Sunday, September 8, 2024

Latest Posts

ಪ್ರಚಾರದ ವೇಳೆ ಹಣ ಎಸೆದ ಪ್ರಕರಣ

- Advertisement -

political news:

ಪ್ರಜಾಧ್ವನಿ ಯಾತ್ರೆ ವೇಳೆ ಕಲಾವಿದರ ಮೇಲೆ 500 ರೂಪಾಯಿ ನೋಟಿನ ಕಂತೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಡಿಕೆ ಶಿವಕುಮಾರ್​​ ವಿರುದ್ಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 1860 u/s 17 E ಆರ್​ಪಿ ಆಕ್ಟ್ ಪ್ರಕಾರ ಎಫ್​ಐಆರ್​ ದಾಖಲಾಗಿದೆ. ಚುನಾವಣಾ ಸೆಕ್ಟರ್ ಅಧಿಕಾರಿಯಿಂದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರು ದಾಖಲಲಾಗಿತ್ತು. ಪ್ರಕರಣದ ತನಿಖೆ ನಡೆಸುವಂತೆ ನ್ಯಾಯಾಲಯ ಆದೇಶಿಸಿದ್ದು, ಅದರಂತೆ ಮಂಡ್ಯ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾರ್ಚ್ 28ರಂದು ಶ್ರೀರಂಗಪಟ್ಟಣ ವಿಧಾನಸಭೆ ಕ್ಷೇತ್ರದ ಬೇವಿನಹಳ್ಳಿ ಗ್ರಾಮದಲ್ಲಿ ಪ್ರಜಾಧ್ವನಿ ಯಾತ್ರೆ ಕೈಗೊಂಡಿದ್ದರು. ಆ ವೇಳೆ ಬಸ್​ ಮೇಲಿಂದ ಕಲಾವಿದರತ್ತ 500 ರೂ. ನೋಟುಗಳನ್ನು ಎಸೆದಿದ್ದರು.

ಅರುಣ್ ಸಿಂಗ್​ ಹೆಸರಿನಲ್ಲಿ ಕಿಡಿಗೇಡಿಗಳು ಅಭ್ಯರ್ಥಿಗಳ ನಕಲಿ ಪಟ್ಟಿ ಬಿಡುಗಡೆ…!

ಮತದಾರರಿಗಾಗಿ ತಂದಿದ್ದ ಸೀರೆಗಳನ್ನು ವಶಪಡಿಸಿಕೊಂಡ ಪೊಲೀಸರು

‘ಸಿದ್ದರಾಮಯ್ಯ ಸಮೀಕ್ಷೆ ಆಧರಿಸಿ ಚುನಾವಣೆ ಸ್ಪರ್ಧಿಸುತ್ತೇನೆ ಎನ್ನುವುದು ದುರಂತ’

- Advertisement -

Latest Posts

Don't Miss