- Advertisement -
ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ 10ನೇ ಕಂತನ್ನು ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಡಿ ದೇಶದ 10 ಕೋಟಿ ರೈತರ ಬ್ಯಾಂಕ್ ಖಾತೆಗೆ 2 ಸಾವಿರ ರೂ.ಜಮೆಯಾಗಿದೆ. 10ನೇ ಕಂತಿನಡಿ ಹಣ ಪಡೆಯಲು ಅನೇಕ ರೈತರು ಕಾಯುತ್ತಿದ್ದರು. ಅವರಿಗೆ ಹೊಸವರ್ಷದ ಮೊದಲ ದಿನವೇ ಪ್ರಧಾನಿ ಮೋದಿ ಶುಭ ಸಮಾಚಾರ ನೀಡಿದ್ದಾರೆ. ಇಂದು ಕಿಸಾನ್ ಸಮ್ಮಾನ್ ಯೋಜನೆಯ 10ನೇ ಕಂತನ್ನು ಮಾತ್ರವಲ್ಲದೆ, ಪ್ರಧಾನಿ ಮೋದಿ, 351 ರೈತ ಉತ್ಪಾದನಾ ಸಂಸ್ಥೆಗಳಿಗೆ 14 ಕೋಟಿ ರೂಪಾಯಿ ಇಕ್ವಿಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ಇದರಿಂದ ಸುಮಾರು 1.24 ಲಕ್ಷ ರೈತರಿಗೆ ಅನುಕೂಲವಾಗಿದೆ. ಪ್ರಧಾನ ಮಂತ್ರಿ ಕಿಸಾನ್ ನಿಧಿ ಯೋಜನೆಯಡಿ ಕೇಂದ್ರ ಸರ್ಕಾರ ವರ್ಷಕ್ಕೆ 6000 ರೂ. ಹಣವನ್ನು ಅರ್ಹ ಫಲಾನುಭವಿ ರೈತರ ಖಾತೆಗೆ ಜಮಾ ಮಾಡುತ್ತದೆ. ಅದರ 9 ಕಂತುಗಳಷ್ಟನ್ನು ರೈತರು ಇದುವರೆಗೆ ಸ್ವೀಕರಿಸಿದ್ದರು.
- Advertisement -