Thursday, June 19, 2025

Latest Posts

ಅಧಿಕ ಮಕ್ಕಳನ್ನ ಹೆತ್ತವರಿಗೆ ನಾಯ್ಡು ಗುಡ್ ನ್ಯೂಸ್ : ಫ್ಯಾಮಿಲಿ ಪ್ಲ್ಯಾನಿಂಗ್ ಬಗ್ಗೆ ಆಂಧ್ರ ಸಿಎಂ ಮನವಿ ಏನು..?

- Advertisement -

Political News: ದಕ್ಷಿಣ ಭಾರತದ ರಾಜ್ಯಗಳ ಜನಸಂಖ್ಯೆ ಇಳಿಕೆ ಬಗ್ಗೆ ಹಿಂದೊಮ್ಮೆ ಕಳವಳ ವ್ಯಕ್ತಪಡಿಸಿದ್ದ ಆಂದ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಸರ್ಕಾರ ಇದೀಗ ಹೆಚ್ಚು ಮಕ್ಕಳನ್ನು ಹೊಂದುವಂತೆ ಪರಿವಾರಗಳನ್ನು ಪ್ರೋತ್ಸಾಹಿಸಲು ಆರ್ಥಿಕ ಬೆಂಬಲ ನೀಡಲಾಗುವುದು ಎಂದು ತಿಳಿಸಿದೆ.

ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪ್ರಸ್ತುತವಿರುವ ರಾಜ್ಯದ ಫಲವತ್ತತೆ ಹೆಚ್ಚಬೇಕು. ಆದ್ದರಿಂದ ಇನ್ನು ಪ್ರತಿ ಪರಿವಾರವನ್ನು ಒಂದು ಘಟಕವೆಂದು ಪರಿಗಣಿಸಿ, ಅದಕ್ಕೆ ಆರ್ಥಿಕ ಪ್ರೋತ್ಸಾಹ ನೀಡಲಾಗುವುದು. ಇದೊಂದು ಹೂಡಿಕೆಯಾಗಿದೆ. ಕುಟುಂಬ ದೊಡ್ಡದಾದಂತೆ ಪ್ರೋತ್ಸಾಹ ಧನವೂ ಹೆಚ್ಚುವುದು ಎನ್ನುವ ಮೂಲಕ ಕುಟುಂಬ ವಿಸ್ತರಣೆಗೆ ಪರೋಕ್ಷವಾಗಿ ಕರೆ ನೀಡಿದ್ದಾರೆ.

ಅಲ್ಲದೆ ಪ್ರಮುಖವಾಗಿ ದಕ್ಷಿಣದ ರಾಜ್ಯಗಳಲ್ಲಿ ಜನಸಂಖ್ಯೆ ಕೊರತೆ ಮುಂದಿನ ದಿನಗಳಲ್ಲಿ ಭಾರಿ ಅಪಾಯ ತರಲಿದೆ ಎಂದು ಎಚ್ಚರಿಸಿದ್ದಾರೆ.

ಹೆಚ್ಚಿನ ಮಕ್ಕಳನ್ನು ಹೊಂದಿದರೆ ಆರ್ಥಿಕ ನೆರವು ಘೋಷಣೆಗೆ ಚಿಂತನೆ..

ಈ ಕಾರಣಕ್ಕಾಗಿಯೇ 2ಕ್ಕಿಂತ ಹೆಚ್ಚು ಮಕ್ಕಳನ್ನು ಹೆತ್ತವರು ಸ್ಥಳೀಯ ಸಂಸ್ಥೆಗಳ ಚುನಾವಣಾ ಸ್ಪರ್ಧೆಗೆ ಅನರ್ಹ ಎಂಬ ನಿಯಮವನ್ನು ರದ್ದುಗೊಳಿಸಲು ಮುಂದಾಗಿದ್ದಾರೆ. ಅಲ್ಲದೆ ಹೆಚ್ಚು ಹೆಚ್ಚು ಮಕ್ಕಳನ್ನು ಹೆರುವ ಕುಟುಂಬಗಳಿಗೆ ಆರ್ಥಿಕ ನೆರವು ಘೋಷಣೆ ಮಾಡುವ ಮೂಲಕ ಜನಸಂಖ್ಯೆ ಏರಿಕೆ ಕ್ರಮದ ಬಗ್ಗೆ ಗಮನ ಹರಿಸಿದ್ದಾರೆ.

ಶಾಲೆಗೆ ಹೋಗುವ ಎಲ್ಲಾ ಮಕ್ಕಳಿಗೂ 15 ಸಾವಿರ ಆರ್ಥಿಕ ನೆರವು..

ಇನ್ನೂ ಶಾಲೆಗೆ ಹೋಗುವ ಎಲ್ಲಾ ಮಕ್ಕಳಿಗೂ 15 ಸಾವಿರ ರೂಪಾಯಿಗಳ ಆರ್ಥಿಕ ನೆರವು ನೀಡಲಾಗುವುದು. ಅಲ್ಲದೆ ಅತ್ಯಂತ ಪಾರದರ್ಶಕವಾಗಿ ನಡೆಸಲು ಉದ್ದೇಶಿಸಲಾಗಿದ್ದು, ನೇರವಾಗಿ ಮಕ್ಕಳ ತಾಯಂದಿರ ಖಾತೆಗೆ ಈ ನೆರವಿನ ಹಣವನ್ನು ಜಮೆ ಮಾಡಲು ಯೋಜನೆ ರೂಪಿಸಲಾಗಿದೆ.
ಇದನ್ನು ಹೊರತುಪಡಿಸಿ ಅಧಿಕ ಮಕ್ಕಳನ್ನು ಹೊಂದುವ ದಂಪತಿಗಳಿಗೆ ಆರ್ಥಿಕ ನೆರವು ನೀಡುವ ಚಿಂತನೆ ನಡೆಸಲಾಗುತ್ತಿದೆ ಎಂದು ನಾಯ್ಡು ತಿಳಿಸಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಬಂಧ ಹೇರಲಾಗಿತ್ತು..

ಮುಖ್ಯವಾಗಿ ಆಂಧ್ರಪ್ರದೇಶದಲ್ಲಿ ಇತ್ತೀಚೆಗಷ್ಟೇ, ಮಹಿಳೆಯರ ಮಾತೃತ್ವದ ರಜೆ ಮೇಲಿನ 2 ಬಾರಿಯ ಮಿತಿಯನ್ನು ತೆಗೆದು ಹಾಕಲಾಗಿತ್ತು. ಅದಕ್ಕೂ ಮೊದಲು, 2ಕ್ಕಿಂತ ಹೆಚ್ಚು ಮಕ್ಕಳಿರುವವರು ಸ್ಥಳೀಯ ಚುನಾವಣೆಗಳಲ್ಲಿ ಸ್ಪರ್ಧಿಸದಂತೆ ನಿರ್ಬಂಧ ಹೇರಲಾಗಿತ್ತು.

- Advertisement -

Latest Posts

Don't Miss