Political News : ಲೋಕಸಮರದಲ್ಲಿ ಆರೋಪ ಪ್ರತ್ಯಾರೋಪಗಳು ಸರ್ವೇ ಸಾಮಾನ್ಯವಾಗುತ್ತಿದೆ. ಹಾಗೆಯೇ ಕೇಸ್ ಗಳು ಕೂಡಾ ನಾಯಕರುಗಳ ಮೇಲೆ ಜೋರಾಗಿಯೇ ದಾಖಲಾಗುತ್ತಿದೆ. ಬಿಜೆಪಿಗೆ ಕಾಂಗ್ರೆಸ್ ಕಾರ್ಯಕರ್ತನನ್ನು ಬೆದರಿಸಿ ಸೇರ್ಪಡೆಗೊಳಿಸಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಎಂ.ಮುನಿರತ್ನ ಹಾಗೂ ಇತರರ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಲಕ್ಷ್ಮೀದೇವಿ ನಗರದ ಪೇಂಟರ್ ಸ್ಯಾಮ್ಯುಯಲ್ ಆರೋಪ ಮಾಡಿದ್ದು, ಸಂತ್ರಸ್ತ ನೀಡಿದ ದೂರಿನ ಮೇರೆಗೆ ಮುನಿರತ್ನ ಹಾಗೂ ಅವರ ಬೆಂಬಲಿಗರಾದ ಸುರೇಶ್, ವಸಂತ್, ವಾಸೀಂ ಹಾಗೂ ಸೀನ ವಿರುದ್ಧ ಅಪಹರಣ ಆರೋಪದಡಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ಎರಡು ದಿನಗಳಿಂದ ಮಾತನಾಡುವ ನೆಪದಲ್ಲಿ ಶಾಸಕ ಮುನಿರತ್ನ ಅವರ ಕಚೇರಿಗೆ ಬಲವಂತವಾಗಿ ಶಾಸಕರ ಹಿಂಬಾಲಕರು ಕರೆದು ಕೊಂಡುಹೋಗಿ ಬೆದರಿಕೆ ಹಾಕಿ ಬಿಜೆಪಿ ಸೇರಿಸಿದ್ದರು ಎಂ ದು ಸಂತ್ರಸ್ತ ಆರೋಪಿಸಿದ್ದಾರೆ. ಆದರೆ ತಮ್ಮ ಮೇಲಿನ ಆರೋಪವನ್ನು ಶಾಸಕ ಮುನಿರತ್ನ ನಿರಾಕರಿಸಿದ್ದಾರೆ ಎಂದು ಹೇಳಲಾಗಿದೆ.
K. S. Eshwarappa : ಈಶ್ವರಪ್ಪಗೆ ಮತ್ತೆ ನಿರಾಸೆ ..! ಅಮಿತ್ ಶಾ ಗೆ ಯಾಕಿಷ್ಟು ಸಿಟ್ಟು..?!
ಸಿದ್ದರಾಮಯ್ಯ- ಡಿಕೆಶಿ ನಡುವೆ ಒಳಜಗಳವಿದೆ. ಹಾಗಾಗಿ ಕಾಂಗ್ರೆಸ್ ಸರ್ಕಾರ ಬಹಳ ದಿನ ಇರುವುದಿಲ್ಲ: ಜೋಶಿ