Friday, June 20, 2025

Latest Posts

‘ರಾತ್ರಿ ಎಲ್ಲಾ ಮಟನ್ ತಿಂತಾರೆ, ಬೆಳಿಗ್ಗೆ ಎದ್ದು ಮಾಂಸಾಹಾರಿಗಳಿಗೆ ಬೈತಾರೆ’

- Advertisement -

ಕಲಬುರಗಿ: ಕಾಂಗ್ರೆಸ್ ವಿಧಾನಸಭೆ ಚುನಾವಣೆ ಪ್ರಚಾರ ಶುರುವಾಗುತ್ತಿದ್ದಂತೆ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸುತ್ತಿದ್ದಾರೆ. ಆ ಭರದಲ್ಲಿ ಕೆಲ ವಿವಾದಾತ್ಮಕ ಹೇಳಿಕೆಗಳನ್ನು ಕೊಟ್ಟಿದ್ದಾರೆ. ಮೊನ್ನೆ ತಾನೇ ಮೋದಿಯನ್ನು ವಿಷಸರ್ಪ ಎಂದಿದ್ದ ಖರ್ಗೆ,  ಇಂದು ಬಿಜೆಪಿಗರ ವಿರುದ್ಧ ಮತ್ತೊಂದು ಹೇಳಿಕೆ ಕೊಟ್ಟಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಖರ್ಗೆ, ರಾತ್ರಿ ಎಲ್ಲರೂ ಮಟನ್ ತಿಂತೀರಿ. ಹಗಲೊತ್ತು ಮಾಂಸಾಹಾರಿಗಳಿಗೆ ಬೈಯುತ್ತೀರಿ ಎಂದು ಬಿಜೆಪಿಗರ ವಿರುದ್ಧ ಹರಿಹಾಯ್ದಿದ್ದಾರೆ. ಅಲ್ಲದೇ ಬರೀ ಜಗಳ ಹಚ್ಚಿಯೇ ವೋಟ್ ತೆಗೆದುಕೊಳ್ಳುವುದು ಉತ್ತಮವಲ್ಲ ಎಂದಿದ್ದಾರೆ. ಇನ್ನು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ಮಾಡುವ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಖರ್ಗೆ, ಅದರ ಬಗ್ಗೆ ಪ್ರಣಾಳಿಕೆ ಅಧ್ಯಕ್ಷರು ಸ್ಪಷ್ಟನೆ ನೀಡಿದ್ದಾರೆ. ಹೀಗಾಗಿ ಆ ಕುರಿತು ಚರ್ಚೆ ಮಾಡುವುದಿಲ್ಲ ಎಂದಿದ್ದಾರೆ.

ಇನ್ನು ಪ್ರಣಾಳಿಕೆಯಲ್ಲಿರುವುದನ್ನೆಲ್ಲ ಕಾಂಗ್ರೆಸ್ ಈಡೇರಿಸಲು ಸಾಧ್ಯವಿಲ್ಲವೆಂದು ಬಿಜೆಪಿಗರು ಹೇಳಿದ್ದರ ಬಗ್ಗೆ ಖರ್ಗೆ ಪ್ರತಿಕ್ರಿಯಿಸಿದ್ದು, ಈ ರೀತಿ ಪ್ರತಿ ಪಕ್ಷದವರು ವಿರೋಧವಾಗಿ ಮಾತನಾಡುವುದು ನಾರ್ಮಲ್. ನಾವು ಬರೀ ಪ್ರಣಾಳಿಕೆ ಬಿಡುಗಡೆ ಮಾಡಲಿಲ್ಲ. ನಮ್ಮ ಸರ್ಕಾರವಿದ್ದಾಗ, ಪ್ರಣಾಳಿಕೆಯಲ್ಲಿದ್ದ ಹಾಗೆ, ಅಭಿವೃದ್ಧಿಯನ್ನೂ ಮಾಡಿದ್ದೆವು ಎಂದು ಖರ್ಗೆ ಹೇಳಿದ್ದಾರೆ.

ಇನ್ನು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ, ಪ್ರಧಾನಿ ಮೋದಿ ಕಲ್ಯಾಣ ಕರ್ನಾಟಕಕ್ಕೆ ಏನೂ ಮಾಡಲಿಲ್ಲ. ಆದರೆ ಈಗ ಪ್ರಚಾರಕ್ಕೆ ಬರ್ತಿದ್ದಾರೆ. ನಾವು ಮಂಜೂರು ಮಾಡಿದ್ದ ರೈಲುಗಳಿಗೆ ಬಣ್ಣ ಬಳಿದು, ಹೊಸ ರೈಲು ಬಿಟ್ಟಿದ್ದಾರೆ. ಬರೀ ಪ್ರಚಾರದಿಂದಲೇ ಇವರು ಚುನಾವಣೆ ಗೆಲ್ಲುತ್ತಾರೆ ಎಂದುಕೊಂಡಿದ್ದಾರೆ. ನಾನು ಕೆಳಜಾತಿಯವನು ಎಂದು ಮೋದಿ ಪ್ರತೀ ಪ್ರಚಾರದಲ್ಲೂ ಹೇಳುತ್ತಾರೆ. ನಾನು ಮೋದಿಗಿಂತ ಜಾತಿ ವ್ಯವಸ್ಥೆಯಲ್ಲಿ ಕೆಳಗಿದ್ದೇನೆ. ಅವರಿಗೆ ಹಣ ಬಲವಿದೆ ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

‘ಕಷ್ಟ ಬಂದಾಗ ಮೋದಿ ಕರ್ನಾಟಕಕ್ಕೆ ಬರಲ್ಲ, ಚುನಾವಣೆ ಬಂದಾಗ ಬರುತಾರೆ, ಕೈ ಬೀಸಿ ಹೋಗುತ್ತಾರೆ’

‘ರಾಜ್ಯದ ಜನ ಮೈಮರೆತರೆ, ಕರ್ನಾಟಕದಲ್ಲಿ ತಾಲಿಬಾನ್ ಸರ್ಕಾರ ರಚನೆಯಾಗತ್ತೆ’

‘ಕಾಂಗ್ರೆಸ್ ಮೊದಲು ಅಧಿಕಾರಕ್ಕೆ ಬರಲಿ, ಆಮೇಲೆ ನಿಷೇಧದ ಬಗ್ಗೆ ಮಾತನಾಡಲಿ ‘

- Advertisement -

Latest Posts

Don't Miss