ಬೀದರ್ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ.ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಅವರು ಡೆತ್ ನೋಟ್ನಲ್ಲಿ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ಹೆಸರನ್ನು ಉಲ್ಲೇಖಿಸಿದ್ದಾರೆ. ಇದಾದ ಬಳಿಕ ಬಿಜೆಪಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಇದರ ನಡುವೆ ಗುತ್ತಿಗೆದಾರರ ಸಂಘ ಸಚಿನ್ ಗುತ್ತಿಗೆದಾರನೇ ಅಲ್ಲ ಎಂದು ಹೇಳಿತ್ತು, ಈ ಕುಡಿರು ಮೃತ ಸಚಿನ್ ಸಹೋದರಿ ಪ್ರತಿಕ್ರಿಯೆ ನೀಡಿದ್ದಾರೆ.
ಸಚಿನ್ ಗುತ್ತಿಗೆದಾರನೇ ಅಲ್ಲ ಎಂದು ಗುತ್ತಿಗೆದಾರರ ಸಂಘದ ವರದಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಮೃತ ಸಚಿನ್ ಅವರ ಸಹೋದರಿ ಸುರೇಖಾ, ಸಚಿನ್ ಗುತ್ತಿಗೆದಾರ ಇದಾನೆ ಅಂತಾ ನಾವು ಯಾವತ್ತು ಹೇಳಿಕೊಂಡಿಲ್ಲ. ಸಂಘದವರೇ ಬಂದು ಕೇಳಿದ್ರು ಅವನ ಹತ್ರ ಲೈಸೆನ್ಸ್ ಇದೆಯಾ ಎಂದು.? ಲೈಸೆನ್ಸ್ ಇರುವ ಬಗ್ಗೆ ನಮಗೆ ಗೊತ್ತಿಲ್ಲ, ಎಲ್ಲಾ ಡಾಕ್ಯುಮೆಂಟ್ಸ್ ಕಲಬುರಗಿ ಆಫೀಸ್ನಲ್ಲಿದ್ದವು. ಈಗಾಗಲೇ ಕಲಬುರಗಿ ಕಚೇರಿಯಲ್ಲಿ ಎಲ್ಲಾ ದಾಖಲೆಗಳು ನಾಶ ಮಾಡಿದ್ದಾರೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರದ ಮೇಲೆ ನಮಗೆ ನಂಬಿಕೆ ಉಳಿದಿಲ್ಲ, ಕೇಂದ್ರ ಸರ್ಕಾರದಿಂದ ಪ್ರಕರಣದ ತನಿಖೆಯಾಗಬೇಕು. ಪ್ರಕರಣದ ತನಿಖೆ ಸಿಬಿಐ ಮಾಡಿದರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಇದೆ. ಡೆತ್ನೋಟ್ನಲ್ಲಿ ಸ್ಪಷ್ಟವಾಗಿ ಬರೆದಿದ್ದಾರೆ, ಆದರೆ ಅದರ ಬಗ್ಗೆ ಆರೋಪಿಗಳನ್ನು ಪಶ್ನೆನೇ ಮಾಡಿಲ್ಲ. ತನಿಖಾಧಿಕಾರಿಗಳು ನಮಗೆ ಮಾತ್ರ ವಿಚಾರಣೆ ಮಾಡುತ್ತಿದ್ದಾರೆ. ಅವನ ಎಲ್ಲಾ ಡಾಕ್ಯುಮೆಂಟ್ ಕಲಬುರಗಿ ಆಫೀಸ್ನಲ್ಲಿದ್ದವು, ಎಲ್ಲ ದಾಖಲೆ ನಾಶ ಮಾಡಿದ್ದಾರೆ ಎಂದರು.
ಇಲ್ಲಿವರೆಗೂ ತನಿಖಾಧಿಕಾರಿಗಳು ಯಾವುದೇ ಮಾಹಿತಿ ಕೊಟ್ಟಿಲ್ಲ. ಎಫ್ಎಸ್ಎಲ್ ವರದಿ ಬಂದಿರುವ ಬಗ್ಗೆ ಪೋಸ್ಟ್ ಮಾಟಮ್ ರಿಪೋರ್ಟ್ ಬಗ್ಗೆ ಏನು ಮಾಹಿತಿ ಹೇಳುತ್ತಿಲ್ಲ. ಈ ಸರ್ಕಾರಕ್ಕೆ ಹೇಗೆ ನಾವು ನಂಬಬೇಕು, ನಮಗೆ ಸರ್ಕಾರದ ಮೇಲೆ ನಂಬಿಕೆ ಇಲ್ಲ. ಕೂಡಲೇ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಮೃತ ಸಚಿನ್ ಸಹೋದರಿ ಸುರೇಖಾ ಮನವಿ ಮಾಡಿದರು. ಮಾತ್ರವಲ್ಲ ಪ್ರಕರಣದ ಕುರಿತು ಪ್ರಧಾನಿ ಮೋದಿಯವರಿಗೂ ಪತ್ರ ಬರೆಯಲು ಪ್ರಯತ್ನಿಸುತ್ತೇವೆ ಎಂದರು.