- Advertisement -
International News:
ವಿಶ್ವ ಆರ್ಥಿಕ ವೇದಿಕೆ ವಾರ್ಷಿಕ ಸಭೆ-2023ರ ದಕ್ಷಿಣ ಏಷ್ಯಾ ಅಧಿವೇಶನದಲ್ಲಿ ಮಾತನಾಡಿದ ಪಾಕಿಸ್ತಾನ ಸಚಿವೆ ಹಿನಾ ರಬ್ಬಾನಿ ಖಾರ್ಭಾರತದ ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರನ್ನ ತಮ್ಮ ದೇಶವು ಪಾಲುದಾರರನ್ನಾಗಿ ನೋಡಿದೆ ಎಂದರು.
ಇನ್ನು 2011-2013ರ ನಡುವೆ ಪಾಕಿಸ್ತಾನದ ವಿದೇಶಾಂಗ ಸಚಿವರಾಗಿ ಭಾರತಕ್ಕೆ ತೆರಳಿದ್ದಾಗ ಉಭಯ ದೇಶಗಳ ನಡುವೆ ಶಾಂತಿ ಸೌಹಾರ್ದತೆಗಾಗಿ ಶ್ರಮಿಸಿದ್ದು, ಈಗಿನ ವಾತಾವರಣಕ್ಕೆ ಹೋಲಿಸಿದರೆ ಅಂದಿನ ವಾತಾವರಣ ಉತ್ತಮವಾಗಿತ್ತು ಭಾರತ ಮತ್ತು ಪಾಕಿಸ್ತಾನದ ನಡುವೆ ಶಾಂತಿಗಾಗಿ ಒಟ್ಟಾಗಿ ಕೆಲಸ ಮಾಡುವ ಪಾಲುದಾರರಾಗಿ ತಮ್ಮ ದೇಶವು ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡುತ್ತಿಲ್ಲ ಎಂದು ಹೇಳಿಕೆ ನೀಡಿದರು.
- Advertisement -