political news :
ಬೆಂಗಳೂರು : ಬಿಜೆಪಿ ಎಂಎಲ್ಸಿ ಪುಟ್ಟಣ್ಣ ಕಾಂಗ್ರೆಸ್ ಸೇರ್ಪಡೆ ಆಗ್ತಿದ್ದಂತೆ ಕಾಂಗ್ರೆಸ್ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು ಕೆಪಿಸಿಸಿ ಕಛೇರಿ ಎದುರು ಪ್ರತಿಭಟನೆ ನಡೆಸಿದ್ರು. ಈಗಾಗಲೇ ಸಾಕಷ್ಟು ಆಕಾಂಕ್ಷಿಗಳು ರಾಜಾಜಿನಗರ ಕ್ಷೇತ್ರಕ್ಕೆ ಕಾಂಗ್ರೆಸ್ನಿಂದ ಟಿಕೆಟ್ಗಾಗಿ ಪೈಪೋಟಿ ನಡೆಸ್ತಿದ್ದಾರೆ. ಈ ನಡುವೆ, ರಾಜಾಜಿನಗರದ ಅಭ್ಯರ್ಥಿ ಆಗಲು ಪುಟ್ಟಣ್ಣ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ ಎನ್ನಲಾಗಿದೆ.
ರಾಜಾಜಿನಗರ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಜೊತೆ ಚರ್ಚೆ ನಡೆಸದೇ, ಏಕಾಏಕಿ ದಿಢೀರ್ ಎಂದು ಪುಟ್ಟಣ್ಣ ಕಾಂಗ್ರೆಸ್ ಸೇರಿರೋದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಕೆಪಿಸಿಸಿ ಕಚೇರಿ ಮುಂದೆ ಸೇರಿದ್ದ ಟಿಕೆಟ್ ಆಕಾಂಕ್ಷಿಗಳು ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಕೂಡ ನಡೀತು.
ಇದಕ್ಕೂ ಮುನ್ನ, ಬಿಜೆಪಿ ಎಂಎಲ್ಸಿ ಪುಟ್ಟಣ್ಣ, ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿಗೆ ಬಿಗ್ ಶಾಕ್ ಕೊಟ್ಟು ಕಾಂಗ್ರೆಸ್ ಸೇರ್ಪಡೆಯಾದ್ರು. ಸಿದ್ದರಾಮಯ್ಯ, ಡಿಕೆಶಿ ಹಾಗೂ ಸುರ್ಜೇವಾಲಾ ಸಮ್ಮುಖದಲ್ಲಿ ಪುಟ್ಟಣ್ಣ ಕಾಂಗ್ರೆಸ್ ಸೇರಿದ್ರು.
ಸಾವಿರ ಕೋಟಿ ಆಸ್ತಿ ಬಗ್ಗೆ ಬಾಂಬ್ ಸಿಡಿಸಿದ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ