Dharwad News: ಧಾರವಾಡ: ನವಲಗುಂದದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಪರ, ರೋಡ್ ಶೋ ನಡೆಸಿ ಕ್ಯಾಂಪೇನ್ ನಡೆಸಿದ್ದರು.
ಈ ವೇಳೆ ಮಾತನಾಡಿದ ಯಡಿಯೂರಪ್ಪ, ಪ್ರಲ್ಹಾದ ಜೋಶಿ ವರು 3 ಲಕ್ಷಕ್ಕೂ ಜಾಸ್ತಿ ಅಂತರದಲ್ಲಿ ಗೆಲ್ತಾರೆ. ಕಾಂಗ್ರೆಸ್ ನವರು ಹಣ, ಹೆಂಡ ಬಲದಿಂದ ಗೆಲ್ತಿವೆ ಅನ್ಕೊಂಡಿದ್ರು. ವಿಷ ಬೀಜ ಬಿತ್ತಿ ಚುನಾವಣೆ ಗೆಲ್ಲುವ ಭ್ರಮೆಯಲ್ಲಿದ್ದಾರೆ. ನಿಮ್ಮ ಮುಂದಿನ ಪ್ರಧಾನಿ ಯಾರು ಅಂತಾ ಕಾಂಗ್ರೆಸ್ ನವರಿಗೆ ಕೇಳ್ತೇನೆ. ಪಾಕಿಸ್ತಾನ್ ಕೂಡ ಹೆದರುವಂತ ಮಹಾನ್ ವ್ಯಕ್ತಿ ಮೋದಿ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಪ್ರಲ್ಹಾದ ಜೋಶಿ ದೊಡ್ಡ ಅಂತರದಲ್ಲಿ ಗೆಲ್ತಾರೆ. ನಾನು ಕೊಟ್ಟ ಭಾಗ್ಯಲಕ್ಷ್ಮಿ, ಸುವರ್ಣ ಗ್ರಾಮ ನಿಂತೋಯ್ತು. ಕಾಂಗ್ರೆಸ್ ಸರ್ಕಾರ ದಿವಾಳಿ ಆಗಿದೆ. ಇದನ್ನ ಕಿತ್ತೊಗೆದು ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲ್ಲೋದು ನಿಶ್ಚಿತ ಎಂದು ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.
ಪ್ರಜ್ವಲ್ ಪೆನ್ಡ್ರೈವ್ ಪ್ರಕರಣ: ಸಂತ್ರಸ್ತೆಯ ಅತ್ತೆಯಿಂದ ಸ್ಪೋಟಕ ಹೇಳಿಕೆ..
ನೆಚ್ಚಿನ ಸಾಕು ನಾಯಿ ಸಾವನ್ನಪ್ಪಿದ್ದಕ್ಕೆ ಆತ್ಮಹ*ತ್ಯೆಗೆ ಶರಣಾದ ಬಾಲಕಿ