Tuesday, June 3, 2025

Latest Posts

ಮೈಸೂರು: ಸಾವರ್ಕರ್ ರಥ ಯಾತ್ರೆಗೆ ಚಾಲನೆ ನೀಡಿದ ಬಿಎಸ್ ವೈ

- Advertisement -

Mysoor news:

ಮೈಸೂರಿನಲ್ಲಿ ಇಂದು [ಆ.23] ಸಾವರ್ಕರ್ ರಥಯಾತ್ರೆಗೆ ಚಾಲನೆ ದೊರೆಯಿತು. ‘ಸಾವರ್ಕರ್‌ ರಥಯಾತ್ರೆ’ಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಚಾಲನೆ ನೀಡಿದರು.

“ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮೈಸೂರಿಗೆ ವಿಶೇಷ ಇತಿಹಾಸವಿದೆ. ಮೈಸೂರಿನಂಥ ಪುಣ್ಯ ಭೂಮಿಯಲ್ಲಿ ಸಾವರ್ಕರ್ ರಥ ಯಾತ್ರೆಗೆ ಚಾಲನೆ ನೀಡುತ್ತಿರುವುದು ನನ್ನ ಸೌಭಾಗ್ಯ ಎಂದ ಅವರು, ದೇಶದೊಳಗಿನ ವಿದ್ರೋಹಿಗಳ ಎಚ್ಚರಿಕೆ ನೀಡುವ ರಥಯಾತ್ರೆ ಇದು. ಸಾವರ್ಕರ್ ಚಿಂತನೆಗಳನ್ನು ಮನೆ ಮನೆಗಳಿಗೆ ತಲುಪಿಸಬೇಕು” ಎಂದು ಯಡಿಯೂರಪ್ಪ ಕರೆ ನೀಡಿದರು.

ಈ ರಥಯಾತ್ರೆಯು ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಸಂಚರಿಸಲಿದೆ. ಆ.24ರಂದು ಎಚ್‌.ಡಿ.ಕೋಟೆ, ಸರಗೂರು, 25, 26ರಂದು ನಂಜನಗೂಡು ಮೂಲಕ ಚಾಮರಾಜನಗರ ಜಿಲ್ಲೆ, 27ರಿಂದ 29ರವರೆಗೆ ಮಂಡ್ಯ ಜಿಲ್ಲೆಯಲ್ಲಿ ಯಾತ್ರೆ ನಡೆಯಲಿದೆ.

ACB ರದ್ದು ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಇಲ್ಲ – ಸಿಎಂ ಬೊಮ್ಮಾಯಿ

ಕೊಡಗು ಚಲೋ ಮುಂದೂಡಿತಾ ಕಾಂಗ್ರೆಸ್..?! ಸಿದ್ದರಾಮಯ್ಯ ಹೇಳಿದ್ದೇನು..?!

ನನಗೇನು ಭಯವಿಲ್ಲ…! ಸಚಿವರು ಹೀಗೆ ಹೇಳಿದ್ಯಾಕೆ…?!

- Advertisement -

Latest Posts

Don't Miss