Friday, June 20, 2025

Latest Posts

BREAKING: ಮುರುಘಾ ಶ್ರೀಗಳನ್ನು ಖುದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿ – ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ

- Advertisement -

ಚಿತ್ರದುರ್ಗ: ಕಳೆದ ರಾತ್ರಿ ಚಿತ್ರದುರ್ಗದ ಪ್ರಸಿದ್ಧ ಮಠಗಳಲ್ಲಿ ಒಂದಾದಂತ ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರನ್ನು ಪೋಕ್ಸೋ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದರು. ರಾತ್ರೋ ರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಅವರಿಗೆ ಇಂದಿನವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಇಂದು ನ್ಯಾಯಾಲಯಕ್ಕೆ ಹಾಜರಾಗದ ಹಿನ್ನಲೆಯಲ್ಲಿ, ಖುದ್ದು ಹಾಜರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಸೂಚಿಸಿದೆ.

ಈ ಸಂಬಂಧ ಇಂದು ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಂತ ಚಿತ್ರದುರ್ಗದ ಮ್ಯಾಜಿಸ್ಟ್ರೇಟ್ ಕೋರ್ಟ್, ಮುರುಘಾ ಶ್ರೀಗಳನ್ನು ನ್ಯಾಯಾಲಯಕ್ಕೆ ಹಾಜರಾಗದ ಸಂಬಂಧ ಜೈಲು ಅಧೀಕ್ಷಕರಿಗೆ ಮಾಹಿತಿ ಕೇಳಿತ್ತು. ಅದರಂತೆ ಜೈಲು ಅಧೀಕ್ಷಕರು ಕೋರ್ಟ್ ಗೆ ಆಗಮಿಸಿ, ಅವರು ಹೃದ್ರೋಗ ಸಂಬಂಧ ಆಸ್ಪತ್ರೆಗೆ ದಾಖಲಾಗಿರುವಂತ ಮಾಹಿತಿ ಹಾಗೂ, ವೈದ್ಯರು ನೀಡಿದಂತ ವೈದ್ಯಕೀಯ ದಾಖಲೆಗಳನ್ನು ಹಾಜರುಪಡಿಸಿದ್ದರು.

ಜೈಲು ಅಧೀಕ್ಷಕರು ಸಲ್ಲಿಸಿದಂತ ದಾಖಲೆಗಳ ಪರಿಶೀಲನೆ ಬಳಿಕ, ಮ್ಯಾಜಿಸ್ಟ್ರೇಟ್ ಕೋರ್ಟ್ ಮುರುಘಾ ಶ್ರೀಗಳನ್ನು ಕೋರ್ಟ್ ಗೆ ಖುದ್ದು ಹಾಜರುಪಡಿಸುವಂತೆ ಜೈಲರ್ ಗೆ ಸೂಚಿಸಿದೆ. ಹೀಗಾಗಿ ಕೆಲವೇ ಕ್ಷಣಗಳಲ್ಲಿ ಮುರುಘಾ ಶ್ರೀಗಳನ್ನು ಚಿತ್ರದುರ್ಗದ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಹಾಜರುಪಡಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ನ್ಯಾಯಾಲಯದ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್  ಕೈಗೊಳ್ಳಲಾಗಿದೆ.

- Advertisement -

Latest Posts

Don't Miss