National News:
ಧರ್ಮಗುರುವೊಬ್ಬರು ಸಚಿವರ ಮಾತಿಗೆ ಕೆಂಡಾಮಂಡಲವಾಗಿದ್ದಾರೆ.ಪವಿತ್ರ ಗ್ರಂಥ ರಾಮ ಚರಿತ ಮಾನಸವು ಸಮಾಜದಲ್ಲಿ ದ್ವೇಷ ಮತ್ತು ಒಡಕು ಮೂಡಿಸುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಬಿಹಾರದ ಶಿಕ್ಷಣ ಸಚಿವ ಚಂದ್ರಶೇಖರ್ ಅವರ ನಾಲಿಗೆಯನ್ನು ಕತ್ತರಿಸುವ ಯಾರಿಗಾದರೂ ನಾನು 10 ಕೋಟಿ ರೂಪಾಯಿ ಬಹುಮಾನ ಘೋಷಿಸುತ್ತೇನೆ ಎಂದು ಅಯೋಧ್ಯೆ ಧರ್ಮಗುರು ಜಗದ್ಗುರು ಪರಮಹಂಸ ಆಚಾರ್ಯ ಹೇಳಿದ್ದಾರೆ ಎನ್ನಲಾಗಿದೆ.
ಈ ಕುರಿತು ಮಾತನಾಡಿರುವ ಅವರು, ಬಿಹಾರದ ಶಿಕ್ಷಣ ಸಚಿವರು ರಾಮಚರಿತ ಮಾನಸ ಪುಸ್ತಕವನ್ನು ದ್ವೇಷವನ್ನು ಹರಡುವ ಪುಸ್ತಕ ಎಂದು ಬಣ್ಣಿಸಿರುವ ರೀತಿಯಿಂದ ಇಡೀ ದೇಶಕ್ಕೆ ನೋವಾಗಿದ್ದು, ಇದು ಎಲ್ಲಾ ಸನಾತನಿಗೆ ಅವಮಾನವಾಗಿದೆ ಮತ್ತು ಈ ಹೇಳಿಕೆಗಾಗಿ ನಾನು ಕಾನೂನು ಕ್ರಮಕ್ಕೆ ಒತ್ತಾಯಿಸುತ್ತೇನೆ. ಒಂದು ವಾರದೊಳಗೆ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು, ಅವರು ಕ್ಷಮೆಯಾಚಿಸಬೇಕು. ಇದಾಗದಿದ್ದರೆ ಸಚಿವ ಚಂದ್ರಶೇಖರ್ ಅವರ ನಾಲಿಗೆಯನ್ನು ಕತ್ತರಿಸುವ ಯಾರಿಗಾದರೂ ನಾನು 10 ಕೋಟಿ ರೂಪಾಯಿ ಬಹುಮಾನ ನೀಡುತ್ತೇನೆ ಎಂದು ಹೇಳಿದ್ದಾರೆ.
“ಹುಬ್ಬಳ್ಳಿಯಲ್ಲಿ ನಡೆಸುತ್ತಿರುವುದು ಯುವಜನೋತ್ಸವ ಅಲ್ಲ ಯುವ ವಿನಾಶೋತ್ಸವ”..!: ಸಿದ್ದರಾಮಯ್ಯ