Saturday, July 12, 2025

Latest Posts

ಹಳೇ ಹುಬ್ಬಳ್ಳಿ ಗಲಭೆ ಕೇಸ್: ಮೂವರನ್ನ ಹೊರತುಪಡಿಸಿ 105 ಜನರಿಗೆ ಜಾಮೀನು ಮಂಜೂರು

- Advertisement -

Hubli News: ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನ ಹೊರತುಪಡಿಸಿ ಉಳಿದ 105 ಜನರಿಗೆ ಬೆಂಗಳೂರಿನ ಹೈಕೋರ್ಟ್‌ನಿಂದ ಇಂದು ಜಾಮೀನು ಮಂಜೂರು ಮಾಡಲಾಗಿದೆ. ಕಳೆದ ಒಂದು ವರ್ಷ ಹತ್ತು ತಿಂಗಳ ಹಿಂದೆ ಹುಬ್ಬಳ್ಳಿಯಲ್ಲಿ ಗಲಾಟೆಯಾಗಿತ್ತು. ವಾಟ್ಸಪ್ ಸ್ಟೇಟಸ್ ವಿಚಾರವಾಗಿ ಎರಡು‌ ಕೋಮುಗಳ ನಡುವೆ ಗಲಾಟೆಯಾಗಿತ್ತು. ಗಲಾಟೆ ವೇಳೆ ಕೆಲವರು ಪೊಲೀಸ್ ಠಾಣೆಗೆ ಕಲ್ಲು ಎಸೆದಿದ್ದರು.

ಅಲ್ಲದೇ ಪೊಲೀಸ್ ಠಾಣೆ ಮುಂಭಾಗದಲ್ಲಿ ಬಂದು ಗಲಾಟೆ ಮಾಡಿದ್ದರು. ಪೊಲೀಸ್ ವಾಹನಗಳನ್ನ ಜಖಂ ಮಾಡಿದ್ದರು. ಏಪ್ರೀಲ್ 16-2022 ರಂದು ಡಿಜೆ ಹಳ್ಳಿ ಕೆಜಿ ಹಳ್ಳಿ ಮಾದರಿಯಲ್ಲಿ ಗಲಾಟೆ ನಡೆದಿತ್ತು. ಒಟ್ಟು 152 ಜನರ ಬಂಧನವಾಗಿತ್ತು. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ 12 ಪ್ರಕರಣಗಳು ದಾಖಲಾಗಿದ್ದವು.

ಇಂದು 105 ಜನ ಯುವಕರಿಗೆ ಜೈಲಿನಿಂದ ಮುಕ್ತಿ ನೀಡಲಾಗಿದೆ. ಇನ್ನು ಮೂವರ ಪ್ರಕರಣ ಸುಪ್ರೀಂ ಕೋರ್ಟ್ ವಿಚಾರಣೆ ಹಂತದಲ್ಲಿರುವುದರಿಂದ ಜಾಮೀನು ವಿಳಂಬವಾಗಿದೆ.

ಗಲಾಟೆಯಲ್ಲಿ 10 ಕ್ಕೂ ಹೆಚ್ಚು ಪೊಲೀಸ್ ವಾಹನ ಜಖಂ ಆಗಿದ್ದವು. ಗಲಭೆಕೋರರು ಪೊಲೀಸ್ ಇನ್ಸಪೆಕ್ಟರ್ ಸೇರಿ ಏಳು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದರು. ಈ ಹಿಂದೆ 152 ಜನರಲ್ಲಿ ಕೆಲ ಬಾಲಾಪರಾಧಿಗಳು ಸೇರಿ 10 ಕ್ಕೂ ಹೆಚ್ಚು ಜನರಿಗೆ ಜಾಮೀನು ಮಂಜೂರ ಮಾಡಲಾಗಿತ್ತು. ನಂತರ ಅಂದರೆ ಕಳೆದ ಎರಡೂ ‌ತಿಂಗಳ ಹಿಂದೆ 35 ಜನರಿಗೆ ಸುಪ್ರೀಂ ಕೋರ್ಟ್ನಲ್ಲಿ ಜಾಮೀನು ಮಂಜೂರಾಗಿತ್ತು. ಈಗ ಮೂವರನ್ನ ಹೊರತುಪಡಿಸಿ ಉಳಿದವರೆಲ್ಲರಿಗೂ ಜಾಮೀನು ನೀಡಲಾಗಿದೆ.

ಫೆ. 5 ರಂದು ಅಂಜುಮನ್ ಸಂಸ್ಥೆಯ ಚುನಾವಣೆ ನಾಮಪತ್ರ ಸಲ್ಲಿಸುವ ಸಮಯದಲ್ಲಿ ಮಕ್ಕಳಿಗಾಗಿ ಕುಟುಂಬಸ್ಥರು ಕಣ್ಣೀರು ಹಾಕಿದ್ದರು. ನಮ್ಮ‌ ಮಕ್ಕಳನ್ನ ಜೈಲಿನಿಂದ ಬಿಡುಗಡೆ ಮಾಡಿ ನಂತರ ನೀವು ಚುನಾವಣೆ ಮಾಡಿ. ನಮ್ಮ ಮಕ್ಕಳು ಜೈಲಿನಲ್ಲಿದ್ದಾರೆ. ಈ ಸಮಯದಲ್ಲಿ ಚುನಾವಣೆ ಬೇಡ ಎಂದು ಮುಸ್ಲಿಂ ಸಮುದಾಯದ ಮುಖಂಡರನ್ನ ಪೋಷಕರು ತರಾಟೆಗೆ ತೆಗೆದುಕೊಂಡಿದ್ದರು.

ಬಂಧಿತರನ್ನು ಜೈಲಿನಿಂದ ಬಿಡುಗಡೆಗೊಳಿಸುವ ಜವಾಬ್ದಾರಿಯನ್ನು ಅಂಜುಮನ್ ಸಂಸ್ಥೆ ಹೊತ್ತುಕೊಂಡಿದೆ. 152 ಬಂಧಿತರ ಪೈಕಿ 44 ಮಂದಿಗೆ ಈಗಾಗಲೇ ಜಾಮೀನು ಕೊಡಿಸಿದೆ. ಇನ್ನೂ 108 ಮಂದಿ ಜೈಲಿನಲ್ಲಿದ್ದು, ಇವರನ್ನು ಬಿಡುಗಡೆಗೊಳಿಸುವಂತೆ ಪೋಷಕರು ಪಟ್ಟು ಹಿಡಿದಿದ್ದರು.

ಹಳೆ ಹುಬ್ಬಳ್ಳಿಯ ಪತೇಶಾ ವಲಿ ದರ್ಗಾದಲ್ಲಿ ಪೂಜೆ
ಹಳೆ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ಹಿನ್ನೆಲೆ ಹಳೆ ಹುಬ್ಬಳ್ಳಿಯ ಪತೇಶಾ ವಲಿ ದರ್ಗಾದಲ್ಲಿ ಮಾಜಿ ಸಚಿವ ಎಎಂ ಹಿಂಡಸಗೇರಿ ನೇತೃತ್ವದಲ್ಲಿ ಪೂಜೆ ಮಾಡಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಮುಸ್ಲಿಂ ಬಾಂಧವರು ದರ್ಗಾದಲ್ಲಿ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದ್ದಾರೆ. ಅಂಜುಮನ್ ಸಂಸ್ಥೆ ಮಾಜಿ ಅಧ್ಯಕ್ಷ ಮಹಮ್ಮದ್ ಯೂಸುಫ್ ಸವಣೂರು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಲ್ತಾಫ್ ಹಳ್ಳೂರು, ಎಐಎಂಐಎಂ ಪಾಲಿಕೆ ಸದಸ್ಯ ನಜೀರ್ ಅಹ್ಮದ್ ಹೊನ್ನಾಳ್ ಮತ್ತಿತರರು ಭಾಗಿ ಆಗಿದ್ದರು.

ನ್ಯಾಯಾಲಯದಿಂದ ಕೊನೆಗೂ ನಮಗೆ ನ್ಯಾಯ ಸಿಕ್ಕಿದೆ. ಹಿಂದಿನ ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣ ಮಾಡಿದ್ದು, ರಾಷ್ಟ್ರ ದ್ರೋಹ ಕಾಯ್ದೆ ಅಡಿ ಪ್ರಕರಣ ದಾಖಲಿಸಿತ್ತು. ಇದೀಗ ಹೈಕೋರ್ಟ್ನಿಂದ 107 ಜನರಿಗೆ ಬೇಲ್ ಸಿಕ್ಕಿದೆ. ಬೇಲ್ ಸಿಕ್ಕಿದ್ದರಿಂದ ಹಬ್ಬದ ವಾತಾವರಣ ನಿರ್ಮಾಣವಾಗಿದೆ ಎಂದಿದ್ದಾರೆ.

ಉತ್ತರಪ್ರದೇಶದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಯತ್ನಿಸಿದವರ ಬಂಧನ

ಮದ್ಯನೀತಿ ಪ್ರಕರಣ: ಕೊನೆಗೂ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾದ ದೆಹಲಿ ಸಿಎಂ

ಉತ್ತರಪ್ರದೇಶದಲ್ಲಿ ಇನ್ನು 6 ತಿಂಗಳು ಪ್ರತಿಭಟನೆ ನಡೆಸುವಂತಿಲ್ಲ: ಸಿಎಂ ಯೋಗಿ ಆದಿತ್ಯನಾಥ್

- Advertisement -

Latest Posts

Don't Miss