- Advertisement -
www.karnatakatv.net : ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬoಧಿಸಿದoತೆ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿತ್ತು.
ಪ್ರಕರಣವನ್ನು ಸುಪ್ರೀಂಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಹಾಗೂ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸುವಂತೆ ನಿಯೋಗ ಆಗ್ರಹಿಸಿತು. ಇನ್ನು ಅಕ್ಟೋಬರ್ 3 ರಂದು ನಡೆದ ಹಿಂಸಾಚಾರದ ಸಂಗತಿಗಳ ಕುರಿತು ರಾಷ್ಟ್ರಪತಿಗೆ ಜ್ಞಾಪನಾ ಪತ್ರವನ್ನು ಸಲ್ಲಿಸಿರೋದಾಗಿ ನಿಯೋಗ ತಿಳಿಸಿದೆ. ತಮ್ಮ ದುಬಾರಿ ಕಾರನ್ನು ರೈತ ಹೋರಾಟಗಾರರ ಮೇಲೆ ಹರಿಸಿದ್ದು, ಈ ಘಟನೆಯಲ್ಲಿ ಕನಿಷ್ಟ 4 ಜನ ರೈತರು ಮೃತಪಟ್ಟಿದ್ದರು. ಗಲಭೆಯಲ್ಲಿ ಓರ್ವ ಸ್ಥಳೀಯ ಪತ್ರಕರ್ತ ಸೇರಿದಂತೆ 5 ಜನ ಮೃತಪಟ್ಟಿದ್ದರು.
- Advertisement -