Tuesday, May 14, 2024

Latest Posts

ನೇಹಾಗೆ ಆದಂತಹ ಘಟನೆ ಇನ್ನೊಬ್ಬರಿಗೆ ಆಗಬಾರದು ಅನ್ನೋದು ನಮ್ಮ ಬೇಡಿಕೆ: ಮುರುಗೇಶ್ ನಿರಾಣಿ

- Advertisement -

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ನೇಹಾ ನಿವಾಸಕ್ಕೆ ಭೇಟಿ ನೀಡಿರುವ ಮಾಜಿ ಸಚಿವ ಮುರುಗೇಶ್ ನಿರಾಣಿ, ನೇಹಾ ತಂದೆ ತಾಯಿಗೆ ಸಾಂತ್ವಾನ ಹೇಳಿದ್ದಾರೆ.

ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆಯಾಗಿರುವದನ್ನ ನಾನು ಖಂಡಿಸಿಸುತ್ತೇನೆ. ಹತ್ಯೆ ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು ಈ ಕುಟುಂಬಕ್ಕೆ ನ್ಯಾಯ ಸಿಗಬೇಕು. ತಾಯಿ ಮುಂದೇನೆ ಈ ರೀತಿ ಹತ್ಯೆ ಆಗುತ್ತೆ ಅಂದರೆ ಆ ಕುಟುಂಬಕ್ಕೆ ಎಷ್ಟು ನೋವು ಆಗಿರಬೇಕು. ಹತ್ಯೆ ಮಾಡಿರುವ ಯುವಕ ಬಗ್ಗೆ ತನಿಖೆ ಮಾಡುತ್ತಿರುವ ಅಧಿಕಾರಿಗಳು ಮಾಹಿತಿ ಕಲೆ ಹಾಕಬೇಕು. ಆತನ ಹಿಂದೆ ಯಾರು ಇದ್ದಾರೆ ಯಾರ ಕೈವಾಡವಿದೆ ಅನ್ನೋದನ್ನ ತನಿಖೆ ನಡೆಸಬೇಕು. ಹತ್ಯೆಗೆ ಯಾರು ಪ್ರೇರಣೆ ಕೊಟ್ಟಿದ್ದಾರೆ ಅವರಿಗೂ ಶಿಕ್ಷೆಯಾಗಬೇಕು ಎಂದು ಮುರುಗೇಶ್ ನಿರಾಣಿ ಹೇಳಿದ್ದಾರೆ.

ನಮ್ಮ ಪಕ್ಷದ ಮುಖಂಡರರು, ಸ್ವಾಮೀಜಿಗಳು ಅನೇಕ ರಾಜಕೀಯ ಮುಖಂಡರು ಟ್ರೇಡ್ ಯುನಿಯನ್‌ನವರು ಕೂಡ ಬಂದು ಸಾಂತ್ವನ ಹೇಳಿದ್ದಾರೆ. ಒಂದನೇ ತಾರೀಖಿನಂದು ನಮ್ಮ ಕೇಂದ್ರ ಗೃಹ ಮಂತ್ರಿಗಳಾದ ಅಮಿತ್ ಶಾ ಅವರು ನಿರಂಜನ ಮನೆಗೆ ಭೇಟಿ ನೀಡಲಿದ್ದಾರೆ. ನಿರಂಜನ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳುವ ಕೆಲಸ ಅಮಿತ್ ಶಾ ಅವರು ಮಾಡಲಿದ್ದಾರೆ. ಕಾಲೇಜ್ ಕ್ಯಾಂಪಸ್ ಒಳಗೆ ಇಂತಹ ಘಟನೆಗಳು ಮುಂದೆ ಆಗಬಾರದು. ಅದಕ್ಕೆ ಸ್ಪೆಷಲ್ ಆ್ಯಕ್ಟ್ ತರಬೇಕು ಆವಾಗ ಇಂತಹ ಘಟನೆಗಳಿಗೆ ಕಡಿವಾಣ ಹಾಕಬಹುದು. ಕಾಂಗ್ರೆಸ್ ಕಾರ್ಪೊರೇಟರ ಇದ್ದಾರೆ ನಿರಂಜನ ಇವರ ಮನೆಗೆ ನಾವು ಸಾಂತ್ವನ ಹೇಳೋದು ಹೇಗೆ ರಾಜಕಾರಣ ಆಗುತ್ತೆ..? ಎಂದು ನಿರಾಣಿ ಪ್ರಶ್ನಿಸಿದ್ದಾರೆ.

ಇಂತಹ ಘಟನೆಗಳು ನಡೆದಾಗ ಎಲ್ಲರೂ ಬಂದು ಸಾಂತ್ವನ ಹೇಳುತ್ತಾರೆ ಆದ್ರೆ ಇದನ್ನ ಕಾಂಗ್ರೆಸ್ ರಾಜಕಾರಣ ಅಂತ ಶಬ್ದ ಬಳಸಬಾರದು. ನೇಹಾಗೆ ಆದಂತಹ ಘಟನೆ ಇನ್ನೊಬ್ಬರಿಗೆ ಆಗಬಾರದು ಅನ್ನೋದು ನಮ್ಮ ಬೇಡಿಕೆ. ಘಟನೆ ಆದ ನಂತರ ಹತ್ಯೆಯ ಸಾಧಕ ಬಾದಕಗಳ ಬಗ್ಗೆ ವಿಚಾರ ಮಾಡಿ ಸ್ಟೇಟಮೆಂಟ್ ಕೊಡಬೇಕಿತ್ತು. ಆದ್ರೆ ಸಿದ್ದರಾಮಯ್ಯನವರು ಗೃಹಸಚಿವರು ಈ ರೀತಿ ಹೇಳಿಕೆ ಕೊಡಬಾರದಿತ್ತು. ನಂತರ ಅವರ ಮನೆಗೆ ಬಂದು ಸಾಂತ್ವನ ಹೇಳಿ ಕ್ಷಮೆಯಾಚಿಸಿದ್ದಾರೆ. ಸಿಐಡಿ ಅಧಿಕಾರಿಗಳು ಪಕ್ಷಾತೀತವಾಗಿರುತ್ತಾರೆ. ನ್ಯಾಯ ಕೊಡಿಸುವ ದೃಷ್ಟಿಯಿಂದಲೇ ಸಿಎಂ ಅವರು ಸಿಐಡಿಗೆ ವಹಿಸಿದ್ದಾರೆ. ಹಾಗಾಗಿ ಯಾರಿಗೂ ಇದರಲ್ಲಿ ಹಸ್ತಕ್ಷೇಪ ಮಾಡುವ ಉದ್ದೇಶವಿರೋದಿಲ್ಲ ಎಂದು ಮುರುಗೇಶ್ ನಿರಾಣಿ ಹೇಳಿದ್ದಾರೆ.

ಅಮಿತ್ ಶಾ ಅವರು ಬಂದಾಗ ಈ ಬಗ್ಗೆ ಇನ್ನೂ ಚರ್ಚೆ ಮಾಡಿ ಮುಂದಿನ ತನಿಖೆ ಬಗ್ಗೆ ಹೇಗೆ ಅನ್ನೋದನ್ನ ತಿಳಿಸ್ತೇವಿ. ಸದ್ಯ ತನಿಖೆ ನಡೆಯುತ್ತಿದೆ ನಡೆಯಲಿ. ತನಿಖೆ ನಮಗೆ ಸಮರ್ಪಕವಾಗಿಲ್ಲ ಅನಿಸಿದ್ರೆ ನಾವು ಮುಂದೆ ಹೋರಾಟ ಮಾಡುತ್ತೇವೆ. ಒಂದು ವೇಳೆ ತನಿಖೆಯ ದಾರಿ ಯಾರಾದ್ರೂ ತಪ್ಪಿಸುವ ಕೆಲಸ ಮಾಡಿದ್ದಾರೆ ಉಗ್ರವಾದ ಹೋರಾಟ ಮಾಡಲು ಸಿದ್ದರಿದ್ದೇವೆ ಎಂದು ಮುರುಗೇಶ್ ನಿರಾಣಿ ಹೇಳಿದ್ದಾರೆ.

ಕೇಂದ್ರದಿಂದ ಕಡಿಮೆ ಬರಪರಿಹಾರ ಬಿಡುಗಡೆ: ಕಾಂಗ್ರೆಸ್ ಪ್ರತಿಭಟನೆ

ಪ್ರಜ್ವಲ್ ಪೆಂಡ್ರೈವ್ ಕೇಸ್: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ಕಸಬ್ ವಿರುದ್ಧ ವಾದ ಮಂಡಿಸಿದ್ದ ವಕೀಲರಿಗೆ ಬಿಜೆಪಿ ಟಿಕೇಟ್

- Advertisement -

Latest Posts

Don't Miss