ಸುಮಲತಾ ಬೆಂಬಲಿಗರಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಸಂಸದೆ ಸುಮಲತಾ ಅಂಬರೀಶ್ ಅಭಿಮಾನಿಗಳು ಮಂಡ್ಯದಿಂದ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.

ಸಂಸದೆ ಸುಮಲತಾ ಗೆಲುವು ಸಾಧಿಸಿ ಸಂಸದೆಯಾದ ಹಿನ್ನೆಲೆಯಲ್ಲಿ ಅವರ ಒಳಿತಿಗಾಗಿ ಹಾಗೂ 50 ಕ್ಕೂ ಹೆಚ್ಚು ಬೆಂಬಲಿಗರು ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಿಮಿಷಾಂಬ ದೇಗುಲದಿಂದ ಚಾಮರಾಜನಗರದ ಮಲೆ ಮಹದೇಶ್ವರನ ಸನ್ನಿಧಿವರೆಗೂ ಅಭಿಮಾನಿಗಳು ಪಾದಯಾತ್ರೆ ನಡೆಸೋ ಮೂಲಕ ಸುಮಲತಾ ಅಂಬರೀಶ್ ಶ್ರೇಯಸ್ಸಿಗೆ ಪ್ರಾರ್ಥನೆ ಸಲ್ಲಿಸಲಿದ್ದಾರೆ.

ಮಂಡ್ಯದಲ್ಲೀಗ ಸುಮಲತಾರದ್ದೇ ಹವಾ!! ಮಿಸ್ ಮಾಡದೇ ಈ ವಿಡಿಯೋ ನೋಡಿ

About The Author