Political News: ಇಂದು ಸಿಎಂ ಸಿದ್ದರಾಮಯ್ಯ ಉಡುಪಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ಅಭಿವೃದ್ಧಿ ಕಾಮಾಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮಾಡಿದರು.
ಈ ವೇಳೆ ಮಾತನಾಡಿದ ಸಿಎಂ, ಬೆಲೆ ಏರಿಕೆಯಿಂದ ಕಷ್ಟದಲ್ಲಿರುವ ಜನರಿಗೆ ಆರ್ಥಿಕ ಬಲ ನೀಡಲು ಗ್ಯಾರಂಟಿಗಳನ್ನು ನೀಡುವ ಮೂಲಕ ಬಡವರ ಪರ ಕೆಲಸ ಮಾಡುವುದು ನಮ್ಮ ಸರ್ಕಾರದ ಗುರಿ. 2023 ರ ಜೂನ್ 11 ಕ್ಕೆ ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಉಡುಪಿ ಜಿಲ್ಲೆಯಲ್ಲಿ 87 ಲಕ್ಷ ಮಹಿಳೆಯರು 33 ಕೋಟಿ ರೂ.ಗಳ ವೆಚ್ಚದಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ ಎಂದರು.
ಗೃಹಜ್ಯೋತಿ ಯೋಜನೆಯಡಿ 3,11,652 ಜನ ಲಾಭ ಪಡೆಯುತ್ತಿದ್ದು, ಇದಕ್ಕಾಗಿ 114 ಕೋಟಿ ರೂ. ವ್ಯಯಿಸಲಾಗುತ್ತಿದೆ. ಅನ್ನಭಾಗ್ಯ 7,66,000 ಜನರಿಗೆ ಉಚಿತ ಅಕ್ಕಿ ನೀಡಲಾಗುತ್ತಿದೆ. ರಾಜ್ಯದ ಬಡವರಿಗೆ ಅಕ್ಕಿ ನೀಡಲು ನಿರಾಕರಿಸಿದ ಕೇಂದ್ರ ಬಿಜೆಪಿ ಸರ್ಕಾರ ಎಂದಿಗೂ ಸಾಮಾಜಿಕ ನ್ಯಾಯದ ಪರವಾಗಿ ಇಲ್ಲ. ಕಾಂಗ್ರೆಸ್ ಪಕ್ಷ ಮಾತ್ರ ಬಡವರ ಪರ ಕೆಲಸ ಮಾಡುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಮೂಲಕ ರಾಜ್ಯದ ಪ್ರತಿ ಕುಟುಂಬಕ್ಕೆ ತಿಂಗಳಿಗೆ 4 ರಿಂದ 5 ಸಾವಿರ ರೂ. ನಮ್ಮ ಸರ್ಕಾರ ನೀಡುತ್ತಿದೆ ಎಂದು ಸಿಎಂ ಹೇಳಿದ್ದಾರೆ.
ಬಿಜೆಪಿ ಪಕ್ಷದವರು ಗ್ಯಾರಂಟಿಗಳ ಬಗ್ಗೆ ಜನರಲ್ಲಿ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಗ್ಯಾರಂಟಿಗಳು ಎಲ್ಲರಿಗೂ ತಲುಪಬೇಕೆಂಬ ಉದ್ದೇಶದಿಂದ ಅನುಷ್ಠಾನ ಸಮಿತಿಗಳನ್ನು ರಚಿಸಿದ್ದೇವೆ. ಗ್ಯಾರಂಟಿಗಳಿಂದಾಗಿ ಅಭಿವೃದ್ಧಿಗೆ ದುಡ್ಡು ಇರಿಸಲು ಸಾಧ್ಯವಿಲ್ಲ ಎಂಬ ಟೀಕೆ ಬಂದಿತು. ಪ್ರಧಾನಿಯವರು ಗ್ಯಾರಂಟಿಗಳಿಂದ ರಾಜ್ಯದಲ್ಲಿ ಆರ್ಥಿಕ ದಿವಾಳಿಯಾಗುತ್ತದೆ ಎಂದು ನುಡಿದಿದ್ದರು. ಆದರೆ ಈ ವರ್ಷ ₹ 36 ಸಾವಿರ ಕೋಟಿ ಹಾಗೂ ಮುಂದಿ ವರ್ಷ 52,009 ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗೆ ಬಜೆಟ್ ನಲ್ಲಿ ನಿಗದಿಪಡಿಸಿದ್ದರೂ, ಅಭಿವೃದ್ಧಿ ಕಾರ್ಯಗಳನ್ನೂ ಕೈಗೊಳ್ಳಲಾಗುತ್ತಿದೆ. ಅಭಿವೃದ್ಧಿಗೆ 1.20 ಲಕ್ಷ ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಇಡಲಾಗಿದೆ.
"ರಾಜ್ಯದ ಜನ ಬಿಜೆಪಿ ಗೋಬ್ಯಾಕ್ ಎನ್ನಬೇಕು"@narendramodi ಅವರು ದೇಶದ ಎಲ್ಲ ಜನರ ಖಾತೆಗೆ ಹಣ ಹಾಕುವುದಾಗಿ ಹಾಗೂ ಉದ್ಯೋಗ ನೀಡುವುದಾಗಿ ಸುಳ್ಳು ಹೇಳಿದ್ದಾರೆ.
ಮೋದಿಯವರು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟಿಸಿದರೆ, ಅಂದು ರಾಜ್ಯದಲ್ಲಿ ನಾನು ಆಂಜನೇಯ ದೇಗುಲವನ್ನು ಉದ್ಘಾಟಿಸಿದೆ.ಇಲ್ಲಿನ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗಾಗಿ… pic.twitter.com/mDRIDiGzwQ
— Siddaramaiah (@siddaramaiah) March 13, 2024
ಯುವರಾಜರೇ ರಾಜರಾಗಿರಿ ಮಂತ್ರಿಯಾಗಬೇಡಿ: ಯದುವೀರ್ ಒಡೆಯರ್ ಅಭಿಮಾನಿಗಳ ಅಭಿಯಾನ
ಸರಕಾರಿ ಕಾರ್ಯಕ್ರಮಕ್ಕೆ ಬರದಿದ್ದರೆ ಗ್ಯಾರಂಟಿ ಯೋಜನೆ ಬಂದ್: ಅಂಗನವಾಡಿ ಕಾರ್ಯಕರ್ತೆಯ ‘ಗ್ಯಾರಂಟಿ’ ಬೆದರಿಕೆ




