Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಹಾದಾಯಿ ನೀರಿಗಾಗಿ ಅನ್ನದಾತರು ಮತ್ತೆ ಬೀದಿಗಿಳಿದಿದ್ದರು. ಮಹದಾಯಿ ಅನುಷ್ಠಾನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿಯ ಮೂರುಸಾವಿರ ಮಠದಿಂದ ಈ ಬೃಹತ್ ಪ್ರತಿಭಟನೆ ಆರಂಭವಾಗಿದ್ದು, ರೈತರ ಹೋರಾಟಕ್ಕೆ ಆಟೋ ಚಾಲಕರು ಮತತ್ತು ಮಾಲೀಕರು ಕೂಡ ಸಾಥ್ ಕೊಟ್ಟಿದ್ದಾರೆ. ಈ ಪ್ರತಿಭಟನೆಯಲ್ಲಿ ಆಟೋ ರ್ಯಾಲಿ ನಡೆಸಲಾಯಿತು.
ಈ ಮೆರವಣಿಗೆ ತಹಶೀಲ್ದಾರ್ ಕಚೇರಿಗೆ ಆಗಮಿಸಿದ್ದು, ತಹಶೀಲ್ದಾರ್ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು. 60 ಕ್ಕೂ ಹೆಚ್ಚು ರೈತ ಸಂಘಟನೆಗಳ ಬೆಂಬಲದೊಂದಿಗೆ ತಹಶಿಲ್ದಾರರ ಕಚೇರಿಗೆ ಬಂದು ಆಕ್ರೋಶ ವ್ಯಕ್ತಪಡಿಸಿದರು. ಮಹದಾಯಿ ಕಾಮಗಾರಿ ಶೀಘ್ರವೇ ಆರಂಭಿಸಬೇಕೆಂದು ಒತ್ತಾಯಿಸಿದರು. ಇನ್ನು ಈ ಪ್ರತಿಭಟನಾ ಮೆರವಣಿಗೆಯಲ್ಲಿ ವಿವಿಧ ಮಠಾಧೀಶರು ಕೂಡ ಭಾಗಿಯಾಗಿದ್ದರು.
‘ನಿಮ್ಮ ನಂಜಿನ ವಿಷ ರಾಜ್ಯವನ್ನೆಲ್ಲಾ, ದೇಶವನ್ನೆಲ್ಲಾ ವ್ಯಾಪಿಸುತ್ತಿದೆ. ಇದಕ್ಕೆ ಏನಂತೀರಿ?’
ಕಾಂಗ್ರೆಸ್ ಪೊಲೀಸ್ ಠಾಣೆ ಎಂದು ಬೋರ್ಡ್ ಹಾಕಿ – ಜೆಡಿಎಸ್ ಮಾಜಿ ಶಾಸಕ ಕೃಷ್ಣಾ ರೆಡ್ಡಿ ಆಕ್ರೋಶ




