- Advertisement -
ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಇಂದು ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಆಶೀಶ್ ಪಾಂಡೆ ಮತ್ತು ಲವಕುಶ್ ಅಂತ ಗುರುತಿಸಲಾಗಿದೆ. ಬಂಧಿತರಿಬ್ಬರೂ ಹಿಂಸಾಚಾರ ನಡೆದ ದಿನ ರೈತರ ಮೇಲೆ ಹರಿದ ಬೆಂಗಾವಲು ವಾಹನದಲ್ಲಿದ್ದರು ಅಂತ ಲಖಿಂಪುರ್ ಖೇರಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಅಲ್ಲದೆ ಈ ಇಬ್ಬರೂ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶೀಶ್ ಮಿಶ್ರಾ ಆಪ್ತರು ಅಂತ ಹೇಳಲಾಗಿದೆ. ಸದ್ಯ ಪೊಲೀಸರು ಬಂಧಿತರ ವಿಚಾರಣೆ ನಡೆಸುತ್ತಿದ್ದು, ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶೀಶ್ ಮಿಶ್ರಾ ಇನ್ನೂ ನಾಪತ್ತೆಯಾಗಿದ್ದಾರೆ.ಪ್ರಕರಣದ ಪ್ರಮುಖ ಆರೋಪಿಯಾಗಿರೋ ಆಶೀಶ್ ಮಿಶ್ರಾ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.
- Advertisement -