Wednesday, July 30, 2025

Latest Posts

ಲೋಕಸಭೆ ರಾಜಕೀಯಕ್ಕೆ ಸಂಸದ ಡಿ.ವಿ.ಸದಾನಂದ ಗೌಡ ಗುಡ್ ಬೈ..?

- Advertisement -

Political News: ಸಂಸದ ಡಿ.ವಿ.ಸದಾನಂದ ಗೌಡರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಕರೆ ಮಾಡಿ, ನೀವು ಲೋಕಸಭೆಯಿಂದ ದೂರವಿರಿ. ಇನ್ನು ನೀವು ಚುನಾವಣೆಗೆ ಸ್ಪರ್ಧಿಸುವುದು ಬೇಡ. ಚುನಾವಣೆ ಪ್ರಚಾರಕ್ಕೆ ತಯಾರಿ ಮಾಡಿಕೊಳ್ಳಿ ಎಂದಿದ್ದಾರೆ ಎಂಬ ಸುದ್ದಿ ಇದೆ. ಹಾಗಾಗಿ ಸದಾನಂದಗೌಡರಿಗೆ ಈ ಬಾರಿ ಚುನಾವಣೆಗೆ ಟಿಕೇಟ್ ಸಿಗುವುದಿಲ್ಲವೆಂದು ಹೇಳಲಾಗಿದೆ.

ಇನ್ನು ಸದಾನಂದಗೌಡರು ತಮ್ಮ ಟ್ವೀಟರ್‌ನಲ್ಲಿ ಪೋಸ್ಟ್ ಮಾಡಿದ್ದು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ನನ್ನೆಲ್ಲಾ ಪ್ರೀತಿಯ ಬಂಧುಗಳೇ.. ನನಗೆ ಕಳೆದ 10 ವರ್ಷಗಳ ಕಾಲ ಈ ಕ್ಷೇತ್ರದ ಲೋಕಸಭಾ ಸದಸ್ಯನಾಗಿ, ನಿಮ್ಮ ಕೆಲಸವನ್ನು ಮಾಡಿಕೊಡುವ ಅವಕಾಶ ಮಾಡಿಕೊಟ್ಟು ಆಶೀರ್ವಾದ ಮಾಡಿದ್ದೀರಿ. ನಾನು ನನ್ನ ಶಕ್ತಿ ಮೀರಿ, ನಿಮ್ಮ ಸೇವೆಯನ್ನು ಮಾಡುವ ಪ್ರಯತ್ನ ಮಾಡಿದ್ದೇನೆ. ನಿಮ್ಮ ಆಶೀರ್ವಾದದಿಂದ ಕೇಂದ್ರದಲ್ಲಿ ನಮ್ಮೆಲ್ಲರ ಪ್ರೀತಿಯ ಪ್ರಧಾನಮಂತ್ರಿ, ಶ್ರೀನರೇಂದ್ರ ಮೋದಿ ಅವರ ಜೊತೆಯಲ್ಲಿ, 7 ವರ್ಷಗಳ ಕಾಲ ಕ್ಯಾಬಿನೇಟ್ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ಕೂಡ ಕಲ್ಪಿಸಿದ್ದೀರಿ. ನಾನು ನಿಮ್ಮೆಲ್ಲರಿಗೂ ಚಿರಋಣಿ. ಇನ್ನು ಮುಂದೆಯೂ ನಾನು ನಿಮ್ಮ ಜೊತೆ ಇರುತ್ತೇನೆ. ಎಲ್ಲರಿಗೂ ನನ್ನ ಅಂತರಾಳದ ಹೃದಯ ತುಂಬಿದ ಧನ್ಯವಾಾದಗಳು. ಇಂತಿ ನಿಮ್ಮವನೇ ಆದ ಡಿ.ವಿ.ಸದಾನಂದಗೌಡ ಎಂದು ಬರೆದುಕೊಂಡಿದ್ದಾರೆ.

ಈ ಮೂಲಕ ತಾನು ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೂ, ಬಿಜೆಪಿ ಪರ ಕ್ಯಾಂಪೇನ್ ಮಾಡುವುದಾಗಿ ಸದಾನಂದಗೌಡ ಪರೋಕ್ಷವಾಗಿ ಹೇಳಿದ್ದಾರೆ. ಮೋದಿ ಸರ್ಕಾರ ಬಂದಾಗಿನಿಂದ ಎರಡು ಬಾರಿ ಸ್ಪರ್ಧಿಸಿ, ಸಂಸದರಾದವರಿಗೆ, ಈ ಬಾರಿ ಟಿಕೇಟ್ ನೀಡುವುದು ಡೌಟ್ ಎನ್ನಲಾಗಿದೆ. ಹಾಗಾಗಿ ಸದಾನಂದ ಗೌಡ ಸೇರಿ, ಪ್ರತಾಪ್ ಸಿಂಹ, ನಳೀನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ ಸೇರಿ ಇನ್ನೂ ಹಲವರಿಗೆ ಟಿಕೇಟ್ ಕೈ ತಪ್ಪುವ ಸಾಧ್ಯತೆ ಇದೆ.

ಹರಿಯಾಣಾದ ನೂತನ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣವಚನ ಸ್ವೀಕಾರ

ಯುವರಾಜರೇ ರಾಜರಾಗಿರಿ ಮಂತ್ರಿಯಾಗಬೇಡಿ: ಯದುವೀರ್ ಒಡೆಯರ್ ಅಭಿಮಾನಿಗಳ ಅಭಿಯಾನ

ಸರಕಾರಿ ಕಾರ್ಯಕ್ರಮಕ್ಕೆ ಬರದಿದ್ದರೆ ಗ್ಯಾರಂಟಿ ಯೋಜನೆ ಬಂದ್‌: ಅಂಗನವಾಡಿ ಕಾರ್ಯಕರ್ತೆಯ ‘ಗ್ಯಾರಂಟಿ’ ಬೆದರಿಕೆ

- Advertisement -

Latest Posts

Don't Miss