Laxmi hebbalkar: ಜನರು‌ ಅನುಭವಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕು..!

ಉಡುಪಿ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ, ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ಮುಂಚೂಣಿ ಘಟಕಗಳ ಅಧ್ಯಕ್ಷರ ಸಭೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭಾಗವಹಿಸಿದ್ದರು .

ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಮತ್ತಷ್ಟು ಜನಪ್ರಿಯಗೊಳಿಸುವುದು, ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಚುನಾವಣೆಯ ಬಗ್ಗೆ ಚರ್ಚೆ ನಡೆಸಲಾಗಿದ್ದು ಈ ಸಮಯದಲ್ಲಿ ಜಿಲ್ಲೆಯ ಜನರು‌ ಅನುಭವಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕೆಂದು ಕಾರ್ಯಕರ್ತರು ಮನವಿ ಮಾಡಿಕೊಂಡರು.

ಸಭೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವ ವಿಜಯ್ ಕುಮಾರ್ ಸೊರಕೆ, ಮಾಜಿ ಶಾಸಕರಾದ ಗೋಪಾಲ್ ಪೂಜಾರಿ, ಮುಖಂಡರಾದ ಉದಯಕುಮಾರ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Dasara Fest : ಸರಳವಾಗಿ ಮೈಸೂರು ದಸರಾ ಮಾಡುತ್ತಂತೆ ಸರ್ಕಾರ..!

Cauvery water: ರಸ್ತೆಯಲ್ಲಿ ಟೀ ಮಾಡಿ ಪ್ರತಿಭಟನೆ: ಸ್ವಯಂ ಪ್ರೇರಿತವಾಗಿ ಬಂದ್ ಗೆ ಬೆಂಬಲ;

Joshi: ಚೈತ್ರಾ ಕುಂದಾಪುರಗೆ ಗರಿಷ್ಠ ಶಿಕ್ಷೆಯಾಗಬೇಕು: ಪ್ರಹ್ಲಾದ್ ಜೋಶಿ..!

 

About The Author