Sunday, September 8, 2024

Latest Posts

‘ಮಿಮಿಕ್ರಿ ಅನ್ನೋದು ಒಂದು ಕಲೆ, ಅದನ್ನು ಸಾವಿರ ಬಾರಿ ಮಾಡುತ್ತೇನೆ’

- Advertisement -

National Political News: ಸಂಸತ್‌ನಿಂದ ಅಮಾನತಾದ ವಿಪಕ್ಷ ಸಂಸದರ ಎದುರಿಗೆ, ಟಿಎಂಸಿ ಸಂಸದ ಕಲ್ಯಾಣ ಬ್ಯಾನರ್ಜಿ, ಉಪರಾಷ್ಟ್ರಪತಿಗಳಾದ ಜಗದೀಪ್ ಧನಕರ್ ಬಗ್ಗೆ ಮಿಮಿಕ್ರಿ ಮಾಡಿದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಗುತ್ತ ಇದನ್ನು ವೀಡಿಯೋ ಕೂಡ ಮಾಡಿದ್ದರು.  ಹೀಗೆ ಮಾಡಿದ್ದು ತಪ್ಪು ಎಂದು ಬಿಜೆಪಿ ನಾಯಕರು ಸೇರಿ ಹಲವರು ಕಿಡಿಕಾರಿದ್ದರು. ಆದರೆ ಇಂದು ಮತ್ತೊಮ್ಮೆ ಕಲ್ಯಾಣ್ ಮಿಮಿಕ್ರಿ ಮಾಡಿದ್ದು, ಮಿಮಿಕ್ರಿ ಅನ್ನೋದು ಒಂದು ಕಲೆ, ಅದನ್ನು ಸಾವಿರ ಬಾರಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕಲ್ಯಾಣ್ ಬ್ಯಾನರ್ಜಿ, ನಾನು ಮಿಮಿಕ್ರಿ ಮಾಡುತ್ತಲೇ ಇರುತ್ತೇನೆ. ಅದೊಂದು ಕಲೆ. ಬೇಕಾದರೆ ಸಾವಿರ ಬಾರಿ ಮಾಡುತ್ತೇನೆ. ನನ್ನ ಅಭಿಪ್ರಾಯ ವ್ಯಕ್ತಪಡಿಸಲು ನನಗೆ ಎಲ್ಲಾ ಹಕ್ಕುಗಳಿದೆ. ನೀವು ನನ್ನನ್ನು ಜೈಲಿಗೆ ಹಾಕಬಹುದು. ಆದರೆ ನಾನು ಹಿಂದೆ ಸರಿಯುವುದಿಲ್ಲ ಎಂದಿದ್ದಾರೆ.

ಇನ್ನು ಬ್ಯಾನರ್ಜಿ ಮಾಡಿದ ಮಿಮಿಕ್ರಿಯಿಂದ, ರೈತ ಸಮುದಾಯಕ್ಕೆ ಅವಮಾನವಾಗಿದೆ ಎಂದು ಜಗದೀಪ್ ಧನಕರ್ ಆರೋಪಿಸಿದ್ದರು. ಇದಕ್ಕೆ ಉತ್ತರಿಸಿದ ಬ್ಯಾನರ್ಜಿ, ಧನಕರ್ ಅವರು ಜೋಧಪುರದಲ್ಲಿ ಕೋಟ್ಯಂತರ ಮೌಲ್ಯದ ಆಸ್ತಿ ಹೊಂದಿದ್ದಾರೆ. ದೆಹಲಿಯಲ್ಲಿ ಅವರಿಗೆ ಫ್ಲ್ಯಾಟ್ ಇದೆ. ಅಲ್ಲದೇ ಅವರು ಲಕ್ಷಾಂತರ ಮೌಲ್ಯದ ಸೂಟ್ ಧರಿಸುತ್ತಾರೆ ಎಂದು ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಮುಗ್ಧ ಅಲ್ಲ, ಧೂರ್ತರಿದ್ದಾರೆ – ಕೇಂದ್ರ ಸಚಿವ ಜೋಶಿ ಕಿಡಿ

ಬಿ.ಕೆ.ಹರಿಪ್ರಸಾದ್ ಮಾನಸಿಕ ಸ್ಥಿತಿ ಸರಿಯಲ್ಲ: ಮಾಜಿ ಡಿಸಿಎಂ ಗೋವಿಂದ ಕಾರಜೋಳ

ಪ್ರತ್ಯೇಕ ಧರ್ಮದ ಹೆಸರಲ್ಲಿ ಒಡೆಯುವಂಥ ಕೆಲಸ ಮಾಡಬೇಡಿ: ಜಗದೀಶ್ ಶೆಟ್ಟರ್

- Advertisement -

Latest Posts

Don't Miss