ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವು ಪ್ರಕರಣದ ತನಿಖೆ ನಡೆಯುತ್ತಿದೆ. ಮತ್ತೊಂದೆಡೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ, ರಾಜ್ಯದ ಮಹಿಳಾ ಸಂಘಟನೆಗಳು ಪತ್ರ ಬರೆದಿವೆ. ಕೊಂದವರು ಯಾರು ಎಂಬ ಶೀರ್ಷಿಕೆಯಡಿ, ಪತ್ರ ಬರೆದಿದ್ದಾರೆ. ಈ ವೇಳೆ ಕೆಲವು ಕಾಂಗ್ರೆಸ್ ನಾಯಕರ ವಿರುದ್ಧವೂ ಆಕ್ರೋಶ ಹೊರಹಾಕಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಜುಲೈ 2025ರಲ್ಲಿ ಮಹಿಳಾ ಆಯೋಗದ ಅಧ್ಯಕ್ಷರು ಸಿಎಂಗೆ ಪತ್ರ ಬರೆದಿದ್ದರು. ಧರ್ಮಸ್ಥಳದಲ್ಲಿ ನಡೆದಿದ್ದ ಅಸಹಜ ಸಾವು, ಲೈಂಗಿಕ ದೌರ್ಜನ್ಯಗಳ ಬಗ್ಗೆ SIT ರಚಿಸಿ ಎಂದು ಪತ್ರ ಬರೆಯಲಾಗಿತ್ತು. ಮಾಧ್ಯಮಗಳಲ್ಲಿ ಮತ್ತು ಸ್ಥಳೀಯ ಸಾಮಾಜಿಕ ಹೋರಾಟಗಾರರು ಹೇಳುವಂತೆ, ಸಾಕಷ್ಟು ದೌರ್ಜನ್ಯ ನಡೆದಿತ್ತು. 2012ರ ಸೌಜನ್ಯ ಕೇಸ್, 1986ರ ಪದ್ಮಲತಾ ಕೇಸ್, 1979ರ ವೇದವಲ್ಲಿ ಪ್ರಕರಣ ಇವುಗಳಲ್ಲಿ ಪ್ರಮುಖವಾದದ್ದು.
RTI ದಾಖಲೆ ಅನ್ವಯ 2001-2012ರ ನಡುವೆ ಉಜಿರೆ ಮತ್ತು ಧರ್ಮಸ್ಥಳದಲ್ಲಿ 424 ಸಾವುಗಳು ಸಂಭವಿಸಿವೆ. ಸೌಜನ್ಯ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಿದರೂ, ನಿಜವಾದ ಆರೋಪಿಗಳನ್ನು ಪತ್ತೆ ಹಚ್ಚಲು ಇದುವರೆಗೆ ಸಾಧ್ಯವಾಗಿಲ್ಲ. ಜುಲೈ ತಿಂಗಳ ಆರಂಭದಲ್ಲಿ ಧರ್ಮಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ, ಹಲವು ಸಾವುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ತೋರಿಸುವುದಾಗಿ ಮಾಧ್ಯಮಗಳ ಮುಂದೆ ಬಂದಿದ್ದ.ಮಾಧ್ಯಮಗಳು ಹಾಗೂ ಕೆಲವು ರಾಜಕೀಯ ಮುಖಂಡರು ಇದರ ಲಾಭವನ್ನು ಪಡೆದುಕೊಂಡಿದ್ದಾರೆ. ಸುಜಾತಭಟ್ಗೆ ರಕ್ಷಣೆ ಕೊಡಬೇಕಾಗಿತ್ತು ಕೊಟ್ಟಿಲ್ಲ. ತನಿಖೆ ನಡೆಯುತ್ತಿರುವಾಗಲೇ ಹಲವು ತಿರುವುಗಳನ್ನು ಪಡೆದುಕೊಂಡಿದ್ದು, ದೂರುದಾರರನ್ನೇ ಅರೆಸ್ಟ್ ಮಾಡಲಾಯಿತು.
ಬಿಜೆಪಿ ಇದನ್ನು ಧರ್ಮಯುದ್ಧ ಎಂದು ಬಿಂಬಿಸುತ್ತಿದೆ. SIT ತನಿಖೆ ನಡೆಯುತ್ತಿರುವಾಗಲೇ ಕೆಲವು ಕಾಂಗ್ರೆಸ್ ನಾಯಕರೂ ಹೇಳಿಕೆಗಳನ್ನು ಕೊಡುವುದು ಕಂಡು ಬರುತ್ತಿದೆ. ಹೀಗಾಗಿ 2018ರ ಉಗ್ರಪ್ಪ ವರದಿಯನ್ನು SIt ತನಿಖೆಯಲ್ಲಿ ಪರಿಗಣಿಸಬೇಕು. ಈ ಪ್ರಕರಣದ ಸಂತ್ರಸ್ತರಿಗೆ ನ್ಯಾಯ ಸಿಗಬೇಕು. ಕಾಂಗ್ರೆಸ್ ನಾಯಕರು SIT ತನಿಖೆಯ ವಿರುದ್ಧ ಹೇಳಿಕೆಗಳನ್ನು ಕೊಡಬಾರದು. ಸೌಜನ್ಯ ಪ್ರಕರಣದ ತನಿಖೆ ನಡೆಸಿದ ಅಧಿಕಾರಿಗಳನ್ನೂ ತನಿಖೆ ನಡೆಸಬೇಕು ಎಂದು ಒತ್ತಾಯಿಸಲಾಗಿದೆ.