Thursday, June 19, 2025

Latest Posts

Mysore: ವಿಶ್ವ ವಿಖ್ಯಾತ ಮೈಸೂರು ದಸರಾಗೆ ಗಜ ಪೂರ್ವ ಸಿದ್ಧತೆ

- Advertisement -

ಹುಣಸೂರು:  ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ಅಭೂತಪೂರ್ವ ಸ್ವಾಗತ ಹಾಗೂ ವಿವಿಧ ಕಲಾ ತಂಡಗಳೊಂದಿಗೆ ಸೆ.1 ಆರಂಭವಾಗಲಿರುವ ಗಜ ಪಯಣಕ್ಕೆ ಅರಣ್ಯ ಇಲಾಖೆಯಿಂದ ಪೂರ್ವ ತಯಾರಿ ಮಾಡಿಕೊಂಡಿದೆ.

ಪ್ರತಿ ವರ್ಷದಂತೆ ಗಜ ಪಯಣ ಕಾರ್ಯಕ್ರಮ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ವೀರನ ಹೊಸಳ್ಳಿಯ ಮುಖ್ಯ ದ್ವಾರದ ಮುಂಭಾಗ ಸೆ.1ರಂದು ಬೆಳಿಗ್ಗೆ 10 ಗಂಟೆಗೆ ಆರಂಭ ವಾಗಲಿದೆ.

ಗಜಪಡೆಗೆ ಅಭೂತಪೂರ್ವ ಸ್ವಾಗತದೊಂದಿಗೆ ಬರಮಾಡಿಕೊಳ್ಳಲು ಪ್ರವಾಸಿಗರು ಹಾಗೂ 15ಕ್ಕೂ ಹೆಚ್ಚು ಜಾನಪದ ಕಲಾತಂಡಗಳನ್ನು ಬಳಸಿಕೊಳ್ಳಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರಿಂದ ಪೂಜೆ ನೆರವೇರಿಸಿ ಮೈಸೂರಿಗೆ ಆನೆಗಳನ್ನು ಕರೆತರಲಾಗುತ್ತಿತ್ತು. ಆದರೆ ಈ ಸಾಲಿನಿಂದ ಹೊಸ ರೂಪ ನೀಡಲಾಗುತ್ತಿದೆ. ಸುಮಾರು 5 ಸಾವಿರ ಜನರನ್ನು ಸೇರಿಸಿ ಆನೆಗಳಿಗೆ ಸ್ವಾಗತ ಕೋರಿ ಬರಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಪ್ರವಾಸೋದ್ಯಮ ಇಲಾಖೆ, ಶಾಲಾ-ಕಾಲೇಜುಗಳು, ಮಹಿಳಾ ಸಂಘಗಳಿಗೂ ಮಾಹಿತಿ ನೀಡಿ, ಗಜ ಪಯಣ ಕಾರ್ಯಕ್ರಮಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿದೆ.

15ಕ್ಕೂ ಹೆಚ್ಚು ಕಲಾ ತಂಡಗಳು: ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್ ಸಿ ಮಹದೇವಪ್ಪ ಅವರು ಸೆಪ್ಟೆಂಬರ್ 1ರಂದು ಗಜಪಡೆಯ ನಾಯಕ ಅಭಿಮಾನ್ಯೂಗೆ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಲಿದ್ದಾರೆ. ಬಳಿಕ ಕಂಸಾಳೆ, ಡೊಳ್ಳು ಕುಣಿತ, ವೀರಗಾಸೆ ಕುಣಿತ, ಪೂಜಾ ಕುಣಿತ, ಆದಿವಾಸಿಗಳ ನೃತ್ಯ, ಟಿಬೆಟ್ ನೃತ್ಯ, ಗೊರವರ ಕುಣಿತ, ಜೇನ ಕುರುಬರ ಕಾಡು ಕುರುಬರು ಸ್ಥಳಿಯ ಜನರಿಂದ ಕುಣಿತ ಸೇರಿದಂತೆ ಸುಮಾರು 15ಕ್ಕೂ ಹೆಚ್ಚಿನ ಕಲಾ ತಂಡಗಳು ಗಜಪಡೆಯ ಮುಂದೆ ಪ್ರದರ್ಶನ ನೀಡಲಿದೆ. ಅಲ್ಲದೆ ಆನೆಗಳನ್ನು ಮೆರವಣಿಗೆಯಲ್ಲಿ ಕೆಲ ದೂರ ಕರೆದೊಯ್ಯಲಾಗುತ್ತದೆ.

ಪ್ರಚಾರಕ್ಕೆ ಹೆಚ್ಚು ಒತ್ತು: ಈ ಬಾರಿ ಗಜಪಯಣಕ್ಕೆ ಹೆಚ್ಚು ಪ್ರಚಾರ ನೀಡಲಾಗುತ್ತದೆ. ಪ್ರಚಾರದ ಬಗ್ಗೆ ಜಾಹೀರಾತು ನೀಡುವುದರೊಂದಿಗೆ ಮೈಸೂರಿನ ವಿವಿಧೆಡೆ ಹಾಗೂ ಹುಣಸೂರು ಮುಖ್ಯರಸ್ತೆಯಲ್ಲಿ ಸುಮಾರು 20 ಸ್ಥಳಗಳಲ್ಲಿ ದೊಡ್ಡ -ದೊಡ್ಡ ಫಲಕಗಳನ್ನು ಪ್ರದರ್ಶಿಸಿ, ಸೆ.1ರಂದು ರಂದು ನಡೆಯುವ ಗಜಪಯಣಕ್ಕೆ ಸರ್ವರಿಗೂ ಸ್ವಾಗತ ಕೋರಲು ಅರಣ್ಯ ಇಲಾಖೆ ಕಾರ್ಯಕ್ರಮ ರೂಪಿಸಿದೆ.

ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳು ಮೊದಲ ತಂಡದಲ್ಲಿ ಒಂಬತ್ತು ಆನೆಗಳು ಆಗಮಿಸುತ್ತಿದ್ದೇವೆ. ಎರಡನೇ ಬಾರಿ ಪ್ರವೇಶ ಮಹೇಂದ್ರ ಗೋಪಿ ಸೇರಿದಂತೆ ಏಳು ಆನೆಗಳನ್ನು ಕರೆತರಲಾಗುತ್ತಿದೆ. ಗಜಪಡೆಯ ನಾಯಕ, ಅಭಿಮನ್ಯು, ಸಾರಥ್ಯದಲ್ಲಿ ವಿಜಯ ಮತ್ತು ಆನೆಗಳು ಆಗಮಿಸಲಿದ್ದು, ಇದರೊಂದಿಗೆ ಹೊಸ ಆನೆಗಳಾದ ಭೀಮ ಹಾಗೂ ವರಲಕ್ಷ್ತ್ರ್ಮಿಯನ್ನು ಹೆಚ್ಚುವರಿಯಾಗಿ ಕರೆತರಲು ನಿರ್ಧರಿಸಲಾಗಿದೆ. ಸುಮಾರು 3000 ಜನರಿಗೆ ಭೋಜನದ ಜೊತೆಗೆ ವೀರನಹೊಸಹಳ್ಳಿ ಆಶ್ರಮ ಶಾಲೆಯಲ್ಲಿ ಗಣ್ಯರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಗಜಪಯಣದ ಉಸ್ತುವಾರಿ ವಹಿಸಿರುವ ಡಿಸಿಎಫ್ ತಿಳಿಸಿದ್ದಾರೆ.

ಆನೆಗಳ ಬಗ್ಗೆ ಮಾಹಿತಿ: ಅಭಿಮನ್ಯು ಇದರ ವಯಸ್ಸು 44. ಎತ್ತರ 2.66 ಮೀಟರ್. ಕಾಡಾನೆಯನ್ನು ಹಿಡಿದು ಪಳಗಿಸುವ ಹಾಗೂ ಚಿಕಿತ್ಸೆ ನೀಡುವ ಕಾರ್ಯದಲ್ಲಿ ನೈಪುಣ್ಯತೆ ಪಡೆದಿರುವ ಇದು ಎಂತಹ ಬಲಿಷ್ಠ ಆನೆಯನ್ನು ಕೂಡ ಎದುರಿಸಿ ಹಿಡಿತದಲ್ಲಿಡುವ ಸಾಮಥ್ರ್ಯ ಹೊಂದಿದೆ.

ಮಹೇಂದ್ರ- ಕೂಂಬಿಂಗ್ ಕಾರ್ಯದಲ್ಲಿ ಎತ್ತಿದ ಕೈ. ಕಳೆದ ಐದು ವರ್ಷಗಳ ಹಿಂದೆ ರಾಮನಗರ ಸಮೀಪದ ಅರಣ್ಯದಲ್ಲಿ ಸೆರೆಹಿಡಿದು ಪಳಗಿಸಿದ್ದ ಆನೆಯಾಗಿದ್ದು ಎರಡನೇ ಬಾರಿಗೆ ದಸರಾ ಮಹೋತ್ಸವದಲ್ಲಿ ಭಾಗವಹಿಸುತ್ತಿದೆ. ಗೋಪಿ- ಈ ಆನೆಯನ್ನು 1993ರಲ್ಲಿ ಶಾಲೆಕೊಪ್ಪ ಅರಣ್ಯದಲ್ಲಿ ಸೆರೆಹಿಡಿದು ಪಳಗಿಸಿದ ಆನೆ ಕಳೆದೆಂಟು ವರ್ಷಗಳಿಂದ ದಸರಾ ಮಹೋತ್ಸವದಲ್ಲಿ ಭಾಗವಹಿಸುತ್ತಿದೆ 2015ರಿಂದ ಅರಮನೆ ಪೂಜ ವಿಧಾನಗಳಲ್ಲಿ ಭಾಗವಹಿಸುತ್ತಿದೆ.

ಧನಂಜಯ- ಈ ಆನೆಯನ್ನು 2013ರಲ್ಲಿ ಹಾಸನ ಜಿಲ್ಲೆಯ ಯಳಂದೂರು ವಲಯ ವ್ಯಾಪ್ತಿಯಲ್ಲಿ ಸೆರೆಹಿಡಿಯಲಾಗಿದ್ದು ಕಳೆದ ಎರಡು ವರ್ಷಗಳಿಂದ ದಸರಾ ಮಹೋತ್ಸವದಲ್ಲಿ ಭಾಗವಹಿಸುತ್ತಿದೆ. ಪಾರ್ಥಸಾರಥಿ- ಕಾಡಾನೆ ಮತ್ತು ಹುಲಿ ಕಾರ್ಯಾಚರಣೆಯಲ್ಲಿ ಬಳಸಲಾಗುತ್ತಿದ್ದು, ವಾಹನದ ಶಬ್ದ ಜನಸಂದಣೆಗೆ ಹೊಂದಿಕೊಳ್ಳುವಂತೆ ತರಬೇತಿ ನೀಡಲಾಗಿದೆ. ಈ ಆನೆಯು ಎರಡನೇ ಅವಗೆ ದಸರಾ ಮಹೋತ್ಸವದಲ್ಲಿ ಭಾಗವಹಿಸುತ್ತಿದೆ.

ವಿಜಯ- ಈ ಆನೆಯು ಬಹಳ ಸಾದು ಸ್ವಭಾವಾದಗಿದ್ದು 1965ರಲ್ಲಿ ದುಬಾರೆ ಅರಣ್ಯ ಪ್ರದೇಶದಲ್ಲಿ ಸೆರೆ ಹಿಡಿಯಲಾಗಿತ್ತು ಕಳೆದ 14 ವರ್ಷಗಳಿಂದ ದಸರಾ ಮಹೋತ್ಸವದಲ್ಲಿ ಭಾಗವಹಿಸುತ್ತಿದೆ. ವರಲಕ್ಷ್ಮಿ- ಈ ಆನೆಯು ಕಳೆದ ಮೂರು ವರ್ಷಗಳಿಂದ ದಸರಾ ಮಹೋತ್ಸವದಲ್ಲಿ ಭಾಗವಹಿಸುತ್ತಿದೆ

ವರದಿ :-ರವಿಕುಮಾರ್ ಹುಣಸೂರು

Protest: ಮಹದಾಯಿ ನೀರಿಗಾಗಿ, ಚಕ್ಕಡಿ ಸಮೇತ ಡಿಸಿ ಕಚೇರಿ ಮುಂದೆ ರೈತರ ಧರಣಿ

Gruhalaxmi: ಧಾರವಾಡ ಜಿಲ್ಲೆಯಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ

Protest: ಕಟ್ಟಡ ಕಾರ್ಮಿಕರಿಂದ ಪ್ರತಿಭಟನೆ: ಸರ್ಕಾರದ ವಿರುದ್ದ ಘೋಷಣೆ

- Advertisement -

Latest Posts

Don't Miss