National Political News: ಮೊನ್ನೆಯಷ್ಟೇ ಉತ್ತರಪ್ರದೇಶದ ಅಲಹಾಬಾಾದ್ನಲ್ಲಿ ಪಕ್ಷೇತರ ಅಭ್ಯರ್ಥಿಯೊಬ್ಬರು ಕೊರಳಿಗೆ ಚಪ್ಪಲಿ ಮಾಲೆ ಧರಿಸಿ, ಮತಯಾಚನೆ ಮಾಡಿದ್ದರು.
ಇದೀಗ ಇನ್ನೋರ್ವ ಪಕ್ಷೇತರ ಅಭ್ಯರ್ಥಿ, ತರಕಾರಿ ಮಾರಿ ಗಮನ ಸೆಳೆಯುತ್ತಿದ್ದಾರೆ. ತಿರುಚರಾಪಳ್ಳಿಯ ಪಕ್ಷೇತರ ಅಭ್ಯರ್ಥಿ ಎಸ್.ದಾಮೋದರನ್ ಎಂಬ ವ್ಯಕ್ತಿ ತರಕಾರಿ ಮಾರಾಟ ಮಾಡುತ್ತ, ಮತಯಾಚನೆ ಮಾಡುತ್ತಿದ್ದಾರೆ. ಇಲ್ಲಿನ ಗಾಂಧಿ ಮಾರ್ಕೆಟ್ನಿಂದ ಚುನಾವಣೆ ಪ್ರಚಾರ ಆಂರಭಿಸಿರುವ ದಾಮೋದರನ್ ಪದ್ಮಶ್ರೀ ಪುರಸ್ಕೃತರಾಗಿದ್ದಾರೆ.
ಮಾಜಿ ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಅವರಿಂದ ದಾಮೋದರನ್ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದಾರೆ. ಇವರು ಸ್ಪರ್ಧಿಸುವ ಕ್ಷೇತ್ರವನ್ನು ಸ್ವಚ್ಛವಾಗಿ, ಹಚ್ಚಹಸಿರು ಪ್ರದೇಶವಾಗಿ ಮಾಡಬೇಕು, ಅಲ್ಲಿ ರಿಂಗ್ ರೋಡ್ ನಿರ್ಮಾಣ ಮಾಡಬೇಕು ಎಂಬ ಕನಸು ಹೊಂದಿದ್ದಾರಂತೆ. ಇವರು ಹಲವು ವರ್ಷಗಳ ಕಾಲ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದ್ದಾರೆ. ಇದೀಗ ಪಕ್ಷೇತರ ಅಭ್ಯರ್ಥಿಯಾಗಿದ್ದು, ತರಕಾರಿ ಮಾರಿ, ಮತಯಾಚನೆ ಮಾಡುತ್ತಿದ್ದಾರೆ.
ಇಬ್ಬರು ಸೇರಿ ಪ್ರಚಾರವನ್ನು ನಿಲ್ಲಿಸಿಬಿಡೋಣ, ಯಾರು ಗೆಲ್ತಾರೆ ನೋಡೋಣ: ಜೋಶಿಗೆ ಲಾಡ್ ಸವಾಲ್
ಯಾರು ಏನೇ ತಿಪ್ಪರಲ್ಲಾಗ ಹೊಡೆದರೂ ಪ್ರಹ್ಲಾದ್ ಜೋಶಿ ಗೆಲ್ಲುತ್ತಾರೆ ಮೋದಿ ಪ್ರಧಾನಿಯಾಗುತ್ತಾರೆ: ಅರವಿಂದ್ ಬೆಲ್ಲದ್..
ಧಾರವಾಡ ಕ್ಷೇತ್ರದಲ್ಲಿ ನಾವು ಗೆದ್ದೇ ಗೆಲ್ತೀವಿ: ಶಾಸಕ ಮಹೇಶ್ ಟೆಂಗಿನಕಾಯಿ