Tuesday, October 14, 2025

Latest Posts

ಕೋರ್ಟ್‌ನಲ್ಲಿ ತಿಮರೋಡಿ ಭವಿಷ್ಯ

- Advertisement -

ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ತಲೆ ಮೇಲೆ, ಎರಡೆರಡು ತೂಗುಗತ್ತಿ ನೇತಾಡುತ್ತಿದೆ. ದಕ್ಷಿಣ ಕನ್ನಡದಿಂದಲೇ ಗಡಿಪಾರು ಮಾಡಲಾಗಿದೆ. ಮತ್ತು ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ. ಸೆಪ್ಟೆಂಬರ್‌ 21, 25ರಂದು ವಿಚಾರಣೆಗೆ ಬರಲು ನೋಟಿಸ್‌ ನೀಡಲಾಗಿತ್ತು. ಆದ್ರೆ ತಿಮರೋಡಿ ಗೈರಾಗಿದ್ರು.
ಇದೀಗ 3ನೇ ಬಾರಿ ನೋಟಿಸ್‌ ನೀಡಿದ್ದು ವಿಚಾರಣೆಗೆ ಹಾಜರಾಗದೇ ಇದ್ರೆ, ತನಿಖೆಗೆ ಸಹಕರಿಸುತ್ತಿಲ್ಲ ಎಂದು ಪ್ರಕರಣ ದಾಖಲಿಸುವ ಸಾಧ್ಯತೆ ಇದೆ.

ಮತ್ತೊಂದೆಡೆ, ಗಡಿಪಾರು ಆದೇಶ ಪ್ರಶ್ನಿಸಿ ತಿಮರೋಡಿ, ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಗಡಿಪಾರು ಆದೇಶ ರದ್ದು ಮಾಡುವಂತೆ ಮನವಿ ಮಾಡಿದ್ದಾರೆ. ಈ ಮಧ್ಯೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ, ನಿರೀಕ್ಷಣಾ ಜಾಮೀನಿಗೂ ಅರ್ಜಿ ಸಲ್ಲಿಸಿದ್ದು, ಇಂದೇ ವಿಚಾರಣೆ ನಡೆಯಲಿದೆ. ಸದ್ಯ, ತಿಮರೋಡಿ ಮೊಬೈಲ್‌ ಸ್ವಿಚ್‌ ಆಫ್ ಮಾಡಿಕೊಂಡಿದ್ದು, ಜಾಮೀನು ಸಿಗದಿದ್ದರೆ ಬಂಧನ ಸಾಧ್ಯತೆಯೂ ಹೆಚ್ಚಿದೆ. ಈಗಾಗಲೇ ತಿಮರೋಡಿಗಾಗಿ 2 ಪೊಲೀಸರ ತಂಡ ಹುಡುಕಾಟ ನಡೆಸಿದೆ.

ಇನ್ನು, ಧರ್ಮಸ್ಥಳ ಪ್ರಕರಣ ಸಂಬಂಧ ಎಸ್‌ಐಟಿ ವಿಚಾರಣೆ ಮುಂದುವರಿದಿದೆ. ನಾಲ್ಕು ಮಂದಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಿಗೆ ನೋಟಿಸ್ ನೀಡಿದ್ದು, ಇಂದು ವಿಚಾರಣೆ ನಡೆಸಲಾಗ್ತಿದೆ. ಕೇಶವ್ ಬೆಳಾಲ್, ಪ್ರಭಾಕರ ಪೂಜಾರಿ, ಗೀತಾ ಹಾಗೂ ಚಂದನ್ ಕಾಮತ್ ವಿಚಾರಣೆಗೆ ಹಾಜರಾಗಿದ್ದಾರೆ. ಯುಡಿಆರ್ ಪ್ರಕರಣಗಳಲ್ಲಿ ಶವ ಹೂತ ಕೇಸ್‌ಗಳಿಗೆ ಬಿಲ್ ಪಾವತಿಯಾಗಿದ್ದು, ಈ ಬಗ್ಗೆ ಮಾಹಿತಿ ಸಂಗ್ರಹಿಸಲು ಎಸ್‌ಐಟಿ ಮುಂದಾಗಿದೆ.

- Advertisement -

Latest Posts

Don't Miss