ದೀಪಾವಳಿಗೆ ಹಸಿರು ಪಟಾಕಿಗೆ ಮಾತ್ರ ಅವಕಾಶ..!

www.karnatakatv.net: ಹಿಂದು ಹಬ್ಬದಲ್ಲೊಂದಾದ ದೀಪಾವಳಿ ಇನ್ನೇನು ಕೆಲವೇ ದಿನಗಳಲ್ಲಿ ಶುರುವಾಗಲಿದ್ದು ಅದರ ಹಿನ್ನೆಲೇಯಲ್ಲಿ ಕರ್ನಾಟಕ ಸರ್ಕಾರ ಗೈಡ್ ಲೈನ್ಸ್ ಬಿಡುಗಡೆ ಮಾಡಿದೆ.

ದೀಪಾವಳಿಯ ಸಮಯದಲ್ಲಿ ಹಸಿರು ಪಟಾಕಿ ಮಾತ್ರ ಅವಕಾಶ ವಿದ್ದು, ಬೇರೆ ಯಾಔಉದೇ ಪಟಾಕಿ ಮಾರಾಟ ಮಾಡುವಂತಿಲ್ಲ ಎಂದು ಕರ್ನಾಟಕ ಸರ್ಕಾರ ತಿಳಿಸಿದೆ. ನ.1 ರಿಂದ 10 ರವರೆಗೆ ಪಟಾಕಿ ಮಾರಾಟಕ್ಕೆ ಅವಕಾಶ ಇದ್ದು, ಅನುಮತಿಯನ್ನು ಪಡೆದವರು ಮಾತ್ರ ಪಟಾಕಿ ಮಾರಾಟ ಮಾಡಬೇಕು ಎಂದು ರಾಜ್ಯ ಸರ್ಕಾರದಿಂದ ದೀಪಾವಳಿಗೆ ಗೈಡ್‌ಲೈನ್ಸ್ ಬಿಡುಗಡೆ ಮಾಡಲಾಗಿದೆ. ಹಸಿರು ಪಟಾಕಿಯನ್ನ ಮಾರಾಟ ಮಾಡಲು ಮತ್ತು ಹಚ್ಚಲು ಅವಕಾಶ ನೀಡಲಾಗಿದೆ. ಬೇರೆ ಯಾವುದೇ ಪಟಾಕಿಯನ್ನು ಮಾರಾಟ ಮಾಡುವಂತಿಲ್ಲ. ಅಷ್ಟೇ ಅಲ್ಲದೆ, ನ.1ರಿಂದ 10 ನೇ ತಾರೀಕಿನವರೆಗೆ ಮಾತ್ರ ಹಸಿರು ಪಟಾಕಿ ಮಳಿಗೆ ತೆರೆಯಲು ಅವಕಾಶ ನೀಡಲಾಗಿದೆ.

About The Author