- Advertisement -
www.karnatakatv.net: ಸ್ಯಾಂಡಲ್ ವುಡ್ ನಟ ಪುನೀತ್ ಇಹಲೋಕ ತ್ಯಜಿಸಿದ ಹಿನ್ನೆಯಲ್ಲಿ ಇಂದು ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಪ್ರಕಟಣೆ ಹೊರಡಿಸಿದ್ದಾರೆ. ಪುನೀತ್ ರಾಜ್ ಕುಮಾರ್ ಅಗಲಿಕೆ ಹಿನ್ನೆಲೆಯಲ್ಲಿ ಶೋಕಾಚರಣೆ ನಿಮಿತ್ತ ಖಾಸಗಿ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ ಎಂದು ರುಪ್ಸಾ ಒಕ್ಕೂಟ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಮಾಹಿತಿ ನೀಡಿದ್ದಾರೆ. ಆದರೆ, ಸರ್ಕಾರಿ ಶಾಲೆ ರಜೆ ಕುರಿತು ಇನ್ನೂ ಯಾವುದೇ ತೀರ್ಮಾನವಾಗಿಲ್ಲ. ಪುನೀತ್, ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಪುನೀತ್ ನಿಧನಕ್ಕೆ ನಾಡು ಅಪಾರ ಶೋಕದಲ್ಲಿ ಮುಳುಗಿದ್ದು, ಸಂತಾಪ ಸೂಚಿಸುತ್ತಿದೆ.
- Advertisement -