Saturday, July 27, 2024

Latest Posts

ಅಣ್ಣ-ಅತ್ತಿಗೆ ಆಶೀರ್ವಾದ ಪಡೆದು ನಾಮಪತ್ರ ಸಲ್ಲಿಸಿದ ಸಂಸದ ಡಿ.ಕೆ.ಸುರೇಶ್

- Advertisement -

Political news: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಮರು ಆಯ್ಕೆ ಬಯಸಿರುವ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ನಾಮಪತ್ರ ಸಲ್ಲಿಸುವ ಮೊದಲು ರಾಮನಗರದಲ್ಲಿ ಮೆರವಣಿಗೆಯಲ್ಲಿ ಬಂದರು. ಶಾಸಕರಾದ ಎಚ್.ಸಿ ಬಾಲಕೃಷ್ಣ, ಆನೇಕಲ್ ಶಿವಣ್ಣ, ರಂಗನಾಥ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷರಾದ ಎಚ್.ಎಂ ರೇವಣ್ಣ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀನಿವಾಸ್ ಸೇರಿದಂತೆ ಹಲವರು ಜೊತೆಗಿದ್ದರು.

ಇನ್ನು ನಾಮಪತ್ರ ಸಲ್ಲಿಕೆಗೂ ಮುನ್ನ ತಾಯಿ, ಡಿ.ಕೆ.ಸುರೇಶ್, ಅಣ್ಣ ಡಿ.ಕೆ.ಶಿವಕುಮಾರ್ ಮತ್ತು ಅತ್ತಿಗೆ ಉಷಾ ಅವರ ಆಶೀರ್ವಾದ ಪಡೆದಿದ್ದಾರೆ. ರಾಮನಗರದ ಚಾಮುಂಡೇಶ್ವರಿ ದೇಗುಲಕ್ಕೆ ತೆರಳಿ, ವಿಶೇಷ ಪೂಜೆ ಸಲ್ಲಿಸಿ, ತಾಯಿಯ ಆಶೀರ್ವಾದ ಪಡೆದರು. ಬಳಿಕ ರಾಮನಗರದಲ್ಲಿ ನಾಮಪತ್ರ ಸಲ್ಲಿಸುವ ಮುನ್ನ ಬೃಹತ್ ಮೆರವಣಿಗೆ ನಡೆದಿದ್ದು, ಸಾಾವಿರಾರು ಜನ ಈ ಮೆರವಣಿಗೆಯಲ್ಲಿ ಭಾಗಿಯಾಗಿ, ಡಿ.ಕೆ.ಸುರೇಶ್ ಅವರಿಗೆ ಬೆಂಬಲ ಸೂಚಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಅಧಿಕೃತ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ರಾಮನಗರ ಡಿಸಿ ಕಚೇರಿಯಲ್ಲಿ ನನ್ನ ನಾಮಪತ್ರ ಸಲ್ಲಿಸಿದೆ. ಕ್ಷೇತ್ರದಲ್ಲಿ ಮತ್ತೊಮ್ಮೆ ನನ್ನ ಗೆಲುವಿನ ಝೇಂಕಾರ ಮೊಳಗುವುದು ನಿಶ್ಚಿತ!ಕನ್ನಡಿಗರ ಭರವಸೆಯ ಕಾಂಗ್ರೆಸ್ ಮತ್ತೊಮ್ಮೆ ಕರುನಾಡಿನಲ್ಲಿ ಇತಿಹಾಸ ನಿರ್ಮಿಸಲಿದೆ. ಇದಕ್ಕೆ ಇಂದು ರಾಮನಗರದಲ್ಲಿ ಸೇರಿದ ಜನಸಾಗರವೇ ಸಾಕ್ಷಿ. ನನ್ನನ್ನು ಬಂದು ಹರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಎಲ್ಲಾ ನಾಯಕರು ಹಾಗೂ ಸಮಸ್ತ ಜನಸ್ತೋಮಕ್ಕೆ ನನ್ನ ಅನಂತ ನಮನಗಳು ಎಂದು ಡಿ.ಕೆ.ಸುರೇಶ್ ಟ್ವೀಟ್ ಮಾಡಿದ್ದಾರೆ.

ಕಷ್ಟಕ್ಕೆ ಸ್ಪಂದಿಸುವ ಡಿ.ಕೆ.ಸುರೇಶ್ ಬೇಕೊ? ವೈಟ್ ಕಾಲರ್ ಡಾ.ಮಂಜುನಾಥ್ ಬೇಕೋ?ನೀವೇ ನಿರ್ಧರಿಸಿ ಎಂದ ಸಿಎಂ

ಮೇಡಂ ಟುಸ್ಸಾಡ್ಸ್‌ನಲ್ಲಿರುವ ತಮ್ಮ ಮೇಣದ ಪ್ರತಿಮೆ ಅನಾವರಣಗೊಳಿಸಿದ ನಟ ಅಲ್ಲು ಅರ್ಜುನ್

ನಾವೆಲ್ಲರೂ ಲಿಂಗಾಯತರು ನಮ್ಮನ್ನು ಬೆಳೆಸಿದ್ದು ಪ್ರಹ್ಲಾದ್ ಜೋಶಿ: ಶಾಸಕ ಎಂ.ಆರ್.ಪಾಟೀಲ್

- Advertisement -

Latest Posts

Don't Miss