Hubli News: ಹುಬ್ಬಳ್ಳಿ: ಕಾಂಗ್ರೆಸ್ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಕೊನೆಗೂ ಅಳೆದು ತೂಗಿ ಓಬಿಸಿ ಅಭ್ಯರ್ಥಿಗೆ ಮನ್ನಣೆ ನೀಡಿದೆ. ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ವಿನೋದ ಅಸೂಟಿಗೆ ಕೊನೆಗೂ ಧಾರವಾಡ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಿದೆ.
ಇವರು 2019 ವಿಧಾನಸಭೆ ಚುನಾವಣೆಯಲ್ಲಿ ಶಂಕರ ಪಾಟೀಲ ಮುನೇನಕೊಪ್ಪ ವಿರುದ್ಧ ನವಲಗುಂದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. 2023 ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ಗೆ ಬಂದ ಎನ್.ಎಚ್. ಕೋನರಡ್ಡಿ ಅವರಿಗೆ ಕ್ಷೇತ್ರ ಬಿಟ್ಟುಕೊಟ್ಟು, ಅವರ ಗೆಲುವಿಗೆ ಶ್ರಮಿಸಿದ್ದರು. ಇದೇ ಕಾರಣಕ್ಕಾಗಿ ಇತ್ತೀಚೆಗೆ ರಾಜ್ಯ ಸರ್ಕಾರ ಅವರನ್ನು ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿತ್ತು.
ಕ್ಷೇತ್ರದ ಇನ್ನೊಬ್ಬ ಲೋಕಸಭಾ ಟಿಕೆಟ್ ಆಕಾಂಕ್ಷಿಯಾಗಿದ್ದ ರಜತ್ ಉಳ್ಳಾಗಡ್ಡಿಮಠ ಅವರು ಟಿಕೆಟ್ ಗಾಗಿ ಬಾರಿಲಾಭಿ ನಡೆಸಿದ್ದರು. ಇವರ ಜೊತೆಗೆ ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ, ಲೋಹಿತ್ ನಾಯ್ಕರ್, ಮಾಜಿ ಸಚಿವ ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ ಅವರ ಹೆಸರುಗಳು ಕೇಳಿ ಬಂದಿದ್ದವು.
ಆದರೆ, ಈ ಕ್ಷೇತ್ರವನ್ನು ಓಬಿಸಿ ಕೋಟಾಕ್ಕೆ ನೀಡಬೇಕು ಎಂಬ ಚರ್ಚೆ ಬಂದ ಮೇಲೆ ಮಾಜಿ ಸಂಸದ ದಿ. ಡಿ.ಕೆ.ನಾಯ್ಕರ ಅವರ ಪುತ್ರ ಲೋಹಿತ್ ನಾಯ್ಕರ ಹಾಗೂ ವಿನೋದ ಅಸೂಟಿ ಅವರ ಹೆಸರು ಮುಂಚೂಣಿಗೆ ಬಂದಿದ್ದವು. ಆದ್ರೆ ಇವರಿಬ್ಬರಲ್ಲಿ ವಿನೋದ ಅಸೂಟಿ ಲೋಕಸಭಾ ಟಿಕೆಟ್ ಗಿಟ್ಟಿಸಿಕೊಂಡಿದ್ದು, ಬಿಜೆಪಿಯಿಂದ ನಾಲ್ಕು ಬಾರಿ ಜಯಗಳಿಸಿದ ಪ್ರಹ್ಲಾದ್ ಜೋಶಿಯವರ ವಿರುದ್ಧ ಸ್ಪರ್ಧಿಸಲಿದ್ದಾರೆ.
ಕಾಂಗ್ರೆಸ್ ಮೂರನೇ ಪಟ್ಟಿ ರಿಲೀಸ್, ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ
ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ಸೌತ್ ಆಫ್ರಿಕಾ ಕ್ರಿಕೇಟಿಗ ಕೇಶವ್ ಮಹಾರಾಜ್