Sunday, September 8, 2024

Latest Posts

ರಾಜ್ಯದಲ್ಲಿ ಎಸಿಬಿಯಿಂದ ಅಕ್ರಮ ಆಸ್ತಿಯ ಮೆಘಾ ಬೇಟೆ

- Advertisement -

ಬೆಂಗಳೂರು: ನಗರದಲ್ಲಿ ಬೆಳ್ಳಂ ಬೆಳಗ್ಗೆ ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಸೇರಿ ನಾಲ್ವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆಎಎಸ್ ಅಧಿಕಾರಿ ನಾಗರಾಜ್, ಯಲಹಂಕ ಸರ್ಕಾರಿ ಆಸ್ಪತ್ರೆಯ ಫಿಜಿಯೋಥೆರಪಿಸ್ಟ್ ರಾಜಶೇಖರ, ಬಿಬಿಎಂಪಿ ಸಿಬ್ಬಂದಿ ಮಾಯಣ್ಣ, ಬಿಬಿಎಂಪಿ ಸಿಬ್ಬಂದಿ ಬಾಗಲಗುಂಟೆಯ ಗಿರಿ ಸೇರಿ ಒಟ್ಟು ನಾಲ್ವರ ಮನೆಗಳ ಮೇಲೆ ಎಸಿಬಿ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರು ಸ್ಮಾರ್ಟ್ ಸಿಟಿ ಇಇ ಕೆ.ಎಸ್.ಲಿಂಗೇಗೌಡ, ಮಂಡ್ಯ ಹೆಚ್‌ಎಲ್‌ಬಿಸಿ ಇಇ ಕೆ.ಶ್ರೀನಿವಾಸ್, ದೊಡ್ಡಬಳ್ಳಾಪುರದ ಕಂದಾಯ ನಿರೀಕ್ಷಕ ಲಕ್ಷ್ಮೀನರಸಿಂಹಯ್ಯ, ಮಾಜಿ ಪ್ರಾಜೆಕ್ಟ್ ಮ್ಯಾನೇಜರ್ ವಾಸುದೇವ್, ಬೆಂಗಳೂರು ನಿರ್ಮಿತಿ ಕೇಂದ್ರದ ಮಾಜಿ ಪ್ರಾಜೆಕ್ಟ್ ಮ್ಯಾನೇಜರ್, ಜನರಲ್ ಮ್ಯಾನೇಜರ್ ಬಿ.ಕೃಷ್ಣಾರೆಡ್ಡಿ, ಬೆಂಗಳೂರು ನಂದಿನಿ ಡೇರಿಯ ಜನರಲ್ ಮ್ಯಾನೇಜರ್, ಗದಗ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ, ಸಹಕಾರಿ ಅಭಿವೃದ್ಧಿ ಅಧಿಕಾರಿ ಎ.ಕೆ.ಮಸ್ತಿ ತಂಡದಿAದ ದಾಳಿ ನಡೆದಿದೆ.
೧೫ ಅಧಿಕಾರಿಗಳ ಮೇಲೆ ನಿರಂತರ ದೂರು ಬಂದ ಹಿನ್ನೆಲೆ, ೮ ಜನ ಎಸಿಬಿ, ೧೦೦ ಎಸ್ಪಿ, ೩೦೦ ಜನ ಸಿಬ್ಬಂದಿ ಸೇರಿ ಒಟ್ಟು ೪೦೮ ಜನರಿಂದ ದಾಳಿ ನಡೆದಿದೆ.
ದೊಡ್ಡಬಳ್ಳಾಪುರದ ರೆವಿನ್ಯೂ ಇನ್ಸ್ಪೆಕ್ಟರ್ ಲಕ್ಷ್ಮೀನರಸಿಂಹಯ್ಯ ಎಂಬುವರ ಮನೆ ಮೇಲೆ ಎಸಿಬಿ ದಾಳಿ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ತೇರಿನ ಬೀದಿಯಲ್ಲಿನ ಮನೆ ಮೇಲೆ ದಾಳಿ ಮಾಡಿದ್ದು, ಬೆಳಗಿನಿಂದ ಅಧಿಕಾರಿಗಳು ಮನೆಯಲ್ಲಿ ದಾಖಲಾತಿಗಳ ಪರಿಶೀಲನೆ ಮಾಡುತ್ತಿದ್ದಾರೆ.
ಇನ್ನೂ ಕಲಬುರಗಿಯಲ್ಲಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಯ ಜೆ.ಇ. ಶಾಂತಗೌಡ ಬಿರಾದಾರ್ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಲಬುರಗಿ ನಗರದ ಗುಬ್ಬಿ ಕಾಲೋನಿಯಲ್ಲಿನ ಪಿಡಬ್ಲೂಡಿ ಜೆ.ಇ. ಶಾಂತಗೌಡ ಬಿರಾದಾರ್ ಅವರ ಮನೆ, ಕಚೇರಿ ಮತ್ತು ಯಡ್ರಾಮಿಯಲ್ಲಿರುವ ತೋಟದ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಸದ್ಯ ಎಸಿಬಿ ಅಧಿಕಾರಿಗಳು, ಜೆ.ಇ. ಶಾಂತಗೌಡ ಬಿರಾದಾರ್ ಅವರಿಗೆ ಸಂಬAಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಅದೇ ರೀತಿ ಮಂಡ್ಯ ಜಿಲ್ಲೆಯ ನಿವೃತ್ತ ಸಬ್ ರಿಜಿಸ್ಟಾರ್ ಕೆ. ಎಸ್. ಶಿವಾನಂದ್ ಮನೆ ಮೇಲೆ ಬಳ್ಳಾರಿ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಳ್ಳಾರಿಯಲ್ಲಿ ಕರ್ತವ್ಯ ನಿರ್ವಹಿಸಿ ಜುಲೈ ೩೦ ರಂದು ನಿವೃತ್ತರಾಗಿದ್ದರು. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೊತ್ತನಹಳ್ಳಿ ಹಾಗೂ ಬೆಂಗಳೂರಿನ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾಗೂ ಹೇಮಾವತಿ ಜಲಾಶಯ ಯೋಜನೆಯ ೩ ನೇ ವಿಭಾಗದ ಕೆಲಸ ನಿರ್ವಹಿಸುತ್ತಿದ್ದ ಕೆ. ಆರ್. ಪೇಟೆಯ ಶ್ರೀನಿವಾಸ್ ಇಇ ಮನೆ ಮೇಲೆ ದಾಳಿ ನಡೆಸಿದ್ದಾರೆ. ಹೇಮಾವತಿ ನದಿಯಲ್ಲಿ ಪ್ರವಾಹ ಇಲ್ಲದಿದ್ದರೂ ಪ್ರವಾಹ ಉಂಟಾಗಿದೆ ಎಂದು ಯಾವುದೇ ಟೆಂಡರ್ ಕರೆಯದೆ ಅನಾವಶ್ಯಕ ಕಾಮಗಾರಿ ನಡೆಸಿ ಸುಮಾರು ೨೦ ಕೋಟಿ ರೂ. ಅವ್ಯವಹಾರದ ಆರೋಪ ಶ್ರೀನಿವಾಸ್ ಮೇಲೆ ಇದೆ. ಇದಲ್ಲದೆ ನೂರಾರು ಕೋಟಿ ರೂ. ನಾಲೆಯ ಆಧುನೀಕರಣ ಕಾಮಗಾರಿ ನಡೆಸಲಾಗಿತ್ತು. ಈ ವೇಳೆಯೂ ಕಳಪೆ ಕಾಮಗಾರಿ ನಡೆಸಿ ಹಣ ವಂಚಿಸಿರುವ ಬಗೆಗೂ ದೂರುಗಳು ಕೇಳಿ ಬಂದಿದ್ದವು. ಸದ್ಯ ಮೈಸೂರಿನ ಬೋಗಾದಿಯಲ್ಲಿರುವ ನಿವಾಸ ಹಾಗೂ ನಂಜನ ಗೂಡಿನ ಹದಿನಾರು ಗ್ರಾಮದ ಫಾರ್ಮ್ ಹೌಸ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಇದೇ ರೀತಿ ಚಿಕ್ಕಬಳ್ಳಾಪುರ ,ಬೆಳಗಾವಿ , ಬೆಂಗಳೂರು ಗ್ರಾಮಾಂತರ ,ಯಲಹಂಕ ಹಾಗೂ ರಾಜ್ಯದ ನಾನಾ ಕಡೆ ಎಸಿಬಿ ಅಧಿಕಾರಿಗಳ ದಾಳಿ ಮುಂದುವರೆದಿದೆ .

- Advertisement -

Latest Posts

Don't Miss