Sunday, September 8, 2024

Latest Posts

ನಮ್ಮ ಕಾಂಗ್ರೆಸ್ ಕಾರ್ಯಕರ್ತರು ಮೈತ್ರಿ ಕಾರ್ಯಕರ್ತರಿಗಿಂತಲೂ ಚೆನ್ನಾಗಿ ಕೆಲಸ ಮಾಡ್ತಾರೆ: ಕೆ.ವಿ.ಗೌತಮ್‌

- Advertisement -

Kolar News: ಕೋಲಾರ: ಕೋಲಾರದಲ್ಲಿ ಕಾಂಗ್ರೆಸ್ ಲೋಕಸಭೆ ಟಿಕೇಟ್ ನನಗೆ ಬೇಕು, ನನಗೆ ಬೇಕು ಎಂದು ಹಲವರು ಹಠ ಮಾಡಿ, ಬಳಿಕ ರಾಜೀನಾಮೆ ಡ್ರಾಮಾ ಎಲ್ಲಾ ಆದ ಬಳಿಕ, ಯಾರೂ ಊಹಿಸದ ವ್ಯಕ್ತಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೇಟ್ ನೀಡಿದೆ. ಅವರೇ, ಕೆ.ವಿ.ಗೌತಮ್.

ಇಂದು ಕೆ.ವಿ.ಗೌತಮ್,  ಕೋಲಾರದಲ್ಲಿ ಹಿರಿಯ ಕಾಂಗ್ರೆಸ್ ನಾಯಕರಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಗೌತಮ್, ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ಕೆ.ಹೆಚ್.ಮುನಿಯಪ್ಪ ಸೇರಿದಂತೆ ಕಾಂಗ್ರೆಸ್ ನಾಯಕರು ಬಂದಿರುವುದು ಶುಭ ಸಂದೇಶವಾಗಿದೆ. ಕ್ಷೇತ್ರದಲ್ಲಿ ಯಾವುದೇ ಅಡೆತಡೆ ಇಲ್ಲದೆ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದ್ದಾರೆ.

ಕೋಲಾರ ಕ್ಷೇತ್ರದಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ. ಕ್ಷೇತ್ರದಲ್ಲಿ ಐದು ಶಾಸಕರು ಇರುವ ಕಾರಣ ಏನೂ ಸಮಸ್ಯೆಯಾಗಲ್ಲ. ನಾಳೆಯಿಂದ ಪಂಚಾಯಿತಿ ಮಟ್ಟದಲ್ಲಿ ಪ್ರಚಾರ ಮಾಡುತ್ತೇವೆ. ಏ.6 ರಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಕ್ಷೇತ್ರಕ್ಕೆ ಬರ್ತಾರೆ. ಜೆಡಿಎಸ್ ಬಿಜೆಪಿ ಒಂದಾದರೂ ನಮಗೆ ಏನೂ ಸಮಸ್ಯೆಯಾಗುವುದಿಲ್ಲ. ನಮ್ಮ ಕಾಂಗ್ರೆಸ್ ಕಾರ್ಯಕರ್ತರು ಅವರಿಗಿಂತಲೂ ಚೆನ್ನಾಗಿ ಕೆಲಸ ಮಾಡ್ತಾರೆ ಎಂದು ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ: ವಿಜಯೇಂದ್ರ ಆಹ್ವಾನದ ಬಳಿಕವೂ ಗೈರಾದ ಪ್ರೀತಂಗೌಡ

H. D. Kumaraswamy : ಮಂಡ್ಯ : ನಾಮಪತ್ರ ಸಲ್ಲಿಸಿದ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ

ನಾಮಪತ್ರ ಸಲ್ಲಿಕೆ ಬಳಿಕ ಡಿ.ಕೆ.ಸುರೇಶ್ ಕಾರಿಗೆ ಮೈತ್ರಿ ಕಾರ್ಯಕರ್ತರಿಂದ ಮುತ್ತಿಗೆ..

- Advertisement -

Latest Posts

Don't Miss