Friday, June 20, 2025

Latest Posts

ಪೂಜಾರಿ ಮನೆಯಲ್ಲಿ ಲಕ್ಷಾಂತರ ರೂಪಾಯಿ ಕಳವು..!

- Advertisement -

www.karnatakatv.net :ಹುಬ್ಬಳ್ಳಿ: ಮನೆಯಲ್ಲಿ ಯಾರು ಇಲ್ಲದ್ದನ್ನ ಮನಗಂಡ ಕಳ್ಳರು, ಮನೆಯ ಬೀಗ ಮುರಿದು ಕನ್ನ ಹಾಕಿ ನಗದು ಹಾಗೂ ಆಭರಣಗಳನ್ನು ಕದ್ದು ಪರಾರಿಯಾಗಿರುವ ಘಟನೆ, ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ.

ಹೌದು,   ಗ್ರಾಮದ ಮಾರುತಿ ನಗರದ ನಿವಾಸಿ ಕಾಳಪ್ಪ ಬಡಿಗೇರ ಎಂಬುವವರ ಮನೆಯೇ ಕಳತನವಾಗಿದ್ದು, ಇವರು ಕಳೆದು ಎರಡು ದಿನಗಳಿಂದ ಬಸವಣ್ಣನ ದೇವಸ್ಥಾನದಲ್ಲಿ ವಾಸವಿದ್ದರು. ಈ ಎಲ್ಲಾ ವಿಚಾರ ತಿಳಿದುಕೊಂಡ ಕಳ್ಳರು, ಶನಿವಾರ ತಡರಾತ್ರಿ ಮನೆ  ಬೀಗ ಮುರಿದು ಮನೆಗೆ ನುಗ್ಗಿ, ಮನೆಯಲ್ಲಿದ್ದ ಹಣ, ಆಭರಣವನ್ನು ದೋಚಿಕೊಂಡು ಹೋಗಿದ್ದಾರೆ. ಇನ್ನು ಹಣ ಆಭರಣ ಕಳೆದುಕೊಂಡ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ. ಅದೇ ನಗರದಲ್ಲಿರುವ ಮಾರುತಿ ಮಂದಿರಕ್ಕೆ ಕನ್ನ ಹಾಕಲು ಯತ್ನಿಸಿದ ಕಳ್ಳರ ಪ್ರಯತ್ನ ವಿಫಲವಾಗಿದೆ.

ಇನ್ನು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗ್ರಾಮೀಣ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕ ಟಿವಿ- ಹುಬ್ಬಳ್ಳಿ

- Advertisement -

Latest Posts

Don't Miss