Sunday, September 8, 2024

Latest Posts

ಸಚಿವ ಸುನೀಲ್ ಕುಮಾರ್ ವಿರುದ್ಧ ಪ್ರಮೋದ್ ಮುತಾಲಿಕ್ ಆರೋಪ !

- Advertisement -

state news

ದಕ್ಷಿಣ ಕನ್ನಡ(ಮಾ.3): ರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಾರ್ಕಳ ಸಚಿವ ವಿ. ಸುನೀಲ್ ಕುಮಾರ್ ಅವರ ಮೇಲೆ ಗಂಭೀರವಾದ ಆರೋಪ ಮಾಡುತ್ತಿದ್ದಾರೆ.

ಕೆಲವು ತಿಂಗಳಿನಿಂದಲೂ ಈ ರೀತಿ ಸುನೀಲ್ ಕುಮಾರ್ ವಿರುದ್ಧ ಆರೋಪ ಮಾಡುತ್ತಿದ್ದು,ಸುನೀಲ್ ಕುಮಾರ್ ಬೇನಾಮಿ ಆಸ್ತಿಯನ್ನು ಹೊಂದಿದ್ದಾರೆ ಎಂದು ಲೋಕಾಯುಕ್ತ ಕಚೇರಿಗೆ ದೂರನ್ನು ನೀಡಿದ್ದಾರೆ. ಇನ್ನೇನು ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆ, ಈ ರೀತಿ ಒಬ್ಬರನ್ನೊಬ್ಬರು ಆರೋಪ ಮಾಡುತ್ತಿರುವುದು ಪ್ರಶ್ನೆಯಾಗಿದೆ.

ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಶಿವಪುರ ಕೆರೆಕಟ್ಟೆ ಗ್ರಾಮದಲ್ಲಿ 67 ಎಕರೆ ಕೃಷಿ ಭೂಮಿಯನ್ನು ಬೇನಾಮಿ ಹೆಸರಿನಲ್ಲಿ ಬೇರೆ ಬೇರೆ ರೈತರಿಂದ ಖರೀದಿ ಮಾಡಿದ್ದಾರೆ. ಮುಂದೆ ಅದು ಕೈಗಾರಿಕಾ ಪ್ರದೇಶವಾಗಿ ಭೂ ಪರಿವರ್ತನೆ ಮಾಡಿ 4-5 ಪಟ್ಟು ಹೆಚ್ಚಿನ ಬೆಲೆಗೆ ಸರ್ಕಾರ ಖರೀದಿ ಮಾಡುತ್ತದೆ. 4 ಚಿಲ್ಲರೆ ಕೋಟಿಗೆ ಖರೀದಿಸುವ ಮೂಲಕ ಜಮೀನು ಹೊಂದಿರುವ ಬಡ ರೈತರಿಗೂ ಅನ್ಯಾಯ ಆಗಿದೆ. ಇದರಲ್ಲಿ ಶಾಸಕ, ರಾಜ್ಯದ ಪ್ರಭಾವಿ ಮಂತ್ರಿಗಳ ಕೈವಾಡ ಇದೆ ಎಂದು ಮುತಾಲಿಕ್ ಆರೋಪ ಮಾಡಿದ್ದಾರೆ.

ಹೊಸ ಮೊಬೈಲ್ ಖರೀದಿ ವೇಳೆ ಚಾರ್ಜರ ಮಾರಿದರೆ ಬೇರೆ ಬೇರೆ ಟ್ಯಾಕ್ಸ ಇಲ್ಲ

- Advertisement -

Latest Posts

Don't Miss