Hubballi News: ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಚಿವ ಸಂತೋಷ್ ಲಾಡ್ ಆಗಮಿಸಿ, ಮಾಧ್ಯಮದ ಜೊತೆ ಮಾತನಾಡಿದ್ದು, 5 ಕೆಜಿ ಅಕ್ಕಿ ಖರೀದಿ ಬಗ್ಗೆ ಕೇಂದ್ರ ಸರ್ಕಾರ ಮಾತು ಕೊಟ್ಟಿತ್ತು. ಈ ಕಾರ್ಯಕ್ರಮ ಯಶಸ್ವಿ ಆಗಬಾರದು ಅಂತ ಈಗ ಹಿಂದೆ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.
ಅಲ್ಲದೇ, ಬೇರೆ ರಾಜ್ಯಗಳಿಂದ ಖರೀದಿ ಮಾಡೋಕೆ ಮುಖ್ಯಮಂತ್ರಿಗಳು ಮುಂದಾಗಿದ್ದಾರೆ. ಬಹುತೇಕ ನಾವು ನೀಡಿದ ಸಮಯದಲ್ಲೆ ಕೊಡ್ತೀವಿ. ಸಂಪೂರ್ಣ ಮಾಹಿತಿಯನ್ನು ಮುಖ್ಯಮಂತ್ರಿಗಳು ಕೊಡ್ತಾರೆ ಎಂದು ಸಂತೋಷ್ ಲಾಡ್ ಹೇಳಿದ್ದಾರೆ.
ಕೇಂದ್ರ ಸರ್ಕಾರವನ್ನು ಕೇಳಿ ಗ್ಯಾರೆಂಟಿ ಘೋಷಣೆ ಮಾಡಿದ್ರಾ ಎಂಬ ಪ್ರಶ್ನೆಗೆ ಉತ್ತರಿಸಿದ ಲಾಡ್, ಪತ್ರದ ಮೂಲಕ ಅವರು ತಾನೇ ಕೊಟ್ಟಿದ್ದು. ಕಳೆದ ಬಾರಿ ಬಿಜೆಪಿ ಪ್ರಣಾಳಿಕೆಯನ್ನು ಕೇಂದ್ರಕ್ಕೆ ಕೇಳಿ ಕೊಟ್ಟಿದ್ರಾ? ಪ್ರಣಾಳಿಕೆ ಕೊಡುವಂತದ್ದು ರಾಜ್ಯಕ್ಕೆ ಸಂಬಂಧ ಪಟ್ಟಿದ್ದು. ಕೇಂದ್ರದವರು ಮಾತು ಕೊಟ್ಟು ವಾಪಸ್ ಪಡೆದ ಉದ್ದೇಶ ಏನು? ನಾವು ನೀಡಿದ ಕಾರ್ಯಕ್ರಮ ಆಗಬಾರದು ಎಂಬ ಉದ್ದೇಶ ಅವರದ್ದಿದೆ. ಕರ್ನಾಟಕ ಅಷ್ಟೇ ಅಲ್ಲದೇ ಇಡೀ ದೇಶದ ಜನತೆ ನೋಡ್ತಾ ಇದೆ. ಅಕ್ಕಿಗಾಗಿ ಮುಖಂಡರು, ಕಾರ್ಯಕರ್ತರೊಂದಿಗೆ ನಾಳೆ ನಾವು ಪ್ರತಿಭಟನೆ ಮಾಡ್ತೇವೆ ಎಂದು ಲಾಡ್ ಹೇಳಿದ್ದಾರೆ.
ಶಕ್ತಿ ಯೋಜನೆ ಬಿಟ್ಟು ಉಳಿದ ನಾಲ್ಕು ಯೋಜನೆಗಳಲ್ಲಿ ಗೊಂದಲ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಲಾಡ್, ಯಾವುದೇ ಗೊಂದಲ ಇಲ್ಲಾ. ಸುಮಾರು 60 ಸಾವಿರ ಕೋಟಿ ವೆಚ್ಚದಲ್ಲಿ ಆಗುತ್ತಿರುವ ಕಾರ್ಯಕ್ರಮ.ಇದನ್ನು ಅನುಷ್ಠಾನಕ್ಕೆ ತರೋಕೆ ನಾವು ಸಮಯ ನಿಗದಿ ಪಡಿಸಿದ್ದೇವೆ ಎಂದಿದ್ದಾರೆ.
ಮುಖ್ಯಮಂತ್ರಿ ಚರ್ಚೆ ವಿಚಾರದ ಬಗ್ಗೆ ಕೇಳಿದ್ದಕ್ಕೆ, ಅದಕ್ಕೆ ನಾನು ಉತ್ತರಿಸುವುದಿಲ್ಲ ಎಂದು ಲಾಡ್ ಹೇಳಿದರು. ಕೈಗಾರಿಕೋದ್ಯಮ ವಿದ್ಯುತ್ ಬಿಲ್ ಹೆಚ್ಚಳಕ್ಕೆ ಬಂದ್ ಕರೆ ವಿಚಾರದ ಬಗ್ಗೆ ಮಾತನಾಡಿದ ಲಾಡ್, ಮುಂದಿನ ದಿನಗಳಲ್ಲಿ ಸರ್ಕಾರ ಇದರ ಬಗ್ಗೆ ಚರ್ಚೆ ಮಾಡುತ್ತೆ ಎಂದು ಹೇಳಿದ್ದಾರೆ.
‘ನಮ್ಮಂಥವರ ಸಲಹೆ ಇಂದಿನ ಸಚಿವರು, ಅಧಿಕಾರಿಗಳು ಕೇಳಬೇಕು. ನಮ್ಮಂಥರಿಗೆ ಸಾಕಷ್ಟು ಜ್ಞಾನ ಇದೆ.’
ಹು-ಧಾ ಪಾಲಿಕೆ ಚುನಾವಣೆ: ಸಂತೋಷ್ ಲಾಡ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ಸಭೆ