- Advertisement -
State News :ಸದ್ಯ ರಾಜ್ಯದ ಅನೇಕ ಕಡೆಗಳಲ್ಲಿ ಮಳೆಯಾಗುತ್ತಿದ್ದು ಹಲವು ಕಡೆಗಳಲ್ಲಿ ಅನಾಹುತಗಳೇ ಆಗಿವೆ. ಇದೀಗ ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡ ಹಿನ್ನೆಲೆ ಮುಂದಿನ 9 ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಂದಿನ 5 ದಿನ ರಾಜ್ಯದಲ್ಲಿ ಭಾರೀ ಮಳೆ ಆಗಲಿದೆ. ಉಳಿದ ದಿನಗಳು ಸಾಧಾರಣ ಮಳೆ ಆಗಲಿದೆ.
ಇಲ್ಲಿಯವರೆಗೆ 40.5% ಮಳೆ ಆಗಬೇಕಿತ್ತು. ಆದರೆ 40.8% ಮಳೆ ಆಗಿದ್ದು, 0.55 ಜಾಸ್ತಿಯೇ ಮಳೆ ಆಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ವಿವರಣೆ ನೀಡಿದೆ. ಹಾಗೆಯೇ ಈ ಬಾರಿ ಮಳೆ ತಡವಾಗಿದ್ದರೂ ಮಳೆಗೆ ಕೊರತೆ ಇಲ್ಲ ಎಂಬುವುದಾಗಿಯೂ ಹೇಳಿಕೊಂಡಿದೆ ಹವಾಮಾನ ಇಲಾಖೆ.
Uma Prashanth : ಪ್ರವಾಸಿಗರಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನವಿ ಏನು..?!
- Advertisement -