Sunday, June 1, 2025

Latest Posts

ಮನಮೋಹನ್ ಸಿಂಗ್ ಅವರು ಬೇಗ ಗುಣಮೂಲಕರಾಗಲಿ; ಮೋದಿ ಟ್ವೀಟ್

- Advertisement -

www.karnatakatv.net : ಮನಮೋಹನ್ ಸಿಂಗ್ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಹಾರೈಸಿದ್ದಾರೆ.

ಹೌದು.. ನಿನ್ನೆ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ರು. ಅವರು ಬೇಗ ಗುಣಮೂಖರಾಗಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಮನ್‌ಮೋಹನ್ ಸಿಂಗ್ ಆರೋಗ್ಯದ ಬಗ್ಗೆ ಎಐಸಿಸಿ ಕಾರ್ಯದರ್ಶಿ ಪ್ರಣವ್ ಝಾ ಪ್ರತಿಕ್ರಿಯಿಸಿದ್ದು, ಮನಮೋಹನ್ ಸಿಂಗ್ ಅವರ ಆರೋಗ್ಯದ ಬಗ್ಗೆ ಕೆಲವು ವದಂತಿಗಳು ಕೇಳಿ ಬರುತ್ತಿವೆ.

ಜ್ವರ ಕಾಣಿಸಿಕೊಂಡ ಬಳಿಕ ಮನ್‌ಮೋಹನ್ ಸಿಂಗ್ ಅವವರು ದ್ರವ ರೂಪದ ಆಹಾರವನ್ನು ಮಾತ್ರ ತೆಗೆದುಕೊಳ್ಳುತ್ತಿರುವುದರಿಂದ ಆಯಾಸಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಅವರು ಈ ಹಿಂದೆ ಅವರಿಗೆ ಕೋವಿಡ್ ಸೋಂಕು ತಗುಲಿತ್ತು. ಬಳಿಕ ಅವರು ಏಮ್ಸ್ ಆಸ್ಪತ್ರೆಯ ಟ್ರೌಮ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದರು. ಯಾವುದಾದರೂ ಮಾಹಿತಿ ಇದ್ದರೆ ನಾವು ಹಂಚಿಕೊಳ್ಳುತ್ತೇವೆ. ಮಾಧ್ಯಮದ ಸ್ನೇಹಿತರ ಕಾಳಜಿಗೆ ಧನ್ಯವಾದಗಳು ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ. ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ ಅವರು ಆಸ್ಪತ್ರೆಗೆ ತೆರಳಿ ಸಿಂಗ್ ಅವರ ಆರೋಗ್ಯ ವಿಚಾರಿಸಿದ್ದಾರೆ.

- Advertisement -

Latest Posts

Don't Miss