Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ವಿಪ ಸದಸ್ಯ ಪ್ರದೀಪ್ ಶೆಟ್ಟರ್ ಆರೋಪಿಸಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ಮೂರು ದಿನಗಳಲ್ಲಿ 8 ಕೊಲೆಗಳಾಗಿವೆ. ಇಂತಹ ಘಟನೆಗಳಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಕಾಲೇಜಿಗೆ ತೆರಳಿದ್ದ ವಿದ್ಯಾರ್ಥಿನಿಯನ್ನು ಹಾಡುಹಗಲೇ ಕೊಲೆಯಾಗಿದೆ. ಇದರಿಂದ ಮಕ್ಕಳು ಕಾಲೇಜಿಗೆ ಹೋಗಲು ಭಯಪಡುವ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದರು.
ಕೊಲೆ ಮಾಡಿದ ಆರೋಪಿ ಮನುಷ್ಯ ಇದ್ದಾನೋ ಅಥವಾ ಮೃಗ ಇದ್ದಾನೋ? ಎಂಬ ಅನುಮಾನ ಕಾಡುತ್ತಿದೆ. ಪ್ರೀತಿ ನಿರಾಕರಿಸಿದಕ್ಕೆ ಈ ರೀತಿಯ ಹತ್ಯೆ ಮಾಡುವುದು ಎಷ್ಟು ಸರಿ. ಇದು ದೊಡ್ಡ ಅಪರಾಧ, ಅವನು ಜಿಹಾದಿ ಮನಸ್ಥಿತಿ ಉಳ್ಳವನಾಗಿದ್ದು, ಆರೋಪಿಗೆ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯಿಸಿದರು.
ತನಿಖೆಯಲ್ಲಿ ಲೋಪದೋಷಗಳಾಗುತ್ತಿವೆ. ಈ ಕುರಿತು ಬಿಜೆಪಿ ಸರ್ಕಾರ ಗಟ್ಟಿ ನಿಲುವು ತಾಳಿದ್ದು, ಶುಕ್ರವಾರ ರಾತ್ರಿ ಕೇಂದ್ರ ಸಚಿವರು, ರಾಜ್ಯದ ಬಿಜೆಪಿ ಶಾಸಕರು, ರಾಜ್ಯಾಧ್ಯಕ್ಷರು ಸೇರಿದಂತೆ ಪಕ್ಷದ ಮುಖಂಡರ ಜೊತೆಗೆ ವರ್ಚುವಲ್ ಸಭೆ ಮಾಡಿ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ ಆಗುತ್ತಿದೆ. ಈ ಕುರಿತು ಎಲ್ಲರೂ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ. ಮುಂದಿನ ಎರಡು – ಮೂರು ದಿನಗಳಲ್ಲಿ ರಾಜ್ಯಾಧ್ಯಕ್ಷರು ಕೇಂದ್ರದ ಗೃಹ ಸಚಿವರೊಂದಿಗೆ ಮಾತನಾಡಿ, ಸೂಕ್ತ ನಿರ್ಣಯ ಕೈಗೊಳ್ಳುತ್ತಾರೆ ಎಂದರು.
ನೇಹಾ ತುಂಬಾ ಒಳ್ಳೆಯ ಹುಡುಗಿ : ಅವಳೇ ಮೊದಲು ಪ್ರಪೋಸ್ ಮಾಡಿದ್ದು: ಫಯಾಜ್ ತಾಯಿ ಮುಮ್ತಾಜ್
ನನ್ನ ಮಗಳ ಆತ್ಮಕ್ಕೆ ಶಾಂತಿ ಕೊಡಿಸುವ ಶಕ್ತಿ ಬೇರೆ ಯಾರ ಬಳಿ ಇಲ್ಲ, ನೀವೇ ಸಹಾಯ ಮಾಡಿ: ಜೋಶಿ ಬಳಿ ನೇಹಾ ತಂದೆ ಮನವಿ
ನೇಹಾ ಹ* ಕೇಸ್: ಫಯಾಜ್ ರುಂ*ಡ ಚೆಂಡಾಡಿದವರಿಗೆ 10 ಲಕ್ಷ ರೂ. ಬಹುಮಾನ ಘೋಷಣೆ