Saturday, July 27, 2024

Latest Posts

ವಿಧಾನಸಭೆ ಸೋಲನ್ನ ಬದಿಗಿಡೋಣ.. ಲೋಕಸಭೆಯಲ್ಲಿ Modi ಗೆಲ್ಲಿಸೋಣ: ಬಿ.ವೈ.ವಿಜಯೇಂದ್ರ

- Advertisement -

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರ್ನಾಟಕ ಟಿವಿ ನಡೆಸಿದ ಸಂದರ್ಶನದಲ್ಲಿ ಭಾಗವಹಿಸಿದ್ದು, ಲೋಕಸಭೆ ಚುನಾವಣೆಯಲ್ಲಿ ಮೋದಿಯವರನ್ನು ಮತ್ತೊಮ್ಮೆ ಗೆಲ್ಲಿಸುವ ಬಗ್ಗೆ ಮಾತನಾಡಿದ್ದಾರೆ.

ಬಿಜೆಪಿ ಕಾರ್ಯಕರ್ತರು ಉತ್ಸಾಹದಲ್ಲಿದ್ದಾರೆ ಅನ್ನೋದು ನೂರಕ್ಕೆ ನೂರು ಸತ್ಯ. ಅದನ್ನು ಅಲ್ಲಗಳೆಯುವುದಿಲ್ಲ. ಆದರೆ ಈಗ ಕಾರ್ಯಕರ್ತರಲ್ಲಿ ಮನವಿ ಮಾಡುವುದೇನೆಂದರೆ, ಕಳೆದ ವಿಧಾನಸಭೆ ಚುನಾವಣೆಯ ಸೋಲನ್ನು ಬದಿಗಿಟ್ಟು, ಈ ಲೋಕಸಭೆ ಚುನಾವಣೆ ದೇಶದ ಭವಿಷ್ಯ ರೂಪಿಸುವಂಥ ಚುನಾವಣೆ. ನರೇಂದ್ರ ಮೋದಿಜಿಯವರ ಕೈ ಬಲಪಡಿಸುವಂಥ ಚುನಾವಣೆ. ಇದನ್ನು ನಾವು ಪ್ರತಿಯೊಬ್ಬರು ಅರ್ಥ ಮಾಡಿಕೊಂಡು, ನಮ್ಮ ಕೇಂದ್ರ ಸರ್ಕಾರದ ಯೋಜನೆಗಳನ್ನು, ಮೋದಿಜಿಯವರ ಚಿಂತನೆಗಳನ್ನು ಮನೆ ಮನೆಗೆ ಮುಟ್ಟಿಸುವಂಥ ಕೆಲಸವನ್ನು ತುಂಬ ಯಶಸ್ವಿಯಾಗ ಮಾಡಬೇಕಾಗುತ್ತದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ನಮ್ಮ ರಾಷ್ಟ್ರೀಯ ಅಧ್ಯಕ್ಷರು ಹೇಳುತ್ತಾರೆ. ಮೇರಾ ಬೂತ್ ಸಬ್‌ಸೇ ಮಜ್‌ಬೂತ್ ಅಂತಾರೆ. ಅಂದ್ರೆ ನನ್ನ ಬೂತ್ ಗೆದ್ದರೆ, ಇಡೀ ಕ್ಷೇತ್ರವನ್ನು ಗೆದ್ದಂತೆ. ಇದನ್ನು ಅರ್ಥ ಮಾಡಿಕೊಂಡು ಈಗಾಗಲೇ ನಮ್ಮ ಕಾರ್ಯಕರ್ತರು ಕೆಳ ಹಂತದ ಕೆಲಸಗಳನ್ನು ಮಾಡುತ್ತಿದ್ದಾರೆ. ಚುನಾವಣೆಗೆ ಪ್ರತಿಯೊಬ್ಬರನ್ನು ಮತಗಟ್ಟೆಗೆ ಕರೆದುಕೊಂಡು ಬಂದು, ಮತದಾನ ಮಾಡಿಸಬೇಕು. ಮತದಾನ ಮುಗಿಯುವವರೆಗೂ ನಮ್ಮ ಕರ್ತವ್ಯವನ್ನು ನಾವು ಮರೆಯಬಾರದು ಅಂತಾ ವಿಜಯೇಂದ್ರ ಹೇಳಿದ್ದಾರೆ.

ಅಲ್ಲದೇ, ಮತದಾರರು ಕೊಡುವ ಒಂದೊಂದು ಮತ, ಓರ್ವ ಸಂಸದನ ಆಯ್ಕೆಗೆ ಕಾರಣವಾಗುತ್ತದೆ. ಮತ್ತು ಓರ್ವ ಸಂಸದ ದೇಶದ ಭವಿಷ್ಯವನ್ನು ರೂಪಿಸುವಂಥವರು. ಕಾಂಗ್ರೆಸ್ ಪಕ್ಷಕ್ಕೆ ಓಟ್ ಕೊಟ್ಟು ವೇಸ್ಟ್ ಮಾಡಿಕೊಳ್ಳುವುದಕ್ಕಿಂತ ಹೆಚ್ಚಾಗಿ, ಈ ದೇಶದ ಅಭಿವೃದ್ಧಿ ದೃಷ್ಟಿಯಿಂದ ನರೇಂದ್ರ ಮೋದಿಯವರನ್ನು ಬೆಂಬಲಿಸಬೇಕು ಎಂದು ವಿಜಯೇಂದ್ರ ಮತದಾರರಲ್ಲಿ ಮನವಿ ಮಾಡಿದ್ದಾರೆ.

ಕಾಂಗ್ರೆಸ್ 28 ಸ್ಥಾನ ಸೋತರೆ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಖುಷಿ: ಬಿ.ವೈ.ವಿಜಯೇಂದ್ರ

ಆರೋಪಿಯ ರಕ್ಷಣೆ ಮಾಡುವ ಪ್ರಯತ್ನ ನಡೆಯುತ್ತಿರುವುದು ಖಂಡನೀಯ: ಸಂಸದೆ ಸುಮಲತಾ ಅಂಬರೀಷ್

ಒಕ್ಕಲಿಗ ಸಮುದಾಯದ ನಾಯಕರಿಗೆ ಅತಿ ಹೆಚ್ಚು ಅನ್ಯಾಯ ಆಗಿರುವುದು ಬಿಜೆಪಿ, ಜೆಡಿಎಸ್‌ನಿಂದಲೇ: ಸಿಎಂ

- Advertisement -

Latest Posts

Don't Miss