Udupi News : ಉಡುಪಿಯಲ್ಲಿ ಸ್ವಾತಂತ್ರ್ಯೋತ್ಸವ ಬಹಳ ಸಡಗರದಿಂದ ನಡೆಯಿತು. ಈ ವೇಳೆ ಕಿರು ಸ್ಮರಣಿಕೆ ಬಿಡುಗಡೆಗೊಳಿಸಲಾಯಿತು.
ಉಡುಪಿಯ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡುವಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ‘ಪ್ರಗತಿಪರ ಅಭಿವೃದ್ಧಿಗಾಗಿ ನುಡಿದಂತೆ ನಡೆದಿದ್ದೇವೆ’ ಎಂಬ ಹೆಸರಿನ ಕಿರು ಸ್ಮರಣಿಕೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಡುಗಡೆಗೊಳಿಸಿದರು.
ಈ ಸಮಯದಲ್ಲಿ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ಜಿಲ್ಲಾ ಪಂಚಾಯತ್ ಸಿಇಒ ಎಚ್. ಪ್ರಸನ್ನ, ಅಪರ ಜಿಲ್ಲಾಧಿಕಾರಿ ಮಮತಾ ಕೆ.ಜಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಉಪಸ್ಥಿತರಿದ್ದರು.
Lakshmi Hebbalkar : ಉಡುಪಿ: ವಿಶೇಷ ಚೇತನರಿಗೆ ದ್ವಿಚಕ್ರ ವಾಹನ, ಕಿಟ್ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್