Saturday, July 27, 2024

Latest Posts

ಹಿಂದೂ ಕಾರ್ಯಕರ್ತನ ಹತ್ಯೆಯ ಬಗ್ಗೆ ಸಚಿವ ಕೆ ಎಸ್​ ಈಶ್ವರಪ್ಪ ಗಂಭೀರ ಆರೋಪ

- Advertisement -

ಬೆಂಗಳೂರು : ಶಿವಮೊಗ್ಗದಲ್ಲಿ ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ. ನಿನ್ನೆ ಮುಸಲ್ಮಾನ ಗೂಂಡಾಗಳು ಕೊಲೆ ಮಾಡಿದ್ದಾರೆ. ಹತ್ಯೆಗೀಡಾದ ವ್ಯಕ್ತಿ ಬಹಳ ಪ್ರಾಮಾಣಿಕ, ತುಂಬಾ ಒಳ್ಳೆಯ ಯುವಕ. ಇನ್ನೂ ಮದುವೆಯನ್ನೂ ಆಗಿರಲಿಲ್ಲ. ಅಂತಹವನ ಹತ್ಯೆ ಆಗಿದೆ. ಮುಸಲ್ಮಾನ ಗೂಂಡಾಗಳಿಗೆ ಇಷ್ಟು ಧೈರ್ಯ ಬಂದಿದೆ ಎಂದು ಸರ್ಕಾರ ತನಿಖೆ ಮಾಡ್ತಿದೆ. ಶಿವಮೊಗ್ಗದಲ್ಲಿ ಈ ಮುಸಲ್ಮಾನ ಗೂಂಡಾಗಳು ಬಾಲ ಬಿಚ್ಚಿರಲಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪ್ರಚೋದನಕಾರಿ ಹೇಳಿಕೆಗಳಿಂದ ಈ ಗೂಂಡಾಗಳಿಗೆ ಕುಮ್ಮಕ್ಕು ಸಿಕ್ಕಂತಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್​ ಈಶ್ವರಪ್ಪ ಬೆಂಗಳೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಕೆಲವೇ ಹೊತ್ತಿನಲ್ಲಿ ಶಿವಮೊಗ್ಗಕ್ಕೆ ಪ್ರಯಾಣ ಮಾಡುವುದಾಗಿ ಈಶ್ವರಪ್ಪ ಹೇಳಿದ್ದಾರೆ.

ಇದರ ಬಗ್ಗೆ ಸಿಎಂ ಮತ್ತು ಹೋಂ ಮಿನಿಸ್ಟರ್ ಜತೆ ಮಾತಾಡಿದೀನಿ. ಶಿವಮೊಗ್ಗದಲ್ಲಿ ಮುಸ್ಲಿಮರು ಬಾಲ ಬಿಚ್ಚಿರಲಿಲ್ಲ. ಡಿಕೆ ಶಿವಕುಮಾರ್ ಧ್ವಜದ ವಿಚಾರದಲ್ಲಿ ಪ್ರಚೋದನಾ ಹೇಳಿಕೆ ನೀಡಿದ್ದರು. ಸೂರತ್‌ನಿಂದ ಕೇಸರಿ ಶಾಲು ತರಿಸಿದ್ದಾಗಿ ಹೇಳಿಕೆ ನೀಡಿದ್ದರು. ಡಿಕೆ ಶಿವಕುಮಾರ್ ಆ ಹೇಳಿಕೆಯಿಂದ ಪ್ರೇರಣೆ ಪಡೆದು ಮುಸ್ಲಿಂ ಗೂಂಡಾಗಳು ನಿನ್ನೆ ರಾತ್ರಿ ನಮ್ಮ ಪ್ರಾಮಾಣಿಕ ಕಾರ್ಯಕರ್ತ ಹರ್ಷನ ಕೊಲೆ ಮಾಡಿದ್ದಾರೆ. ಯುವಕನ ಕಾರ್ಯವನ್ನು ನಾವೇ ಮುಂದೆ ನಿಂತು ಮಾಡ್ತೇವೆ. ಈಗಾಗಲೇ ಗೃಹ ಸಚಿವರಿಗೆ ಮಾತಾಡಿದ್ದೇನೆ. ಕೇಸರಿ ಶಾಲೆ ಹಚ್ಚಿದ್ದಾರೆ, ರಾಷ್ಟ್ರ ಧ್ವಜ ತೆಗೆದು ಭಗಧ್ವಜ ಹಾರಿಸಿದ್ದಾರೆ ಎಂಬಂತಹ ಡಿಕೆ ಶಿವಕುಮಾರ್ ಹೇಳಿಕೆಯಿಂದ ಕುಮ್ಮಕ್ಕು ಪಡೆದ ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದಾರೆ ಎಂದು ಸಚಿವ ಈಶ್ವರಪ್ಪ ನೇರ ಆರೋಪ ಮಾಡಿದ್ದಾರೆ.

- Advertisement -

Latest Posts

Don't Miss