ಹುಬ್ಬಳ್ಳಿ: ಭಾರತೀಯ ರೈಲ್ವೆ ಒಂದಿಲ್ಲೊಂದು ರೀತಿಯಲ್ಲಿ ಸಮಾಜಮುಖಿ ಹಾಗೂ ರಾಷ್ಟ್ರಪ್ರೇಮದ ಕಾರ್ಯವನ್ನು ಮಾಡುತ್ತಲೇ ಸಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ನನ್ನ ಮಣ್ಣು ನನ್ನ ದೇಶ ಎಂಬ ಅಭಿಯಾನಕ್ಕೆ ಕೈ ಜೋಡಿಸುವ ಮೂಲಕ ಮತ್ತೊಮ್ಮೆ ರಾಷ್ಟ್ರೀಯತೆಯನ್ನು ಎತ್ತಿ ಹಿಡಿದಿದೆ.
ದೇಶಾದ್ಯಂತ ನನ್ನ ಮಣ್ಣು ನನ್ನ ದೇಶ ಅಭಿಯಾನ ಜೋರಾಗಿಯೇ ನಡೆದಿದೆ. ಈ ನಿಟ್ಟಿನಲ್ಲಿ ಅಭಿಯಾನದ ಅಂಗವಾಗಿ ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿರುವ “ಅಮೃತ ಕಳಸ ಯಾತ್ರೆ”ಯನ್ನು ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಸ್ವಾಗತಿಸಿ, ಧಾರವಾಡ ಜಿಲ್ಲೆಯಿಂದ ಸಂಗ್ರಹಿಸಿದ ಮಣ್ಣನ್ನು ಹಸ್ತಾಂತರಿಸಲಾಯಿತು. ಹೌದು..ಹುಬ್ಬಳ್ಳಿಯ ನೈಋತ್ಯ ರೈಲ್ವೆ ವಲಯದಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ಅದ್ದೂರಿಯಾಗಿ ಅಮೃತ ಕಳಸ ಯಾತ್ರೆಯ ರೈಲನ್ನು ಸ್ವಾಗತಿಸುವ ಮೂಲಕ ಅಭಿನಂದನೆ ಸಲ್ಲಿಸಲಾಯಿತು.
ಇನ್ನೂ ಧಾರವಾಡ ಜಿಲ್ಲೆಯಿಂದ ಸಂಗ್ರಹಿಸಿದ ಮಣ್ಣನ್ನು ಹಸ್ತಾಂತರ ಮಾಡುವ ಮೂಲಕ ಅಮೃತ ಕಳಸ ಯಾತ್ರೆಯಲ್ಲಿ ಭಾಗಿಯಾಗಿರುವುದು ನಿಜಕ್ಕೂ ವಿಶೇಷವಾಗಿ. ಅಲ್ಲದೇ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮಹಾಪೌರರು ಸೇರಿದಂತೆ ರೈಲ್ವೆ ಅಧಿಕಾರಿಗಳು ಭಾಗವಹಿಸಿದ್ದರು.
ಹು-ಧಾ ಪಾಲಿಕೆಯ ಧೀಮಂತ ಪ್ರಶಸ್ತಿಗೂ ಲಾಬಿ: ಸಾಧಕರಿಗೆ ಸಿಗಲಿ ಸೂಕ್ತ ಗೌರವ..!
ಅತ್ಯಾಚಾರ, ದರೋಡೆ ಮಾಡುವುದರಲ್ಲಿ ಮುಸ್ಲಿಮರೇ ನಂ.1 ಎಂದ ರಾಜಕಾರಣಿ ಅಜ್ಮಲ್; ಭಾರಿ ವಿವಾದ