Mandya News:
ಕ್ರೀಡೆ ಜೀವನದಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಅಂತರ್ ರಾಜ್ಯ ಮಟ್ಟದಲ್ಲಿ ನಡೆಯುವಂತಹ ಟೇಬಲ್ ಟೆನ್ನಿಸ್ ಮತ್ತು ವಾಲಿಬಾಲ್ ಪಂದ್ಯಗಳಲ್ಲಿ ನಾನು ಸಹ ಭಾಗವಹಿಸಿದ್ದೇನೆ. ಕ್ರೀಡೆ ದೈಹಿಕ ಹಾಗೂ ಮಾನಸಿಕ ಶಕ್ತಿಯನ್ನು ವೃದ್ಧಿಸುತ್ತದೆ ಎಂದು ಜಿ. ಪಂ. ಸಿಇಒ ಶಾಂತಾ ಎಲ್.ಹುಲ್ಮನಿ ಅವರು ತಿಳಿಸಿದರು.ನಗರದ ಸರ್ ಎಂ ವಿ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ಒಂದಲ್ಲ ಒಂದು ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಕ್ರೀಡೆ ಜೀವನದಲ್ಲಿ ಸೋಲು -ಗೆಲುವು, ನೋವು-ನಲಿವು ಎಲ್ಲಾ ರೀತಿಯ ಪಾಠಗಳನ್ನು ಕಲಿಸಿಕೊಡುತ್ತದೆ ಎಂದರು.ಪ್ರಸ್ತುತ ಕ್ರೀಡೆಗೆ ಸಂಬಂಧಪಟ್ಟಂತೆ ಸಾಕಷ್ಟು ಪ್ರೋತ್ಸಾಹವನ್ನು ಸರ್ಕಾರ ನೀಡುತ್ತಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಸಹ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕನಿಷ್ಠ ಎರಡು ಕ್ರೀಡಂಗಣಗಳನ್ನು ನರೇಗಾದಲ್ಲಿ ಮಾಡಲಾಗುತ್ತಿದೆ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ರವರು ಮಾತನಾಡಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾ ಪಟುಗಳು ಭಾಗವಹಿಸಿರುವುದು ಸಂತೋಷದ ವಿಚಾರ. ಈ ಬಾರಿ ದಸರಾ ಕ್ರೀಡಾಕೂಟ ವಿಜೃಂಭಣೆಯಿಂದ ನಡೆಯುತ್ತಿದೆ ಎಂದರು.
ಕ್ರೀಡೆ ದೈಹಿಕ ಸಾಮರ್ಥ್ಯ ಸದೃಢಗೊಳಿಸುವುದರ ಜೊತೆಗೆ ಮಾನಸಿಕ ಸಮತೋಲನ ಹಾಗೂ ಮಾನಸಿಕ ಸ್ವಾಸ್ಥ್ಯಾವನ್ನು ಗಟ್ಟಿಗೊಳಿಸುತ್ತದೆ ಎಂದರು.ಕ್ರೀಡೆಯಲ್ಲಿ ಭಾಗವಹಿಸುವವರು ಎಳು-ಬೀಳು ಸೋಲು- ಗೆಲುವು ಎರಡನ್ನು ಅನುಭವಿಸುವುದರಿಂದ ಜೀವನದಲ್ಲಿ ಬೇರೆ ಕೆಲಸಕ್ಕೆ ಹೋದಾಗ ಅಲ್ಲಿ ಉಂಟಾಗುವ ತೊಂದರೆಗಳನ್ನು ಸೋಲಿಸಿ ಗೆಲ್ಲುವ ಮನೋಭಾವ ಬೆಳೆಯುತ್ತದೆ ಎಂದರು.ಪ್ರತಿ ಗ್ರಾಮ ಪಂಚಾಯಿತಿಯಲ್ಲಿಯೂ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗುತ್ತಿದೆ. ಇದರಿಂದ ಪ್ರತಿಭಾವಂತ ಕ್ರೀಡಾ ಪಟುಗಳನ್ನು ಗುರುತಿಸಿ, ರಾಜ್ಯ, ರಾಷ್ಟ್ರ ಮತ್ತು ಒಲಂಪಿಕ್ಸ್ ನಲ್ಲೂ ಭಾಗವಹಿಸುವಂತೆ ಮಾಡಬಹುದು. ಈ ಹಿನ್ನೆಲೆಯಲ್ಲಿ ಕ್ರೀಡಾ ಕೂಟಗಳಲ್ಲಿ ಕ್ರೀಡಾ ಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದರು.ಕಾರ್ಯಕ್ರಮದಲ್ಲಿ ಡಿಡಿಪಿಐ ಜವರೇಗೌಡ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಓಂ ಪ್ರಕಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
RSS ಖಾಕಿ ಚಡ್ಡಿಗೆ ಬೆಂಕಿಹಚ್ಚಿದ ಫೋಟೋ: ಕಾಂಗ್ರೆಸ್ ವಿರುದ್ಧ ತೇಜಸ್ವಿ ಸೂರ್ಯ ಕಿಡಿ
“ಸಿಟಿ ರವಿಗೆ ಲೂಟಿ ರವಿ ಎಂದಿದ್ದು ಚೇಳು ಕಚ್ಚಿದಂತಾಗಿದೆ “: ದಿನೇಶ್ ಗುಂಡೂರಾವ್