Friday, June 20, 2025

Latest Posts

Lalu Prasad Yadav ಮೇವು ಹಗರಣದಲ್ಲಿ ದೋಷಿ ಎಂದು ತೀರ್ಪು..!

- Advertisement -

ಮೇವು ಹಗರಣಕ್ಕೆ (Fodder scam) ಸಂಬಂಧಿಸಿದಂತೆ RJD ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ (RJD chief Lalu Prasad Yadav) ದೋಷಿಯೆಂದು ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯ (Special CBI Court) ತೀರ್ಪು ನೀಡಿದೆ.ಮೇವು ಹಗರಣದ ಇತರ ನಾಲ್ಕು ಪ್ರಕರಣಗಳಲ್ಲಿ ಈಗಾಗಲೇ ಶಿಕ್ಷೆಗೊಳಗಾದ ಲಾಲೂ ಪ್ರಸಾದ್ ಯಾದವ್ ಐದನೇ ಮತ್ತು ಅಂತಿಮ ಪ್ರಕರಣದಲ್ಲಿ ಆರೋಪಿಯಾಗಿದ್ದರು. ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರಾಗಲು ನಿನ್ನೆ ರಾಂಚಿಗೆ ಆಗಮಿಸಿದ್ದರು. ಜನವರಿ 29ರಂದು ಲಾಲೂ ಪ್ರಸಾದ್ ಯಾದವ್ ಅವರು ಒಳಗೊಂಡಿರುವ 139.35 ಕೋಟಿ ರೂಪಾಯಿ ಡೊರಾಂಡಾ ಖಜಾನೆ ಅವ್ಯವಹಾರ ಪ್ರಕರಣದ ವಾದಗಳನ್ನು ಆಲಿಸಿದ ನ್ಯಾಯಾಲಯ ತನ್ನ ತೀರ್ಪನ್ನು ಕಾಯ್ದಿರಿಸಿತ್ತು.ಆರೋಪಿಗಳ ವಿರುದ್ಧ ಕಳೆದ ವರ್ಷ ಫೆಬ್ರವರಿಯಿಂದ ಕೈಗೊಂಡಿದ್ದ ವಿಚಾರಣೆಯನ್ನು ಇದೀಗ ಪೊರ್ಣಗೊಳಿಸಲಾಯಿತು.ಮೇವು ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಐದನೇ ಮತ್ತು ಅಂತಿಮ ತೀರ್ಪು ನೀಡಿದ ರಾಂಚಿ ವಿಶೇಷ ಸಿಬಿಐ ನ್ಯಾಯಾಲಯ ಇತರ 75 ಆರೋಪಿಗಳೊಂದಿಗೆ ಅವರನ್ನು ದೋಷಿ ಎಂದು ತೀರ್ಪು ನೀಡಿದೆ. ಸಿಬಿಐ ವಿಶೇಷ ನ್ಯಾಯಾಧೀಶ ಎಸ್‌ಕೆ ಶಶಿ (CBI Special Judge SK Shashi) ಅವರು 6 ಮಹಿಳೆಯರು ಸೇರಿದಂತೆ 24 ಆರೋಪಿಗಳನ್ನು ಸಾಕಷ್ಟು ಸಾಕ್ಷ್ಯಾಧಾರಗಳಿಲ್ಲದ ಕಾರಣ ಖುಲಾಸೆಗೊಳಿಸಿದ್ದಾರೆ.ಲಾಲೂ ಪ್ರಸಾದ್ ಯಾದವ್ ಅವರಿಗೆ ಶಿಕ್ಷೆಯ ಪ್ರಮಾಣವನ್ನು ಫೆಬ್ರವರಿ 18 ರಂದು ಘೋಷಿಸಲಾಗುವುದು ಎಂದು ನ್ಯಾಯಾಲಯ ಇಂದು ತೀರ್ಪು ವೇಳೆ ಪ್ರಕಟಿಸಿದೆ.

- Advertisement -

Latest Posts

Don't Miss