂಗ್ರೆಸ್ಸಿನ ಘಟಾನುಗಟಿ ನಾಯಕರು ಪಾಲ್ಗೊಳ್ಳಲಿದ್ದಾರೆ. ಮಹಾತ್ಮ ಗಾಂಧಿಯವರ ಪ್ರತಿಮೆ ಅನಾವರಣವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮಾಡಲಿದ್ದಾರೆ. ಈ ಅಧಿವೇಶನದ ವೇಳೆ, ಸಂತೋಷ್ ಲಾಡ್ ಮಾಡಿರುವ ಮನವಿಯನ್ನು ಕರ್ನಾಟಕ ಸರ್ಕಾರ ಪರಿಗಣಿಸುವ ಸಾಧ್ಯತೆಯಿದೆ. ಪ್ರಾಯಸಃ ಹೊಸ ವರ್ಷಾರಂಭದ ದಿನ ಅಥವಾ ಸಂಕ್ರಾಂತಿಯ ವೇಳೆ, ವಾರದ ಒಂದು ದಿನ ಖಾದಿ ಬಟ್ಟೆ ಹಾಕಿಕೊಂಡು ಬರುವುದನ್ನು ಕಡ್ಡಾಯ ಮಾಡುವ ಸಾಧ್ಯತೆಯಿದೆ. ಸಂತೋಷ್ ಲಾಡ್, ಸಿಎಂಗೆ ಬರೆದ ಪತ್ರದಲ್ಲಿ ಎನೀದೆ ಅಂತಾ ನೋಡೋದಾದ್ರೆ……
‘ಖಾದಿ ಎಂಬುದು ಕೇವಲ ಬಟ್ಟೆಯಲ್ಲ, ಅದೊಂದು ಜೀವನ ಪದ್ಧತಿ, ಸ್ವಾವಲಂಬಿ ಬದುಕಿನ ರೂಪಕ, ಖಾದಿ ತೊಟ್ಟವರಿಗೆ ಸತ್ಯ ಮತ್ತು ಅಹಿಂಸೆ ಕೂಡ ಒಂದು ವ್ರತ’ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್, ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. “ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ಅಧಿಕಾರಿಗಳು, ನೌಕರರು, ನಿಗಮ ಮಂಡಳಿಯ ಅಧಿಕಾರಿಗಳು/ನೌಕರರಿಗೆ ಕೆಲಸದ ದಿನಗಳಲ್ಲಿ ವಾರದಲ್ಲಿ ಕಡ್ಡಾಯವಾಗಿ ಒಂದು ದಿನ ಖಾದಿ ಬಟ್ಟೆಗಳನ್ನು ಧರಿಸಬೇಕೆನ್ನುವ ಆದೇಶವನ್ನು ಹೊರಡಿಸುವಂತೆ ಮಾನ್ಯ @CMofKarnataka ಶ್ರೀ @siddaramaiah ಅವರಿಗೆ ಮನವಿ ಮಾಡಿಕೊಂಡಿದ್ದೇನೆ” ಎಂದು ಸಂತೋಷ್ ಲಾಡ್ ಮನವಿ ಮಾಡಿದ್ದಾರೆ.
ಸಂತೋಷ್ ಲಾಡ್ ಅವರ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರತಿಕ್ರಿಯೆ ಇನ್ನಷ್ಟೇ ಬರಬೇಕಿದೆ. ಡಿಸೆಂಬರ್ 25ನೇ ತಾರೀಕಿಗೆ ಬರೆದಿರುವ ಪತ್ರ ಇದಾಗಿದೆ. ಈ ವಿಚಾರವನ್ನು ಕಾಂಗ್ರೆಸ್ ಸಮಾವೇಶದಲ್ಲಿ ಸಚಿವರು ಪ್ರಸ್ತಾವಿಸುವ ಸಾಧ್ಯತೆಯಿದೆ. ಜೊತೆಗೆ, ಕ್ಯಾಬಿನೆಟ್ ಮೀಟಿಂಗ್ ನಲ್ಲೂ ಚರ್ಚೆಗೂ ಬರಬಹುದು. ಬೆಳಗಾವಿ ಅಧಿವೇಶನದಲ್ಲಿ ಲೋಕಸಭೆಯಲ್ಲಿ ವಿಪಕ್ಷದ ನಾಯಕ ರಾಹುಲ್ ಗಾಂಧಿ ಕೂಡಾ ಭಾಗವಹಿಸಲಿದ್ದಾರೆ. ಗಾಂಧೀಜಿಯವರು ಅಧ್ಯಕ್ಷತೆ ವಹಿಸಿದ್ದ ಏಕೈಕ ಅಧಿವೇಶನ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಮುಖ ಪಾತ್ರವನ್ನು ವಹಿಸಿತ್ತು. ಇದರ ನೆನಪಿಗಾಗಿ ಕರ್ನಾಟಕ ಸರ್ಕಾರ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧೀಜಿಯವರ ಪ್ರತಿಮೆ ಅನಾವರಣಗೊಳಿಸಿ, ಗೌರವ ಸಲ್ಲಿಸಲಿದೆ.