- Advertisement -
Manglore News:ಕರಾವಳಿ ಭಾಗದಲ್ಲಿ ಮಳೆರಾಯನ ಅಟ್ಟಹಾಸ ಮುಂದುವರೆದಿದೆ. ದಿನದಿಂದ ದಿನಕ್ಕೆ ಅನಾಹುತಗಳೂ ಸಂಭವಿಸುತ್ತಲೇ ಇದೆ. ಮಂಗಳೂರಿನ ತಲಪಾಡಿ ಸಮೀಪವು ಒಂದು ಅನಾಹುತ ಸಂಭವಿಸಿ ಭಾರೀ ದುರಂತವೊಂದು ತಪ್ಪಿದೆ.
ಖಾಸಗಿ ಶಿಕ್ಷಣ ಸಂಸ್ಥೆ ಕ್ಯಾಂಪಸ್ ಒಳಗಿನ ಆರು ಅಂತಸ್ತಿನ ಶಾಲಾ ಕಟ್ಟಡದ ಮೇಲೆ ಇತ್ತೀಚೆಗೆ ಅಳವಡಿಸಲಾಗಿದ್ದ ಭಾರೀ ಗಾತ್ರದ ಶೀಟ್ ಛಾವಣಿ ಉರುಳಿ ಕೆಳಗೆ ಬಿದ್ದಿದೆ. ಶೀಟ್ ಅಳವಡಿಸಲು ಹಾಕಲಾಗಿದ್ದ ಭಾರೀ ಗಾತ್ರದ ಕಬ್ಬಿಣದ ಸಲಾಕೆಗಳು ಕೆಳಗೆ ಉರುಳಿ ಬಿದ್ದು ಅನೇಕ ವಾಹನಗಳು ಜಖಂ ಗೊಂಡಿವೆ. ಜಿಲ್ಲಾಡಳಿತ ಶಾಲಾ,ಕಾಲೇಜುಗಳಿಗೆ ರಜೆ ನೀಡಿದ್ದರಿಂದ ನಿನ್ನೆ ವಿದ್ಯಾರ್ಥಿಗಳು ಶಾಲೆಗೆ ಬಂದಿರಲಿಲ್ಲ.ಹಾಗಾಗಿ ಸಂಭಾವ್ಯ ಅನಾಹುತ ತಪ್ಪಿದೆ ಎನ್ನಲಾಗಿದೆ.
- Advertisement -