Political News: ಮೈಸೂರಿನಲ್ಲಿ ಕಾಂಗ್ರೆಸ್ ಸಭೆ ನಡೆದಿದ್ದು, ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳ ಸ್ವಾರ್ಥ ರಾಜಕಾರಣದಿಂದ ನೊಂದು ಪಕ್ಷ ತ್ಯಜಿಸಿರುವ ಹಲವು ಮುಖಂಡರುಗಳನ್ನು ಇಂದು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡು ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.
ಕರ್ನಾಟಕದಲ್ಲಿ ಸೋಲಿನ ಭಯದಿಂದ ಬಿಜೆಪಿ-ಜೆಡಿಎಸ್ ಒಂದಾಗಿದೆ. ಈ ಅಪವಿತ್ರ ಮೈತ್ರಿಯನ್ನು ನಾಡಿನ ಜನತೆ ತಿರಸ್ಕರಿಸಬೇಕು. ಕಾಂಗ್ರೆಸ್ ಸಿದ್ದಾಂತವನ್ನು ಒಪ್ಪಿ ಯಾವುದೇ ಷರತ್ತು ವಿಧಿಸದೇ ಕಾಂಗ್ರೆಸ್ ಸೇರಿದವರನ್ನು ಕಾಂಗ್ರೆಸ್ ಸದಾ ಸ್ವಾಗತಿಸುತ್ತದೆ. ಸ್ಥಾನಮಾನಕ್ಕಾಗಿ ಅಲ್ಲದೇ ಬಿಜೆಪಿಯಲ್ಲಿ ಗೌರವಯುತವಾಗಿ ನಡೆಸಿಕೊಳ್ಳಲಿಲ್ಲ ಹಾಗೂ ಕಾಂಗ್ರೆಸ್ ಪಕ್ಷ ಬಡವರ ಪರವಾಗಿದೆ ಎಂಬ ಕಾರಣಕ್ಕಾಗಿ ಹಲವರು ಇಂದು ಕಾಂಗ್ರೆಸ್ ಸೇರಿದ್ದಾರೆ. ಅವರೆಲ್ಲರನ್ನೂ ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡಿದ್ದೇನೆ ಎಂದು ಸಿಎಂ ಹೇಳಿದರು.
ರಾಜಕೀಯ, ಸಾಮಾಜಿಕ ಕೇತ್ರದಲ್ಲಿ ಮೂರು ದಶಕಗಳಿಂದ ತೊಡಗಿಸಿಕೊಂಡಿರುವ ರಾಜೀವ್ ಅವರು ಕಾಂಗ್ರೆಸ್ಸಿನ ಕಾರ್ಯಕ್ರಮಗಳನ್ನು ಒಪ್ಪಿಕೊಂಡು ಪಕ್ಷಕ್ಕೆ ಸೇರ್ಪಡೆಯಾಗಿರುವುದು ಒಳ್ಳೆಯ ಬೆಳವಣಿಗೆ ಹಾಗೂ ಪಕ್ಷದ ಸಿದ್ಧಾಂತ ಒಪ್ಪಿ ಬರುವವರನ್ನು ಸೇರ್ಪಡೆ ಮಾಡಿಕೊಳ್ಳುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ರಾಜೀವ್ ಮತ್ತು ಇತರೆ ಎಲ್ಲಾ ಮುಖಂಡರ ಸೇರ್ಪಡೆಯಿಂದಾಗಿ ಶಕ್ತಿ ಬಂದಂತಾಗಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ರಾಜೀವ್ ಅವರು ಸೇರಿರುವುದರಿಂದ ಕೃಷ್ಣರಾಜ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಲಕ್ಷ್ಮಣ್ ಹೆಚ್ಚು ಮತ ಪಡೆಯುವ ವಿಶ್ವಾಸವಿದೆ. ಇಂದು ಸೇರ್ಪಡೆಯಾದವರು ಸೇರಿದಂತೆ ಕಾಂಗ್ರೆಸ್ ನ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಭಿನ್ನಾಭಿಪ್ರಾಯಗಳನ್ನು ಮರೆತು ಕಾಂಗ್ರೆಸ್ ಪಕ್ಷ ಗೆಲ್ಲಿಸಬೇಕೆಂಬ ಗುರಿಯೊಂದಿಗೆ ಕೆಲಸ ಮಾಡಬೇಕು. ಈ ಕ್ಷೇತ್ರದಲ್ಲಿ ಬಡವರಿದ್ದಾರೆ. ಯಾವುದೇ ಜಾತಿ, ಧರ್ಮ ಅಥವಾ ಪಕ್ಷದ ಆಧಾರದ ಮೇಲೆ ಕಾಂಗ್ರೆಸ್ ಬಡವರನ್ನು ಕಡೆಗಣಿಸಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿಯವರು “ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಎಂದು ಹೇಳುತ್ತಾರೆ. ಬುರ್ಖಾ, ಗಡ್ಡ, ಶಿಲುಬೆ ಹಾಕಿದವರು ಬರಬಾರದು ಎನ್ನುತ್ತಾರೆ. ಇದು ಯಾವ ರೀತಿಯ ಸಬ್ ಕಾ ಸಾಥ್? ಸುಳ್ಳು ಬಿಜೆಪಿಯ ಮನೆದೇವರು. 15 ಲಕ್ಷ ಪ್ರತಿ ಕುಟುಂಬದ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದಿದ್ದರು. ಅಚ್ಚೇ ದಿನ್ ಬರುತ್ತದೆ ಎಂದರು, ಬಂತೇ? ಗ್ಯಾಸ್, ಗೊಬ್ಬರದ ಬೆಲೆ ಏರಿಸಿದರು. ರೂಪಾಯಿ ಮೌಲ್ಯ ಪಾತಾಳಕ್ಕೆ ಕುಸಿದಿದೆ. ನರೇಂದ್ರ ಮೋದಿಯವರು ಪ್ರಧಾನಿಯಾಗಿ ಜನಸಾಮಾನ್ಯರ ಬದುಕಿಗೆ ಅನುಕೂಲವಾಗುವಂತೆ ಏನೂ ಮಾಡಿಲ್ಲ. ರೈತರ ಆದಾಯ ದುಪ್ಪಟ್ಟು ಮಾಡುತ್ತೇನೆ, ಭಾರತದ ಆರ್ಥಿಕತೆಯನ್ನು 5 ಟ್ರಿಲಿಯನ್ ಡಾಲರ್ ಗೆ ಕೊಂಡೊಯ್ಯುತ್ತೇನೆ ಎಂದರು. ಆಗಿದೆಯೇ? ಯುವಕರಿಗೆ ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದವರಿಗೆ ಇಂದಿನವರೆಗೆ ಮಾಡಲಾಗಿಲ್ಲ. ನರೇಂದ್ರ ಮೋದಿಯವರು ನುಡಿದಂತೆ ನಡೆದಿಲ್ಲ. ಇಷ್ಟೆಲ್ಲಾ ಅನ್ಯಾಯ ಮಾಡಿದ ಬಿಜೆಪಿಗೆ ಯಾಕೆ ಮತ ಹಾಕಬೇಕು? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
ನಮ್ಮ ಕಾರ್ಯಕರ್ತರಿಗೆ ನಾವು ಮಾಡಿರುವ ಕೆಲಸವನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕು ಎಂದು ಹೇಳಿದ್ದೇನೆ. ಹಿಂದಿನ ಬಾರಿ ನಮ್ಮ ಸರ್ಕಾರ 168 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿತ್ತು. ಹಾಗಾಗಿ ನುಡಿದಂತೆ ನಡೆದಿದ್ದೇವೆ ಎಂದು ಹೆಮ್ಮೆಯಿಂದ ಹೇಳುತ್ತೇವೆ. ನಾವು ಹಣ ಕೇಳುತ್ತಿರುವುದು ಗ್ಯಾರಂಟಿಗಳಿಗೆ ಎಂದು ನಿರ್ಮಲಾ ಸೀತಾರಾಮನ್ ಹೇಳುತ್ತಾರೆ. ಈ ಬಗ್ಗೆ ಒಂದೇ ವೇದಿಕೆಯಲ್ಲಿ ಚರ್ಚೆ ಮಾಡಲು ಬಿಜೆಪಿಯವರಿಗೆ ನಾವು ಆಹ್ವಾನ ನೀಡಿದ್ದೇವೆ. ಗ್ಯಾರಂಟಿಗಳಿಗೆ ಒಂದು ಪೈಸೆಯನ್ನೂ ಕೊಡಬೇಡಿ. ಮುಂದಿನ ವರ್ಷದಲ್ಲಿ ಗ್ಯಾರಂಟಿ ಯೋಜನೆಗಳಿಗೆ 52,009 ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಮೀಸಲಿರಿಸಲಾಗಿದೆ ಎಂದು ಸಿಎಂ ಹೇಳಿದ್ದಾರೆ.
2023-24 ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.ಗಳನ್ನು ಕೊಡುತ್ತೇವೆ ಎಂದಿದ್ದರು, ಒಂದೇ ಒಂದು ಪೈಸೆ ಬಂದಿಲ್ಲ. ಬಜೆಟ್ ನಲ್ಲಿ ಘೋಷಿಸಿದಂತೆ ಹಣ ಕೊಟ್ಟಿದ್ದೇವೆ ಎಂದು ದೇವರ ಮೇಲೆ ಪ್ರಮಾಣ ಮಾಡಿ ಹೇಳಲಿ. 18,171 ಕೋಟಿ ರೂ.ಗಳ ಬರಪರಿಹಾರವನ್ನು ಕೊಡಲು ಮನವಿ ಮಾಡಿ 5 ತಿಂಗಳಾಗಿದ್ದರೂ ಒಂದು ರೂಪಾಯಿ ನೀಡಿಲ್ಲ. ರೈತರು ಕಷ್ಟದಲ್ಲಿದ್ದರೂ ಈವರೆಗೆ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ಇದು ಸತ್ಯ. ಬಿಜೆಪಿ ಕರ್ನಾಟಕದ ಜನರನ್ನು ಅತ್ಯಂತ ಅಲಕ್ಷ್ಯದಿಂದ ಕಾಣುತ್ತಿದ್ದು, ಮಲತಾಯಿ ಧೋರಣೆ ತೋರುತ್ತಿದ್ದಾರೆ ಎಂದು ಸಿಎಎಂ ಅಸಮಾಧಾನ ಹೊರಹಾಕಿದ್ದಾರೆ.
15ನೇ ಹಣಕಾಸಿನ ಆಯೋಗವು ನಮಗೆ ₹5,495 ಕೋಟಿ ವಿಶೇಷ ಅನುದಾನ ಶಿಫಾರಸು ಮಾಡಿತ್ತು, ಇದೂ ಸೇರಿ ಕೆರೆಗಳ ಅಭಿವೃದ್ಧಿ ಹಾಗೂ ಪೆರಿಫೆರಲ್ ರಿಂಗ್ ರಸ್ತೆಗೆ ಬರಬೇಕಿದ್ದ ಒಟ್ಟು 11,495 ಕೋಟಿ ರೂ.ಗಳ ಪೈಕಿ ಒಂದು ರೂಪಾಯಿ ನೀಡದೆ ನಿರ್ಮಲಾ ಸೀತಾರಾಮನ್ ಸುಳ್ಳು ಹೇಳುತ್ತಿದ್ದಾರೆ. ಅವರ ತಾಳಕ್ಕೆ ಕುಣಿಯುವ ಬಿಜೆಪಿ ಅವರದ್ದು 7 ಕೋಟಿ ಕನ್ನಡಿಗರಿಗೆ ಮಾಡುತ್ತಿರುವ ದ್ರೋಹವಾಗಿದೆ. ಅದಕ್ಕಾಗಿಯೇ ನಾವು ಸರ್ವೊಚ್ಛ ನ್ಯಾಯಾಲಯಕ್ಕೆ ಹೋಗಿದ್ದೇವೆ. ಬರ ಸಮೀಕ್ಷೆ ವರದಿ ನೀಡಿ ಒಂದು ತಿಂಗಳೊಳಗೆ ಪರಿಹಾರ ಕೊಡಬೇಕೆಂದು ಕಾನೂನಿನಲ್ಲಿದೆ, ಆದರೂ ನಮಗೆ ಪರಿಹಾರ ನೀಡಿಲ್ಲ. ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿರುವ ಬಿಜೆಪಿಗೆ ಮತ ಹಾಕಬೇಕೆ ಎಂದು ನಿಮ್ಮ ಆತ್ಮಸಾಕ್ಷಿಯನ್ನು ಕೇಳಿ. ತುಟಿ ಬಿಚ್ಚದ ಬಿಜೆಪಿ ಸಂಸದರದ್ದು ಬರೀ ಪ್ರಲಾಪ. ಮಕ್ಕಳ ಆಸ್ಪತ್ರೆ, ಮೈಸೂರು ಜಿಲ್ಲಾ ಆಸ್ಪತ್ರೆ, ಮೈಸೂರು- ಬೆಂಗಳೂರು ಕಾರಿಡಾರ್, ಕಾಲೇಜು, ಹಾಸ್ಟೆಲ್, ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಿಸಿದ್ದು ನಾವು. ಮೈಸೂರಿಗೆ ಬಿಜೆಪಿಯವರು ಏನೂ ಮಾಡಿಲ್ಲ ಎಂದು ಸಿಎಂ ಆಕ್ರೋಶ ಹೊರಹಾಕಿದ್ದಾರೆ.
ಜಿಡಿಎಸ್ ಅಂದರೆ ಜಾತ್ಯಾತೀತ ಜನತಾದಳ. ಜನತಾದಳ ಇಂದು ಜಾತ್ಯಾತೀತವಾಗಿ ಉಳಿದಿದೆಯೇ? ನರೇಂದ್ರ ಮೋದಿ ಪ್ರಧಾನಿಯಾದರೆ ದೇಶವನ್ನೇ ಬಿಟ್ಟು ಹೋಗುತ್ತೇನೆ, ನಾನು ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟುತ್ತೇನೆ ಎಂದಿದ್ದ ಮಾಜಿ ಪ್ರಧಾನಿ ದೇವೇಗೌಡರ ಅನುಕೂಲಸಿಂಧು ರಾಜಕಾರಣ ಎಲ್ಲಿಯವರೆಗೆ ನಡೆಯುತ್ತದೆ? ಮೇಕೆದಾಟು ಯೋಜನೆಯನ್ನು ಎನ್ಡಿಎ ಮೂಲಕ ಮಾಡಿಸುವುದಾಗಿ ಹೇಳುತ್ತಾರೆ. ಬಿಜೆಪಿ ಕಡೆಯಿಂದ ಯಾಕೆ ಮಾಡಿಸಲಿಲ್ಲ? ಮೈಸೂರು, ಚಾಮರಾಜನಗರ ಕ್ಷೇತ್ರಕ್ಕೆ ಬಿಜೆಪಿಯವರ ಕೊಡುಗೆಗಳೇನು? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಜೆಡಿಎಸ್ ಹಾಗೂ @BJP4India ಪಕ್ಷಗಳ ಸ್ವಾರ್ಥ ರಾಜಕಾರಣದಿಂದ ನೊಂದು ಪಕ್ಷ ತ್ಯಜಿಸಿರುವ ಹಲವು ಮುಖಂಡರುಗಳನ್ನು ಇಂದು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದೆ.
ಕರ್ನಾಟಕದಲ್ಲಿ ಸೋಲಿನ ಭಯದಿಂದ @BJP4Karnataka -ಜೆಡಿಎಸ್ ಒಂದಾಗಿದೆ. ಈ ಅಪವಿತ್ರ ಮೈತ್ರಿಯನ್ನು ನಾಡಿನ ಜನತೆ ತಿರಸ್ಕರಿಸಬೇಕು.
ಕಾಂಗ್ರೆಸ್ ಸಿದ್ದಾಂತವನ್ನು ಒಪ್ಪಿ… pic.twitter.com/Yd9WkyWhpm— Siddaramaiah (@siddaramaiah) March 27, 2024
ರಾಜಕೀಯ, ಸಾಮಾಜಿಕ ಕೇತ್ರದಲ್ಲಿ ಮೂರು ದಶಕಗಳಿಂದ ತೊಡಗಿಸಿಕೊಂಡಿರುವ ರಾಜೀವ್ ಅವರು ಕಾಂಗ್ರೆಸ್ಸಿನ ಕಾರ್ಯಕ್ರಮಗಳನ್ನು ಒಪ್ಪಿಕೊಂಡು ಪಕ್ಷಕ್ಕೆ ಸೇರ್ಪಡೆಯಾಗಿರುವುದು ಒಳ್ಳೆಯ ಬೆಳವಣಿಗೆ ಹಾಗೂ ಪಕ್ಷದ ಸಿದ್ಧಾಂತ ಒಪ್ಪಿ ಬರುವವರನ್ನು ಸೇರ್ಪಡೆ ಮಾಡಿಕೊಳ್ಳುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ.
ಕಾಂಗ್ರೆಸ್ ಪಕ್ಷಕ್ಕೆ ರಾಜೀವ್…
— Siddaramaiah (@siddaramaiah) March 27, 2024
ಬಿಜೆಪಿಯವರು "ಸಬ್ ಕಾ ಸಾಥ್ ಸಬ್ ಕಾ ವಿಕಾಸ್" ಎಂದು ಹೇಳುತ್ತಾರೆ. ಬುರ್ಖಾ, ಗಡ್ಡ, ಶಿಲುಬೆ ಹಾಕಿದವರು ಬರಬಾರದು ಎನ್ನುತ್ತಾರೆ. ಇದು ಯಾವ ರೀತಿಯ ಸಬ್ ಕಾ ಸಾಥ್? ಸುಳ್ಳು @BJP4India ಯ ಮನೆದೇವರು. 15 ಲಕ್ಷ ಪ್ರತಿ ಕುಟುಂಬದ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದಿದ್ದರು. ಅಚ್ಚೇ ದಿನ್ ಬರುತ್ತದೆ ಎಂದರು, ಬಂತೇ? ಗ್ಯಾಸ್, ಗೊಬ್ಬರದ ಬೆಲೆ…
— Siddaramaiah (@siddaramaiah) March 27, 2024
15ನೇ ಹಣಕಾಸಿನ ಆಯೋಗವು ನಮಗೆ ₹5,495 ಕೋಟಿ ವಿಶೇಷ ಅನುದಾನ ಶಿಫಾರಸು ಮಾಡಿತ್ತು, ಇದೂ ಸೇರಿ ಕೆರೆಗಳ ಅಭಿವೃದ್ಧಿ ಹಾಗೂ ಪೆರಿಫೆರಲ್ ರಿಂಗ್ ರಸ್ತೆಗೆ ಬರಬೇಕಿದ್ದ ಒಟ್ಟು 11,495 ಕೋಟಿ ರೂ.ಗಳ ಪೈಕಿ ಒಂದು ರೂಪಾಯಿ ನೀಡದೆ @nsitharaman ಸುಳ್ಳು ಹೇಳುತ್ತಿದ್ದಾರೆ. ಅವರ ತಾಳಕ್ಕೆ ಕುಣಿಯುವ @BJP4Karnataka ಅವರದ್ದು 7 ಕೋಟಿ ಕನ್ನಡಿಗರಿಗೆ…
— Siddaramaiah (@siddaramaiah) March 27, 2024
ಜಿಡಿಎಸ್ ಅಂದರೆ ಜಾತ್ಯಾತೀತ ಜನತಾದಳ. ಜನತಾದಳ ಇಂದು ಜಾತ್ಯಾತೀತವಾಗಿ ಉಳಿದಿದೆಯೇ? @narendramodi ಪ್ರಧಾನಿಯಾದರೆ ದೇಶವನ್ನೇ ಬಿಟ್ಟು ಹೋಗುತ್ತೇನೆ, ನಾನು ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟುತ್ತೇನೆ ಎಂದಿದ್ದ ಮಾಜಿ ಪ್ರಧಾನಿ ದೇವೇಗೌಡರ ಅನುಕೂಲಸಿಂಧು ರಾಜಕಾರಣ ಎಲ್ಲಿಯವರೆಗೆ ನಡೆಯುತ್ತದೆ? ಮೇಕೆದಾಟು ಯೋಜನೆಯನ್ನು ಎನ್ಡಿಎ ಮೂಲಕ…
— Siddaramaiah (@siddaramaiah) March 27, 2024
ಹುಟ್ಟುಹಬ್ಬದ ದಿನ ಪತ್ನಿ, ಮಗುವಿನೊಂದಿಗೆ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ ನಟ ರಾಮ್ ಚರಣ್
ಈ ಸವಾಲು ಸ್ವೀಕರಿಸುವ ದಮ್ಮು ತಾಕತ್ತು ನಿಮಗಿದೆಯಾ?: ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಬೆಳಗಾವಿಯಲ್ಲಿ ಶೆಟ್ಟರ್ ಪರ ಮಾಜಿ ಸಿಎಂ ಯಡಿಯೂರಪ್ಪ ಭರ್ಜರಿ ಕ್ಯಾಂಪೇನ್